AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಆಗಿರುವ ಫೋಟೊ ವಿಯೆಟ್ನಾಂನದ್ದು

ವೈರಲ್ ಆಗಿರುವ ಫೋಟೊವನ್ನು ಗೂಗಲ್ ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, 2020 ರಲ್ಲಿ ವಿಯೆಟ್ನಾಂನಲ್ಲಿ ಪತ್ತೆಯಾದ '1100 ವರ್ಷ ಹಳೆಯ' ಶಿವಲಿಂಗದ ಬಗ್ಗೆ ವರದಿಗಳು ಪ್ರಕಟವಾಗಿರುವುದು ಸಿಕ್ಕಿದೆ

Fact Check ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಆಗಿರುವ ಫೋಟೊ ವಿಯೆಟ್ನಾಂನದ್ದು
ವಿಯೆಟ್ನಾಂನಲ್ಲಿ ಪತ್ತೆಯಾದ ಶಿವಲಿಂಗ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: May 18, 2022 | 8:00 AM

ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಪತ್ತೆಯಾದ ಶಿವಲಿಂಗ (Shivling) ಎಂಬ ಶೀರ್ಷಿಕೆಯೊಂದಿಗೆ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ (Varanasi) ಮೊಘಲರ ಕಾಲದ ಜ್ಞಾನವಾಪಿ ಮಸೀದಿಯ ಕಾನೂನು ವಿವಾದದ ಸಂದರ್ಭದಲ್ಲಿ ಈ ಫೋಟೊ ವೈರಲ್ ಆಗಿದ್ದು, ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಹಿಂದೂ ಗುಂಪುಗಳು ಆರೋಪಿಸಿವೆ. ಮೇ 16, 2022 ರಂದು ನ್ಯಾಯಾಲಯದ ಆದೇಶದ ಸಮೀಕ್ಷೆಯ ಸಮಯದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಮುಸ್ಲಿಂ ವಾದಿಗಳನ್ನು ಪ್ರತಿನಿಧಿಸುವ ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿಯು ಶಿವಲಿಂಗ ಎಂದು ವರ್ಣಿಸಲಾದ ವಸ್ತುವು ವಾಜು ಖಾನಾ (ಶುಚಿಮಾಡುವ) ಪ್ರದೇಶದಲ್ಲಿರುವ ಕಾರಂಜಿಯಾಗಿದೆ ಎಂದು ಪ್ರತಿಪಾದಿಸಿದೆ. ಈ ಫೋಟೋವನ್ನು ವಕೀಲ ವೈಭವ್ ತ್ರಿಪಾಠಿ ಅವರು ವ್ಯಂಗ್ಯ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದರು.ಆದರೆ ಶಿವಲಿಂಗವು ವಿಯೆಟ್ನಾಂನಲ್ಲಿ ಪತ್ತೆಯಾಗಿದೆ, ಅದ  ಭಾರತದಲ್ಲಿ ಅಲ್ಲ ಎಂದು ಪ್ರತಿಕ್ರಿಯೆ ಬರತೊಡಗಿದಾಗ ಆ ಟ್ವೀಟ್​​ನ್ನು ಅವರು ಅಳಿಸಿದ್ದಾರೆ.

ಇದನ್ನೂ ಓದಿ: Gyanvapi Mosque Survey ಶಿವಲಿಂಗವನ್ನು ರಕ್ಷಿಸಲು ಸುಪ್ರೀಂ ಆದೇಶ, ಮಸೀದಿಗೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧಗಳಿಲ್ಲ

ಇದನ್ನೂ ಓದಿ
Image
Gyanvapi mosque survey ನ್ಯಾಯಾಲಯದ ಗೌಪ್ಯತೆಯನ್ನು ಉಲ್ಲಂಘಿಸಿದ ಆರೋಪ ನಿರಾಕರಿಸಿದ ಅಡ್ವೊಕೇಟ್ ಕಮಿಷನರ್ ಅಜಯ್ ಮಿಶ್ರಾ
Image
Gyanvapi Mosque Survey ಶಿವಲಿಂಗವನ್ನು ರಕ್ಷಿಸಲು ಸುಪ್ರೀಂ ಆದೇಶ, ಮಸೀದಿಗೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧಗಳಿಲ್ಲ
Image
Gyanvapi Mosque: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯ ಬೆನ್ನಲ್ಲೇ ಚರ್ಚೆಗೆ ಬಂತು ಎಸ್​ಎಲ್ ಭೈರಪ್ಪ ಬರೆದ ಆವರಣ ಕಾದಂಬರಿ
Image
Gyanvapi Mosque: ವಾರಾಣಸಿ ಜ್ಞಾನವಾಪಿ ಮಸೀದಿ ಪ್ರಕರಣ; ಇಂದು ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ

ಫ್ಯಾಕ್ಟ್ ಚೆಕ್

ವೈರಲ್ ಆಗಿರುವ ಫೋಟೊವನ್ನು ಗೂಗಲ್ ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, 2020 ರಲ್ಲಿ ವಿಯೆಟ್ನಾಂನಲ್ಲಿ ಪತ್ತೆಯಾದ ‘1100 ವರ್ಷ ಹಳೆಯ’ ಶಿವಲಿಂಗದ ಬಗ್ಗೆ ವರದಿಗಳು ಪ್ರಕಟವಾಗಿರುವುದು ಸಿಕ್ಕಿದೆ ಎಂದು ಬೂಮ್ ಲೈವ್ ವರದಿ ಮಾಡಿದೆ. ವಿಯೆಟ್ನಾಂನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಶಿವಲಿಂಗವನ್ನು ಪತ್ತೆ ಹಚ್ಚಿರುವ ಸುದ್ದಿಯು ಭಾರತದಲ್ಲಿ ಭಾರೀ ಸುದ್ದಿಯಾಗಿತ್ತು. ಮೇ 2020 ರಲ್ಲಿ ಹಿಂದಿ ಮತ್ತು ಇಂಗ್ಲಿಷ್ ಸುದ್ದಿವಾಹಿನಿಗಳು ಇದನ್ನು ವರದಿ ಮಾಡಿದ್ದು, ನವಭಾರತ್ ಟೈಮ್ಸ್ ಮತ್ತು ನ್ಯೂಸ್ 18 ಹಿಂದಿ ವರದಿ ಮಾಡಿದೆ. “ಭಾರತದ ಪುರಾತತ್ವ ಸಮೀಕ್ಷೆ (ASI) ಇತ್ತೀಚೆಗೆ ಕ್ರಿಸ್ತಶಕೆ 9 ನೇ ಶತಮಾನದ ಏಕಶಿಲೆಯ ಮರಳುಗಲ್ಲಿನ ಶಿವಲಿಂಗವನ್ನು ಕಂಡುಹಿಡಿದಿದೆ, ಸಂರಕ್ಷಣಾ ಯೋಜನೆಯ ಸಮಯದಲ್ಲಿ ಮೈಸನ್​​ನಲ್ಲಿ(ಮಧ್ಯ ವಿಯೆಟ್ನಾಂನ ಕ್ವಾಂಗ್ ನಾಮ್ ಪ್ರಾಂತ್ಯದಲ್ಲಿ  ಭಾಗಶಃ ನಾಶವಾದ ಹಿಂದೂ ದೇವಾಲಯಗಳ ಸಮೂಹ) ಶಿವಲಿಂಗ ಪತ್ತೆಯಾಗಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.  ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಮೈಸನ್ ಅಭಯಾರಣ್ಯವು ಮಧ್ಯ ವಿಯೆಟ್ನಾಂನಲ್ಲಿರುವ ದೇವಾಲಯದ ಸಂಕೀರ್ಣವಾಗಿದ್ದು, ಚಂಪಾ ಸಾಮ್ರಾಜ್ಯದ ಧಾರ್ಮಿಕ ಮತ್ತು ರಾಜಕೀಯ ರಾಜಧಾನಿಯಾಗಿತ್ತು. ಇದು 4 ನೇ ಮತ್ತು 13 ನೇ ಶತಮಾನದ ನಡುವಿನ ಅವಧಿಯ ಭಾಗಶಃ ನಾಶವಾದ ರಚನೆಗಳನ್ನು ಹೊಂದಿದೆ.

ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಎಎಸ್‌ಐ ಅನ್ನು ಶ್ಲಾಘಿಸುವ ಮತ್ತು ಭಾರತ ಮತ್ತು ವಿಯೆಟ್ನಾಂ ನಡುವಿನ ನಾಗರಿಕತೆಯ ಸಂಪರ್ಕವನ್ನು ಎತ್ತಿ ತೋರಿಸುವ ಬಗ್ಗೆ ಟ್ವೀಟ್ ಮಾಡಿದ್ದರು.  ಇದೀಗ  ವಿಯೆಟ್ನಾಂನಲ್ಲಿ ಕಂಡುಬಂದ ಶಿವಲಿಂಗದ ಚಿತ್ರವನ್ನು ಜೂಮ್ ಮಾಡಿ ಇದನ್ನು ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಮಾಡಲಾಗಿದೆ.

ಹೆಚ್ಚಿನ ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!