AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆಂದೇ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಯ್ತು ಫೈಜರ್.. ಏನಿದರ ಮರ್ಮ?

ಮೈನಸ್​ 70 ಡಿಗ್ರಿ ತಾಪಮಾನದಲ್ಲಿ ಲಸಿಕೆಯನ್ನು ಕಾಪಾಡುವುದು ಕಷ್ಟಕರ ಎಂಬುದನ್ನು ಮನಗಂಡ ಫೈಜರ್ ಭಾರತದಲ್ಲಿ ಬಳಕೆಗೆ ಅನುಕೂಲವಾಗುವಂತೆ ಲಸಿಕೆಯನ್ನು ಮಾರ್ಪಾಡು ಮಾಡಲು ಹೊರಟಿದೆ.

ಭಾರತಕ್ಕೆಂದೇ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಯ್ತು ಫೈಜರ್.. ಏನಿದರ ಮರ್ಮ?
ಸಾಂದರ್ಭಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Dec 10, 2020 | 12:07 PM

ದೆಹಲಿ: ಅಮೆರಿಕಾ ಮೂಲದ ಫೈಜರ್​ ಸಂಸ್ಥೆ ಭಾರತಕ್ಕೆ ಹೊಂದುವಂತಹ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಗಿದೆ. ಸಾಮಾನ್ಯವಾಗಿ ಮೈನಸ್​ 70 ಡಿಗ್ರಿ ತಾಪಮಾನದಲ್ಲಿ ಶೇಖರಿಸಿಡಬೇಕಾದ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಕಾಪಾಡುವುದು ಕಷ್ಟಕರ ಎಂಬುದನ್ನು ಮನಗಂಡ ಫೈಜರ್​ ಈ ವಿಶೇಷ ಕೊರೊನಾ ಲಸಿಕೆ  ತಯಾರಿಕೆ ನಿರ್ಧಾರ ತೆಗೆದುಕೊಂಡಿದೆ.

ಫೈಜರ್​ ಲಸಿಕೆಗೆ ಬ್ರಿಟನ್​ ಮತ್ತು ಬಹ್ರೈನ್​ ದೇಶಗಳಲ್ಲಿ ಈಗಾಗಲೇ ಅನುಮತಿ ಸಿಕ್ಕಿದೆ. ಸದ್ಯ ಭಾರತದ ವಿಶಾಲ ಮಾರುಕಟ್ಟೆಯನ್ನು ಅಧ್ಯಯನ ಮಾಡಿರುವ ಫೈಜರ್​ ಇಲ್ಲಿಗೆ ಕಾಲಿಡಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಆದರೆ, ಭಾರತದಲ್ಲಿ ಅನುಮತಿ ಸಿಕ್ಕರೂ ಲಸಿಕೆಯನ್ನು ಕಾಪಾಡಿಕೊಳ್ಳುವುದು ಸಾಧ್ಯವಿಲ್ಲ.

 ಫೈಜರ್ ಅತ್ಯಂತ ಪರಿಣಾಮಕಾರಿ​ ಲಸಿಕೆ ಈ ಸಮಸ್ಯೆಯನ್ನು ಅರ್ಥೈಸಿಕೊಂಡಿರುವ ಫೈಜರ್​ ಭಾರತದಲ್ಲಿ ಬಳಕೆಗೆ ಅನುಕೂಲವಾಗುವಂತೆ ಲಸಿಕೆಯನ್ನು ಮಾರ್ಪಾಡು ಮಾಡಲು ಹೊರಟಿದೆ. ಅಂದರೆ, ಸಾಧಾರಣ ಫ್ರೀಜರ್​ನಲ್ಲೂ ಲಸಿಕೆಯನ್ನು ಶೇಖರಿಸಲು ಸಾಧ್ಯವಾಗುವಂತೆ ಅಭಿವೃದ್ಧಿಪಡಿಸಲಿದ್ದೇವೆ ಎಂದು ಫೈಜರ್​ ತೀಳಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಕೊರೊನಾ ಲಸಿಕೆಗಳಲ್ಲಿ ಫೈಜರ್ ಅತ್ಯಂತ ಪರಿಣಾಮಕಾರಿ ಎಂದು ತಜ್ಞರು ತಿಳಿಸಿದ್ದಾರೆ. 2 ಡೋಸ್​ ಫೈಜರ್​ ಶೇ. 90ರಷ್ಟು ಪರಿಣಾಮಕಾರಿಯಾಗಿದ್ದು, 1 ಡೋಸ್​ ಶೇ. 67ರಷ್ಟು ಪರಿಣಾಮಕಾರಿ ಎಂದು ಅಧ್ಯಯನಗಳು ತಿಳಿಸಿವೆ.

ಭಾರತದ ಮಾರುಕಟ್ಟೆ ಹಾಗೂ ಇಲ್ಲಿನ ಅವಶ್ಯಕತೆಗಳನ್ನು ಮನಗಂಡು ಈಗಾಗಲೇ ಸಾಲು ಸಾಲು ಕಂಪೆನಿಗಳು ಅನುಮತಿ ಪಡೆಯಲು ತುದಿಗಾಲಲ್ಲಿ ನಿಂತಿವೆ. ಫೈಜರ್​ ಜೊತೆಗೆ ಭಾರತ್​ ಬಯೋಟೆಕ್, ಸೆರಮ್​ ಸಂಸ್ಥೆ, ಜೆನ್ನೋವಾ ಸಹ ಸ್ಪರ್ಧೆಯಲ್ಲಿವೆ.

ಅಲರ್ಜಿ ಸಮಸ್ಯೆ ಉಳ್ಳವರು ಫೈಜರ್​ ತೆಗೆದುಕೊಳ್ಳಬೇಡಿ ಇನ್ನೊಂದೆಡೆ ಬ್ರಿಟನ್​ನಲ್ಲಿ ಅಲರ್ಜಿ ಸಮಸ್ಯೆ ಉಳ್ಳವರು ಸದ್ಯಕ್ಕೆ ಫೈಜರ್​ – ಬಯೋ ಎನ್​ ಟೆಕ್ ಲಸಿಕೆಯನ್ನು ತೆಗೆದುಕೊಳ್ಳದಂತೆ ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಲರ್ಜಿ ಸಮಸ್ಯೆ ಎದುರಿಸುತ್ತಿದ್ದ ಕೆಲವರಲ್ಲಿ ಲಸಿಕೆ ತೆಗೆದುಕೊಂಡ ನಂತರ ಸಮಸ್ಯೆಗಳು ತಲೆದೋರಿದ ಕಾರಣ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತ್ ಬಯೋಟೆಕ್​ಗೆ ವಿದೇಶಿ ಪ್ರತಿನಿಧಿಗಳ ಭೇಟಿ.. ಲಸಿಕೆ ತುರ್ತು ಬಳಕೆ, ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ

ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ನ್ಯಾಯಾಲಯಕ್ಕೆ ಹಾಜರಾದ ನಟ ದರ್ಶನ್: ವಿಡಿಯೋ
ನ್ಯಾಯಾಲಯಕ್ಕೆ ಹಾಜರಾದ ನಟ ದರ್ಶನ್: ವಿಡಿಯೋ