AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆಂದೇ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಯ್ತು ಫೈಜರ್.. ಏನಿದರ ಮರ್ಮ?

ಮೈನಸ್​ 70 ಡಿಗ್ರಿ ತಾಪಮಾನದಲ್ಲಿ ಲಸಿಕೆಯನ್ನು ಕಾಪಾಡುವುದು ಕಷ್ಟಕರ ಎಂಬುದನ್ನು ಮನಗಂಡ ಫೈಜರ್ ಭಾರತದಲ್ಲಿ ಬಳಕೆಗೆ ಅನುಕೂಲವಾಗುವಂತೆ ಲಸಿಕೆಯನ್ನು ಮಾರ್ಪಾಡು ಮಾಡಲು ಹೊರಟಿದೆ.

ಭಾರತಕ್ಕೆಂದೇ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಯ್ತು ಫೈಜರ್.. ಏನಿದರ ಮರ್ಮ?
ಸಾಂದರ್ಭಿಕ ಚಿತ್ರ
Skanda
| Edited By: |

Updated on: Dec 10, 2020 | 12:07 PM

Share

ದೆಹಲಿ: ಅಮೆರಿಕಾ ಮೂಲದ ಫೈಜರ್​ ಸಂಸ್ಥೆ ಭಾರತಕ್ಕೆ ಹೊಂದುವಂತಹ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಗಿದೆ. ಸಾಮಾನ್ಯವಾಗಿ ಮೈನಸ್​ 70 ಡಿಗ್ರಿ ತಾಪಮಾನದಲ್ಲಿ ಶೇಖರಿಸಿಡಬೇಕಾದ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಕಾಪಾಡುವುದು ಕಷ್ಟಕರ ಎಂಬುದನ್ನು ಮನಗಂಡ ಫೈಜರ್​ ಈ ವಿಶೇಷ ಕೊರೊನಾ ಲಸಿಕೆ  ತಯಾರಿಕೆ ನಿರ್ಧಾರ ತೆಗೆದುಕೊಂಡಿದೆ.

ಫೈಜರ್​ ಲಸಿಕೆಗೆ ಬ್ರಿಟನ್​ ಮತ್ತು ಬಹ್ರೈನ್​ ದೇಶಗಳಲ್ಲಿ ಈಗಾಗಲೇ ಅನುಮತಿ ಸಿಕ್ಕಿದೆ. ಸದ್ಯ ಭಾರತದ ವಿಶಾಲ ಮಾರುಕಟ್ಟೆಯನ್ನು ಅಧ್ಯಯನ ಮಾಡಿರುವ ಫೈಜರ್​ ಇಲ್ಲಿಗೆ ಕಾಲಿಡಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಆದರೆ, ಭಾರತದಲ್ಲಿ ಅನುಮತಿ ಸಿಕ್ಕರೂ ಲಸಿಕೆಯನ್ನು ಕಾಪಾಡಿಕೊಳ್ಳುವುದು ಸಾಧ್ಯವಿಲ್ಲ.

 ಫೈಜರ್ ಅತ್ಯಂತ ಪರಿಣಾಮಕಾರಿ​ ಲಸಿಕೆ ಈ ಸಮಸ್ಯೆಯನ್ನು ಅರ್ಥೈಸಿಕೊಂಡಿರುವ ಫೈಜರ್​ ಭಾರತದಲ್ಲಿ ಬಳಕೆಗೆ ಅನುಕೂಲವಾಗುವಂತೆ ಲಸಿಕೆಯನ್ನು ಮಾರ್ಪಾಡು ಮಾಡಲು ಹೊರಟಿದೆ. ಅಂದರೆ, ಸಾಧಾರಣ ಫ್ರೀಜರ್​ನಲ್ಲೂ ಲಸಿಕೆಯನ್ನು ಶೇಖರಿಸಲು ಸಾಧ್ಯವಾಗುವಂತೆ ಅಭಿವೃದ್ಧಿಪಡಿಸಲಿದ್ದೇವೆ ಎಂದು ಫೈಜರ್​ ತೀಳಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಕೊರೊನಾ ಲಸಿಕೆಗಳಲ್ಲಿ ಫೈಜರ್ ಅತ್ಯಂತ ಪರಿಣಾಮಕಾರಿ ಎಂದು ತಜ್ಞರು ತಿಳಿಸಿದ್ದಾರೆ. 2 ಡೋಸ್​ ಫೈಜರ್​ ಶೇ. 90ರಷ್ಟು ಪರಿಣಾಮಕಾರಿಯಾಗಿದ್ದು, 1 ಡೋಸ್​ ಶೇ. 67ರಷ್ಟು ಪರಿಣಾಮಕಾರಿ ಎಂದು ಅಧ್ಯಯನಗಳು ತಿಳಿಸಿವೆ.

ಭಾರತದ ಮಾರುಕಟ್ಟೆ ಹಾಗೂ ಇಲ್ಲಿನ ಅವಶ್ಯಕತೆಗಳನ್ನು ಮನಗಂಡು ಈಗಾಗಲೇ ಸಾಲು ಸಾಲು ಕಂಪೆನಿಗಳು ಅನುಮತಿ ಪಡೆಯಲು ತುದಿಗಾಲಲ್ಲಿ ನಿಂತಿವೆ. ಫೈಜರ್​ ಜೊತೆಗೆ ಭಾರತ್​ ಬಯೋಟೆಕ್, ಸೆರಮ್​ ಸಂಸ್ಥೆ, ಜೆನ್ನೋವಾ ಸಹ ಸ್ಪರ್ಧೆಯಲ್ಲಿವೆ.

ಅಲರ್ಜಿ ಸಮಸ್ಯೆ ಉಳ್ಳವರು ಫೈಜರ್​ ತೆಗೆದುಕೊಳ್ಳಬೇಡಿ ಇನ್ನೊಂದೆಡೆ ಬ್ರಿಟನ್​ನಲ್ಲಿ ಅಲರ್ಜಿ ಸಮಸ್ಯೆ ಉಳ್ಳವರು ಸದ್ಯಕ್ಕೆ ಫೈಜರ್​ – ಬಯೋ ಎನ್​ ಟೆಕ್ ಲಸಿಕೆಯನ್ನು ತೆಗೆದುಕೊಳ್ಳದಂತೆ ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಲರ್ಜಿ ಸಮಸ್ಯೆ ಎದುರಿಸುತ್ತಿದ್ದ ಕೆಲವರಲ್ಲಿ ಲಸಿಕೆ ತೆಗೆದುಕೊಂಡ ನಂತರ ಸಮಸ್ಯೆಗಳು ತಲೆದೋರಿದ ಕಾರಣ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ