AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 1ರಿಂದ ದೇಶದಲ್ಲಿ ರೈಲು ಸಂಚಾರ ಸ್ಥಗಿತಗೊಳ್ಳುತ್ತಾ? -ಇಲ್ಲಿದೆ ನೋಡಿ ಸತ್ಯಾಂಶ​

ದೆಹಲಿ: ಡಿಸೆಂಬರ್​ 1ರಿಂದ ಭಾರತೀಯ ರೈಲ್ವೆ ಇಲಾಖೆ ದೇಶದಲ್ಲಿ ಮತ್ತೊಮ್ಮೆ ರೈಲು ಸಂಚಾರ ನಿಲ್ಲಿಸಲಿದೆ. ಜೊತೆಗೆ, ಬಹುತೇಕ ಕೊವಿಡ್ ವಿಶೇಷ ಟ್ರೇನ್​ಗಳೂ ಕೂಡ ಸಂಚಾರ ಮಾಡುವುದಿಲ್ಲ ಎಂಬ ಒಂದು ಮೆಸೇಜ್​ ಇತ್ತೀಚೆಗೆ WhatsApp​ನಲ್ಲಿ ಹರಿದಾಡುತ್ತಿದೆ. ಅದನ್ನು ನೋಡಿದ ಜನರು ಹಾಗೂ ಡಿಸೆಂಬರ್​ನಲ್ಲಿ ಪ್ರಯಾಣಿಸಲು ಮುಂಗಡವಾಗಿ ಟಿಕೆಟ್​ ಬುಕ್​ ಮಾಡಿದ್ದವರು  ಗಾಬರಿಯಾಗಿದ್ದಾರೆ ಎಂದು ಹೇಳಲಾಗಿದೆ. ಏನಿದು ಏಕಾಏಕಿ ನಿರ್ಧಾರ ಎಂಬರ್ಥದ ಚರ್ಚೆಯನ್ನು ಸೋಷಿಯಲ್ ಮೀಡಿಯಾಗಳಲ್ಲಿ ನಡೆಸುತ್ತಿದ್ದಾರೆ. ಹಾಗೊಮ್ಮೆ ನಿಮಗೂ ಈ ಮೆಸೇಜ್​ ಬಂದಿದ್ದರೆ ಇದನ್ನು ಖಂಡಿತ ನಂಬಬೇಡಿ. ಯಾಕಂದ್ರೆ, […]

ಡಿಸೆಂಬರ್​ 1ರಿಂದ ದೇಶದಲ್ಲಿ ರೈಲು ಸಂಚಾರ ಸ್ಥಗಿತಗೊಳ್ಳುತ್ತಾ? -ಇಲ್ಲಿದೆ ನೋಡಿ ಸತ್ಯಾಂಶ​
KUSHAL V
|

Updated on:Nov 23, 2020 | 7:24 PM

Share

ದೆಹಲಿ: ಡಿಸೆಂಬರ್​ 1ರಿಂದ ಭಾರತೀಯ ರೈಲ್ವೆ ಇಲಾಖೆ ದೇಶದಲ್ಲಿ ಮತ್ತೊಮ್ಮೆ ರೈಲು ಸಂಚಾರ ನಿಲ್ಲಿಸಲಿದೆ. ಜೊತೆಗೆ, ಬಹುತೇಕ ಕೊವಿಡ್ ವಿಶೇಷ ಟ್ರೇನ್​ಗಳೂ ಕೂಡ ಸಂಚಾರ ಮಾಡುವುದಿಲ್ಲ ಎಂಬ ಒಂದು ಮೆಸೇಜ್​ ಇತ್ತೀಚೆಗೆ WhatsApp​ನಲ್ಲಿ ಹರಿದಾಡುತ್ತಿದೆ.

ಅದನ್ನು ನೋಡಿದ ಜನರು ಹಾಗೂ ಡಿಸೆಂಬರ್​ನಲ್ಲಿ ಪ್ರಯಾಣಿಸಲು ಮುಂಗಡವಾಗಿ ಟಿಕೆಟ್​ ಬುಕ್​ ಮಾಡಿದ್ದವರು  ಗಾಬರಿಯಾಗಿದ್ದಾರೆ ಎಂದು ಹೇಳಲಾಗಿದೆ. ಏನಿದು ಏಕಾಏಕಿ ನಿರ್ಧಾರ ಎಂಬರ್ಥದ ಚರ್ಚೆಯನ್ನು ಸೋಷಿಯಲ್ ಮೀಡಿಯಾಗಳಲ್ಲಿ ನಡೆಸುತ್ತಿದ್ದಾರೆ. ಹಾಗೊಮ್ಮೆ ನಿಮಗೂ ಈ ಮೆಸೇಜ್​ ಬಂದಿದ್ದರೆ ಇದನ್ನು ಖಂಡಿತ ನಂಬಬೇಡಿ. ಯಾಕಂದ್ರೆ, ಇದೊಂದು ಪಕ್ಕಾ ಸುಳ್ಳು ಸುದ್ದಿ.

ಹೌದು, ರೈಲು ಸಂಚಾರ ಸ್ಥಗಿತಗೊಳ್ಳುವ ಬಗ್ಗೆ PIB (ಪ್ರೆಸ್​ ಇನ್​ಫರ್ಮೇಶನ್ ಬ್ಯೂರೋ) ಫ್ಯಾಕ್ಟ್​ಚೆಕ್​ ನಡೆಸಿದ್ದು ಅದರ ಅಸಲಿಯತ್ತನ್ನು ತನ್ನ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿಕೊಂಡಿದೆ. ಕೊವಿಡ್​ ಹಿನ್ನೆಲೆಯಲ್ಲಿ ಶುರುವಾದ ವಿಶೇಷ ರೈಲುಗಳು ಸೇರಿ ಯಾವ ರೈಲುಗಳ ಸಂಚಾರವೂ ಸ್ಥಗಿತಗೊಳ್ಳುವುದಿಲ್ಲ. ಭಾರತೀಯ ರೈಲ್ವೆ ಇಲಾಖೆ ಅಂಥ ನಿರ್ಧಾರಗಳನ್ನು ಕೈಗೊಂಡಿಲ್ಲ. ಯಾರೂ ಹೆದರುವ ಅಥವಾ ಗಾಬರಿಯಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಹಾಗೇ, ಸುಳ್ಳು WhatsApp​ ಮೆಸೇಜ್​ನ ಸ್ಕ್ರೀನ್​ಶಾಟ್​ ಕೂಡ ಶೇರ್ ಮಾಡಿಕೊಂಡಿದೆ.

ಕೊವಿಡ್​ ಬಿಕ್ಕಟ್ಟು ಶುರುವಾದಾಗಿನಿಂದ ಒಂದಲ್ಲ ಒಂದು ಸುಳ್ಳುಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಲೇ ಇವೆ. ಈ ಹಿಂದೆಯೂ ಹಲವು ವದಂತಿ​ಗಳು ಹರಿದಾಡಿದ್ದು ಜನರು ಗಲಿಬಿಲಿಗೊಳ್ಳುವಂಥ ಘಟನೆಗಳು ಸಹ ನಡೆದಿತ್ತು. 2019ರ ಡಿಸೆಂಬರ್​ನಲ್ಲಿ ಫ್ಯಾಕ್ಟ್​ಚೆಕ್​ ವಿಭಾಗವನ್ನು ಶುರು ಮಾಡಿದ PIB ಕೊವಿಡ್, ಲಾಕ್​ಡೌನ್​, ವಾಹನಗಳ ಸಂಚಾರ ಸೇರಿ ಅನೇಕ ವಿಚಾರಗಳಲ್ಲಿ ಹರಡಿದ್ದ ಸುಳ್ಳುಸುದ್ದಿಗಳ ಬಗ್ಗೆ ಫ್ಯಾಕ್ಟ್​​ಚೆಕ್​ ನಡೆಸಿ, ಜನರಿಗೆ ಸತ್ಯಾಂಶ ತಿಳಿಸುವ ಕೆಲಸದಲ್ಲಿ ತೊಡಗಿದೆ.

Published On - 7:10 pm, Mon, 23 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ