AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಕೇರಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣ; ಪಿಎಫ್‌ಐ ಸ್ಥಳೀಯ ಪದಾಧಿಕಾರಿ ಬಂಧನ

ಕೇರಳದಲ್ಲಿ ಹಾಡುಹಗಲೇ ನಡೆದಿದ್ದ ಆರ್​ಎಸ್​ಎಸ್​ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಿಎಫ್​ಐ ಸಂಘಟನೆಯ ಸ್ಥಳೀಯ ಪದಾಧಿಕಾರಿಯನ್ನು ಬಂಧಿಸಲಾಗಿದೆ.

Kerala: ಕೇರಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣ; ಪಿಎಫ್‌ಐ ಸ್ಥಳೀಯ ಪದಾಧಿಕಾರಿ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 23, 2021 | 2:05 PM

Share

ಪಾಲಕ್ಕಾಡ್: ಪಾಲಕ್ಕಾಡ್‌ನ ಕಿನಾಸ್ಸೆರಿಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್ (27) ಹತ್ಯೆಗೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಳೀಯ ಪದಾಧಿಕಾರಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ವಿಶ್ವನಾಥ್ ಮಾತನಾಡಿ, ‘‘ಬಂಧಿತ ಪಿಎಫ್‌ಐ ಸ್ಥಳೀಯ ಮುಖಂಡ ನೇರವಾಗಿ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಇನ್ನೂ ಇಬ್ಬರು ಯುವಕರು ಪೊಲೀಸರ ವಶದಲ್ಲಿದ್ದಾರೆ’’ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಟ್ಟಾಯಂನ ಮುಂಡಕ್ಕಯಂ ಮೂಲದ ಒಬ್ಬ ಮತ್ತು ಪಾಲಕ್ಕಾಡ್‌ನ ನೆಮ್ಮಾರದ ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರು ಮೊದಲು ಮುಂಡಕ್ಕಯಂನ ಸುಬೈರ್‌ನನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು. ವಿಚಾರಣೆ ನಡೆಸಿದ ನಂತರ ಮುಂಡಕ್ಕಯಂನಲ್ಲಿರುವ ಅವನ ಕೋಣೆಯಲ್ಲಿ ತಂಗಿದ್ದ ಸಲೀಂ ಮತ್ತು ಇಸಾಹಕ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರಲ್ಲಿ ಓರ್ವನ ಹೆಸರನ್ನು ಬಹಿರಂಗಪಡಿಸಲಾಗಿಲ್ಲ. ಈ ಪ್ರಕರಣದಲ್ಲಿ ಇನ್ನೂ ಕೆಲವು ಶಂಕಿತ ವ್ಯಕ್ತಿಗಳನ್ನು ವಿಚಾರಣೆಗೆ ಕರೆದಿರುವ ಪೊಲೀಸರು ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆಯ ಸುಳಿವು ನೀಡಿದ್ದಾರೆ. ಮುಂಡಕ್ಕಯಂನಲ್ಲಿರುವ ಬೇಕರಿಯೊಂದರಲ್ಲಿ ಯುವಕರು ಕೆಲಸ ಮಾಡುತ್ತಿದ್ದರು. ಅವರಲ್ಲಿ ಇಬ್ಬರು ನವೆಂಬರ್ 15 ರ ನಂತರ ನೆಮ್ಮಾರವನ್ನು ತೊರೆದಿದ್ದಾರೆ ಎಂದು ತಿಳಿದುಬಂದಿದೆ.

ಆರ್​ಎಸ್​ಎಸ್​​ ಕಾರ್ಯಕರ್ತ ಸಂಜಿತ್ ಅವರನ್ನು ಹಾಡುಹಗಲಿನಲ್ಲಿ ಅವರ ಹೆಂಡತಿಯ ಎದುರೇ ಹತ್ಯೆ ಮಾಡಲಾಗಿತ್ತು. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಅವರು ಹತ್ಯೆಯ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ. ‘‘ಕಳೆದ ಐದು ವರ್ಷಗಳಲ್ಲಿ ‘ಜಿಹಾದಿ’ ಗುಂಪುಗಳಿಂದ ಕೇರಳದಲ್ಲಿ 10 ಆರ್‌ಎಸ್‌ಎಸ್-ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ರಾಜ್ಯದಲ್ಲಿ ಇದುವರೆಗೆ ಸುಮಾರು 50 ಸಂಘಪರಿವಾರದ ಕಾರ್ಯಕರ್ತರು ಹತ್ಯೆಯಾಗಿದ್ದಾರೆ’’ ಎಂದು ಕೆ.ಸುರೇಂದ್ರನ್ ಗೃಹ ಸಚಿವ ಅಮಿತ್ ಶಾಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:

ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ, ಪ್ಯಾಕೆಟ್ ಒಂದರಲ್ಲಿ 2 ಟೊಮೆಟೋ ಮಾರಾಟ!

ಸೆಂಟ್ರಲ್ ವಿಸ್ಟಾ ಪ್ರಾಜೆಕ್ಟ್ ಸೈಟ್‌ನ ಭೂ ಬಳಕೆಯಲ್ಲಿ ಬದಲಾವಣೆ ಪ್ರಶ್ನಿಸಿದ ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ