ಮಧ್ಯಪ್ರದೇಶ: ಮಾದಕವಸ್ತು ನೀಡಿ ಅತ್ಯಾಚಾರ, ಬ್ಲ್ಯಾಕ್​ ಮೇಲ್, ಪಿಎಚ್​ಡಿ ವಿದ್ಯಾರ್ಥಿನಿ ಆತ್ಮಹತ್ಯೆ

ಪಿಎಚ್​ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ದಾಟಿಯಾಳದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಆಕೆಗೆ ಮತ್ತು ಬರುವ ಔಷಧ ಕುಡಿಸಿ, ಅತ್ಯಾಚಾರವೆಸಗಿ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ, ಇದಕ್ಕೆ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಆರೋಪಿಯನ್ನು ಯೋಗೇಶ್ ರಾವತ್ ಎಂದು ಗುರುತಿಸಲಾಗಿದೆ.

ಮಧ್ಯಪ್ರದೇಶ: ಮಾದಕವಸ್ತು ನೀಡಿ ಅತ್ಯಾಚಾರ, ಬ್ಲ್ಯಾಕ್​ ಮೇಲ್, ಪಿಎಚ್​ಡಿ ವಿದ್ಯಾರ್ಥಿನಿ ಆತ್ಮಹತ್ಯೆ
ಸಾವು
Image Credit source: Shutterstock

Updated on: May 20, 2026 | 8:18 AM

ಭೋಪಾಲ್, ಮೇ 20: ಪಿಎಚ್​ಡಿ ವಿದ್ಯಾರ್ಥಿನಿ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ದಾಟಿಯಾಳದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಆಕೆಗೆ ಮತ್ತು ಬರುವ ಔಷಧ ಕುಡಿಸಿ, ಅತ್ಯಾಚಾರವೆಸಗಿ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ, ಇದಕ್ಕೆ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಆರೋಪಿಯನ್ನು ಯೋಗೇಶ್ ರಾವತ್ ಎಂದು ಗುರುತಿಸಲಾಗಿದೆ.

ಆ ಮಹಿಳೆ ಗ್ವಾಲಿಯರ್‌ನಲ್ಲಿದ್ದಾಗ ಪಿಎಚ್‌ಡಿ ಓದುತ್ತಿದ್ದಳು. ಪೊಲೀಸರ ಪ್ರಕಾರ, ಆಕೆಯ ಸ್ನೇಹಿತರೊಬ್ಬರ ಸಹೋದರ ಯೋಗೇಶ್ ರಾವತ್ ಜೊತೆ ಆಕೆಗೆ ಸ್ನೇಹ ಬೆಳೆಯಿತು. ರಾವತ್ ಆಕೆಯನ್ನು ಗ್ವಾಲಿಯರ್‌ನ ಹೋಟೆಲ್‌ಗೆ ಕರೆಸಿ, ಮಾದಕ ವಸ್ತು ಸೇವಿಸುವಂತೆ ಒತ್ತಾಯಿಸಿ, ಪ್ರಜ್ಞೆ ತಪ್ಪಿದ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಹಲ್ಲೆಯ ಸಮಯದಲ್ಲಿ ರಾವತ್ ಮಹಿಳೆಯ ಅಶ್ಲೀಲ ವೀಡಿಯೊಗಳನ್ನು ಸಹ ರೆಕಾರ್ಡ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿ ಮತ್ತೆ ಹೋಟೆಲ್‌ಗೆ ಕರೆಸಿ, ಎರಡನೇ ಬಾರಿಗೆ ಅತ್ಯಾಚಾರ ಎಸಗಿದ್ದಾನೆ.

ಈ ಘಟನೆಗಳು ಮಾರ್ಚ್ 13 ಮತ್ತು 15 ರಂದು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರುಕುಳದಿಂದ ವಿಚಲಿತರಾದ ಮಹಿಳೆ ಮಾರ್ಚ್ 15 ರಂದು ಗ್ವಾಲಿಯರ್‌ನ ಪದವ್ ಪೊಲೀಸ್ ಠಾಣೆಗೆ ತೆರಳಿ ರಾವತ್ ವಿರುದ್ಧ ಎಫ್‌ಐಆರ್ ದಾಖಲಿಸಿದರು. ಶೀಘ್ರದಲ್ಲೇ, ಆಕೆ ದಾಟಿಯಾದ ತಮ್ಮ ಮನೆಗೆ ಮರಳಿದರು, ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮತ್ತಷ್ಟು ಓದಿ: ಮಹಿಳೆಯ ಅನುಮಾನಾಸ್ಪದ ಸಾವು, ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಂದೆಯ ಎಚ್ಚರಿಕೆ

ಯೋಗೇಶ್ ರಾವತ್ ಮತ್ತು ಅವರ ಇಬ್ಬರು ಸಹೋದರಿಯರು ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಹಿಳೆ ಆತ್ಮಹತ್ಯೆ ಪತ್ರ ಬರೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ದಾಖಲಾದ ನಂತರ, ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಅಶೋಕ್ ನಗರದಿಂದ ರಾವತ್‌ನನ್ನು ಬಂಧಿಸಿದರು. ದೂರುದಾರರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ನೇಹಿತೆಯೊಂದಿಗೆ ಫೂಲ್ ಬಾಗ್‌ಗೆ ಬಂದಿದ್ದರು, ನಂತರ ಅವರು ಆಕೆಯನ್ನು ಹೋಟೆಲ್‌ಗೆ ಕರೆದೊಯ್ದು ಅಲ್ಲಿ ಈ ತಪ್ಪು ಕೆಲಸಗಳನ್ನು ಮಾಡಿದ್ದಾರೆ ಎಂದು ಸಬ್-ಇನ್ಸ್‌ಪೆಕ್ಟರ್ ಸಂತೋಷ್ ಭದೌರಿಯಾ ಹೇಳಿದ್ದಾರೆ. ಈ ವಿಷಯದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us