AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆಂದೇ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಯ್ತು ಫೈಜರ್.. ಏನಿದರ ಮರ್ಮ?

ಮೈನಸ್​ 70 ಡಿಗ್ರಿ ತಾಪಮಾನದಲ್ಲಿ ಲಸಿಕೆಯನ್ನು ಕಾಪಾಡುವುದು ಕಷ್ಟಕರ ಎಂಬುದನ್ನು ಮನಗಂಡ ಫೈಜರ್ ಭಾರತದಲ್ಲಿ ಬಳಕೆಗೆ ಅನುಕೂಲವಾಗುವಂತೆ ಲಸಿಕೆಯನ್ನು ಮಾರ್ಪಾಡು ಮಾಡಲು ಹೊರಟಿದೆ.

ಭಾರತಕ್ಕೆಂದೇ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಯ್ತು ಫೈಜರ್.. ಏನಿದರ ಮರ್ಮ?
ಸಾಂದರ್ಭಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Dec 10, 2020 | 12:07 PM

Share

ದೆಹಲಿ: ಅಮೆರಿಕಾ ಮೂಲದ ಫೈಜರ್​ ಸಂಸ್ಥೆ ಭಾರತಕ್ಕೆ ಹೊಂದುವಂತಹ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಗಿದೆ. ಸಾಮಾನ್ಯವಾಗಿ ಮೈನಸ್​ 70 ಡಿಗ್ರಿ ತಾಪಮಾನದಲ್ಲಿ ಶೇಖರಿಸಿಡಬೇಕಾದ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಕಾಪಾಡುವುದು ಕಷ್ಟಕರ ಎಂಬುದನ್ನು ಮನಗಂಡ ಫೈಜರ್​ ಈ ವಿಶೇಷ ಕೊರೊನಾ ಲಸಿಕೆ  ತಯಾರಿಕೆ ನಿರ್ಧಾರ ತೆಗೆದುಕೊಂಡಿದೆ.

ಫೈಜರ್​ ಲಸಿಕೆಗೆ ಬ್ರಿಟನ್​ ಮತ್ತು ಬಹ್ರೈನ್​ ದೇಶಗಳಲ್ಲಿ ಈಗಾಗಲೇ ಅನುಮತಿ ಸಿಕ್ಕಿದೆ. ಸದ್ಯ ಭಾರತದ ವಿಶಾಲ ಮಾರುಕಟ್ಟೆಯನ್ನು ಅಧ್ಯಯನ ಮಾಡಿರುವ ಫೈಜರ್​ ಇಲ್ಲಿಗೆ ಕಾಲಿಡಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಆದರೆ, ಭಾರತದಲ್ಲಿ ಅನುಮತಿ ಸಿಕ್ಕರೂ ಲಸಿಕೆಯನ್ನು ಕಾಪಾಡಿಕೊಳ್ಳುವುದು ಸಾಧ್ಯವಿಲ್ಲ.

 ಫೈಜರ್ ಅತ್ಯಂತ ಪರಿಣಾಮಕಾರಿ​ ಲಸಿಕೆ ಈ ಸಮಸ್ಯೆಯನ್ನು ಅರ್ಥೈಸಿಕೊಂಡಿರುವ ಫೈಜರ್​ ಭಾರತದಲ್ಲಿ ಬಳಕೆಗೆ ಅನುಕೂಲವಾಗುವಂತೆ ಲಸಿಕೆಯನ್ನು ಮಾರ್ಪಾಡು ಮಾಡಲು ಹೊರಟಿದೆ. ಅಂದರೆ, ಸಾಧಾರಣ ಫ್ರೀಜರ್​ನಲ್ಲೂ ಲಸಿಕೆಯನ್ನು ಶೇಖರಿಸಲು ಸಾಧ್ಯವಾಗುವಂತೆ ಅಭಿವೃದ್ಧಿಪಡಿಸಲಿದ್ದೇವೆ ಎಂದು ಫೈಜರ್​ ತೀಳಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಕೊರೊನಾ ಲಸಿಕೆಗಳಲ್ಲಿ ಫೈಜರ್ ಅತ್ಯಂತ ಪರಿಣಾಮಕಾರಿ ಎಂದು ತಜ್ಞರು ತಿಳಿಸಿದ್ದಾರೆ. 2 ಡೋಸ್​ ಫೈಜರ್​ ಶೇ. 90ರಷ್ಟು ಪರಿಣಾಮಕಾರಿಯಾಗಿದ್ದು, 1 ಡೋಸ್​ ಶೇ. 67ರಷ್ಟು ಪರಿಣಾಮಕಾರಿ ಎಂದು ಅಧ್ಯಯನಗಳು ತಿಳಿಸಿವೆ.

ಭಾರತದ ಮಾರುಕಟ್ಟೆ ಹಾಗೂ ಇಲ್ಲಿನ ಅವಶ್ಯಕತೆಗಳನ್ನು ಮನಗಂಡು ಈಗಾಗಲೇ ಸಾಲು ಸಾಲು ಕಂಪೆನಿಗಳು ಅನುಮತಿ ಪಡೆಯಲು ತುದಿಗಾಲಲ್ಲಿ ನಿಂತಿವೆ. ಫೈಜರ್​ ಜೊತೆಗೆ ಭಾರತ್​ ಬಯೋಟೆಕ್, ಸೆರಮ್​ ಸಂಸ್ಥೆ, ಜೆನ್ನೋವಾ ಸಹ ಸ್ಪರ್ಧೆಯಲ್ಲಿವೆ.

ಅಲರ್ಜಿ ಸಮಸ್ಯೆ ಉಳ್ಳವರು ಫೈಜರ್​ ತೆಗೆದುಕೊಳ್ಳಬೇಡಿ ಇನ್ನೊಂದೆಡೆ ಬ್ರಿಟನ್​ನಲ್ಲಿ ಅಲರ್ಜಿ ಸಮಸ್ಯೆ ಉಳ್ಳವರು ಸದ್ಯಕ್ಕೆ ಫೈಜರ್​ – ಬಯೋ ಎನ್​ ಟೆಕ್ ಲಸಿಕೆಯನ್ನು ತೆಗೆದುಕೊಳ್ಳದಂತೆ ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಲರ್ಜಿ ಸಮಸ್ಯೆ ಎದುರಿಸುತ್ತಿದ್ದ ಕೆಲವರಲ್ಲಿ ಲಸಿಕೆ ತೆಗೆದುಕೊಂಡ ನಂತರ ಸಮಸ್ಯೆಗಳು ತಲೆದೋರಿದ ಕಾರಣ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ

Follow Us
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ