AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆಂದೇ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಯ್ತು ಫೈಜರ್.. ಏನಿದರ ಮರ್ಮ?

ಮೈನಸ್​ 70 ಡಿಗ್ರಿ ತಾಪಮಾನದಲ್ಲಿ ಲಸಿಕೆಯನ್ನು ಕಾಪಾಡುವುದು ಕಷ್ಟಕರ ಎಂಬುದನ್ನು ಮನಗಂಡ ಫೈಜರ್ ಭಾರತದಲ್ಲಿ ಬಳಕೆಗೆ ಅನುಕೂಲವಾಗುವಂತೆ ಲಸಿಕೆಯನ್ನು ಮಾರ್ಪಾಡು ಮಾಡಲು ಹೊರಟಿದೆ.

ಭಾರತಕ್ಕೆಂದೇ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಯ್ತು ಫೈಜರ್.. ಏನಿದರ ಮರ್ಮ?
ಸಾಂದರ್ಭಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Dec 10, 2020 | 12:07 PM

Share

ದೆಹಲಿ: ಅಮೆರಿಕಾ ಮೂಲದ ಫೈಜರ್​ ಸಂಸ್ಥೆ ಭಾರತಕ್ಕೆ ಹೊಂದುವಂತಹ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಗಿದೆ. ಸಾಮಾನ್ಯವಾಗಿ ಮೈನಸ್​ 70 ಡಿಗ್ರಿ ತಾಪಮಾನದಲ್ಲಿ ಶೇಖರಿಸಿಡಬೇಕಾದ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಕಾಪಾಡುವುದು ಕಷ್ಟಕರ ಎಂಬುದನ್ನು ಮನಗಂಡ ಫೈಜರ್​ ಈ ವಿಶೇಷ ಕೊರೊನಾ ಲಸಿಕೆ  ತಯಾರಿಕೆ ನಿರ್ಧಾರ ತೆಗೆದುಕೊಂಡಿದೆ.

ಫೈಜರ್​ ಲಸಿಕೆಗೆ ಬ್ರಿಟನ್​ ಮತ್ತು ಬಹ್ರೈನ್​ ದೇಶಗಳಲ್ಲಿ ಈಗಾಗಲೇ ಅನುಮತಿ ಸಿಕ್ಕಿದೆ. ಸದ್ಯ ಭಾರತದ ವಿಶಾಲ ಮಾರುಕಟ್ಟೆಯನ್ನು ಅಧ್ಯಯನ ಮಾಡಿರುವ ಫೈಜರ್​ ಇಲ್ಲಿಗೆ ಕಾಲಿಡಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಆದರೆ, ಭಾರತದಲ್ಲಿ ಅನುಮತಿ ಸಿಕ್ಕರೂ ಲಸಿಕೆಯನ್ನು ಕಾಪಾಡಿಕೊಳ್ಳುವುದು ಸಾಧ್ಯವಿಲ್ಲ.

 ಫೈಜರ್ ಅತ್ಯಂತ ಪರಿಣಾಮಕಾರಿ​ ಲಸಿಕೆ ಈ ಸಮಸ್ಯೆಯನ್ನು ಅರ್ಥೈಸಿಕೊಂಡಿರುವ ಫೈಜರ್​ ಭಾರತದಲ್ಲಿ ಬಳಕೆಗೆ ಅನುಕೂಲವಾಗುವಂತೆ ಲಸಿಕೆಯನ್ನು ಮಾರ್ಪಾಡು ಮಾಡಲು ಹೊರಟಿದೆ. ಅಂದರೆ, ಸಾಧಾರಣ ಫ್ರೀಜರ್​ನಲ್ಲೂ ಲಸಿಕೆಯನ್ನು ಶೇಖರಿಸಲು ಸಾಧ್ಯವಾಗುವಂತೆ ಅಭಿವೃದ್ಧಿಪಡಿಸಲಿದ್ದೇವೆ ಎಂದು ಫೈಜರ್​ ತೀಳಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಕೊರೊನಾ ಲಸಿಕೆಗಳಲ್ಲಿ ಫೈಜರ್ ಅತ್ಯಂತ ಪರಿಣಾಮಕಾರಿ ಎಂದು ತಜ್ಞರು ತಿಳಿಸಿದ್ದಾರೆ. 2 ಡೋಸ್​ ಫೈಜರ್​ ಶೇ. 90ರಷ್ಟು ಪರಿಣಾಮಕಾರಿಯಾಗಿದ್ದು, 1 ಡೋಸ್​ ಶೇ. 67ರಷ್ಟು ಪರಿಣಾಮಕಾರಿ ಎಂದು ಅಧ್ಯಯನಗಳು ತಿಳಿಸಿವೆ.

ಭಾರತದ ಮಾರುಕಟ್ಟೆ ಹಾಗೂ ಇಲ್ಲಿನ ಅವಶ್ಯಕತೆಗಳನ್ನು ಮನಗಂಡು ಈಗಾಗಲೇ ಸಾಲು ಸಾಲು ಕಂಪೆನಿಗಳು ಅನುಮತಿ ಪಡೆಯಲು ತುದಿಗಾಲಲ್ಲಿ ನಿಂತಿವೆ. ಫೈಜರ್​ ಜೊತೆಗೆ ಭಾರತ್​ ಬಯೋಟೆಕ್, ಸೆರಮ್​ ಸಂಸ್ಥೆ, ಜೆನ್ನೋವಾ ಸಹ ಸ್ಪರ್ಧೆಯಲ್ಲಿವೆ.

ಅಲರ್ಜಿ ಸಮಸ್ಯೆ ಉಳ್ಳವರು ಫೈಜರ್​ ತೆಗೆದುಕೊಳ್ಳಬೇಡಿ ಇನ್ನೊಂದೆಡೆ ಬ್ರಿಟನ್​ನಲ್ಲಿ ಅಲರ್ಜಿ ಸಮಸ್ಯೆ ಉಳ್ಳವರು ಸದ್ಯಕ್ಕೆ ಫೈಜರ್​ – ಬಯೋ ಎನ್​ ಟೆಕ್ ಲಸಿಕೆಯನ್ನು ತೆಗೆದುಕೊಳ್ಳದಂತೆ ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಲರ್ಜಿ ಸಮಸ್ಯೆ ಎದುರಿಸುತ್ತಿದ್ದ ಕೆಲವರಲ್ಲಿ ಲಸಿಕೆ ತೆಗೆದುಕೊಂಡ ನಂತರ ಸಮಸ್ಯೆಗಳು ತಲೆದೋರಿದ ಕಾರಣ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ