AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿ ಪಿಕ್ಚರ್ ಬಾಕಿ ಹೈ ಎಂದ ಮನೋಜ್ ನರವನೆ; ದೊಡ್ಡ ಪ್ರಹಾರದ ಮುನ್ಸೂಚನೆ ಕೊಟ್ಟರಾ ಮಾಜಿ ಸೇನಾ ಮುಖ್ಯಸ್ಥ?

Ex Indian army chief Manoj Mukund Narane's cryptic post in X: ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ 70ಕ್ಕೂ ಹೆಚ್ಚು ಉಗ್ರರು ಕೊಲ್ಲಲಾಗಿರುವ ಸಾಧ್ಯತೆ ಇದೆ. ಇದೇ ವೇಳೆ ಭಾರತದ ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವನೆ ಅವರು ಎಕ್ಸ್​​​ನಲ್ಲಿ ಮಾಡಿದ ಪೋಸ್ಟ್ ಕುತೂಹಲ ಹುಟ್ಟಿಸಿದೆ. ಪಿಕ್ಚರ್ ಅಭಿ ಬಾಕಿ ಹೈ ಎಂದು ಅವರು ತಮ್ಮ ಎಕ್ಸ್ ಪೋಸ್ಟ್​​​ನಲ್ಲಿ ಬರೆದಿದ್ದಾರೆ. ಇದು ಇನ್ನೂ ದೊಡ್ಡ ಕಾರ್ಯಾಚರಣೆಗೆ ಸುಳಿವು ನೀಡಿರಬಹುದು.

ಅಭಿ ಪಿಕ್ಚರ್ ಬಾಕಿ ಹೈ ಎಂದ ಮನೋಜ್ ನರವನೆ; ದೊಡ್ಡ ಪ್ರಹಾರದ ಮುನ್ಸೂಚನೆ ಕೊಟ್ಟರಾ ಮಾಜಿ ಸೇನಾ ಮುಖ್ಯಸ್ಥ?
ಜನರಲ್ ಮನೋಜ್ ನರವಣೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 07, 2025 | 12:49 PM

Share

ನವದೆಹಲಿ, ಮೇ 7: ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಉಗ್ರ ತಾಣಗಳ ಮೇಲೆ ಭಾರತ ದಾಳಿ (Operation Sindoor) ಮಾಡಿ 70ಕ್ಕೂ ಹೆಚ್ಚು ಉಗ್ರರನ್ನು ಕೊಂದು ಹಾಕಿದೆ. ಪಾಕಿಸ್ತಾನ ಕೂಡ ತಾನು ಭಾರತೀಯ ಜೆಟ್​​​ಗಳನ್ನು ಹೊಡೆದುರುಳಿಸಿ, ಕೆಲ ಭಾರತೀಯ ಸೈನಿಕರನ್ನು ಸೆರೆಹಿಡಿದಿರುವುದಾಗಿ ಹೇಳಿಕೊಂಡಿದೆ. ಇದೇ ವೇಳೆ, ಭಾರತದ ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಅವರು ಎಕ್ಸ್​​​ನಲ್ಲಿ ಹಾಕಿದ ಒಂದು ಪೋಸ್ಟ್ ಸಾಕಷ್ಟು ಕುತೂಹಲ ಕೆರಳಿಸಿದೆ. ಭಾರತದಿಂದ ಇನ್ನೂ ದೊಡ್ಡ ದಾಳಿ ನಡೆಯುವ ಸಾಧ್ಯತೆಯನ್ನು ತೆರೆದಿಟ್ಟಿದೆ.

ಪಿಕ್ಚರ್ ಅಭಿ ಬಾಕಿ ಹೈ…

ಜನರಲ್ ಮನೋಜ್ ನರವಣೆ ಅವರು ‘ಅಭಿ ಪಿಕ್ಚರ್ ಬಾಕಿ ಹೈ’ ಎಂದು ಒನ್​​ಲೈನರ್ ಅನ್ನು ಪೋಸ್ಟ್ ಮಾಡಿದ್ದಾರೆ. ಇದು ಬಿಟ್ಟು ಬೇರೇನೂ ಬರೆದಿಲ್ಲ. ಭಾರತದ ಮಿಲಿಟರಿಯಿಂದ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆದ ಬಳಿಕ ಈ ಪೋಸ್ಟ್ ಬಂದಿದೆ. ಭಾರತೀಯ ಸೇನೆ ಇನ್ನೂ ದೊಡ್ಡ ದಾಳಿ ಮಾಡುವ ಸಾಧ್ಯತೆ ಇದೆ ಎಂಬುದು ಅವರ ಈ ನಿಗೂಢ ಪೋಸ್ಟ್​​​ನ ಅರ್ಥವಿರಬಹುದೆ?

ಇದನ್ನೂ ಓದಿ
Image
ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಯಾರು?
Image
ಆಪರೇಷನ್ ಸಿಂಧೂರ್​​ಗೆ ಷೇರುಮಾರುಕಟ್ಟೆಯಿಂದ ಮಿಶ್ರಪ್ರತಿಕ್ರಿಯೆ
Image
ಆಪರೇಷನ್ ಸಿಂಧೂರ್ ಎಂದರೇನು? ಈ ದಾಳಿಗೆ ಭಾರತ ಇದೇ ಹೆಸರಿಟ್ಟಿದ್ದೇಕೆ?
Image
ಮಾಕ್ ಡ್ರಿಲ್​ಗೆ ಭಾರತ ಸಜ್ಜು, ಇಸ್ರೇಲ್​ನಂತೆ ದಾಳಿ ನಡೆಯಲಿದೆ ಎಂದ ಪಾಕ್

ಇದನ್ನೂ ಓದಿ: ಆಪರೇಷನ್ ಸಿಂಧೂರ್: ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಯಾರು? ಇಲ್ಲಿದೆ ಮಾಹಿತಿ

ಆಪರೇಷನ್ ಸಿಂದೂರ ಕಾರ್ಯಾಚರಣೆ ಇನ್ನೂ ಮೊದಲ ಹೆಜ್ಜೆಯಷ್ಟೇ, ಮುಂದೆ ಇನ್ನಷ್ಟು ಬರಲಿವೆ ಅನಿಸಿಕೆಗಳು ಹಿರಿಯ ಪತ್ರಕರ್ತರು ಮೊದಲಾದವರಿಂದ ಬರುತ್ತಿವೆ. ಪಾಕಿಸ್ತಾನ ತಾನು ಯಾವುದೇ ಪ್ರತಿದಾಳಿಗೆ ಸಿದ್ಧ ಎಂದು ಹೇಳಿಕೊಳ್ಳುತ್ತಿದೆ. ಭಾರತ ತನ್ನ ಕಾರ್ಯಾಚರಣೆ ನಿಲ್ಲಿಸಿದರೆ ತಾನೂ ಕೂಡ ಜವಾಬ್ದಾರಿಯುತವಾಗಿ ಪ್ರತಿಕ್ರಿಯೆ ನಿಲ್ಲಿಸುವುದಾಗಿ ಪಾಕ್ ಹೇಳಿದೆ.

ಮಧ್ಯರಾತ್ರಿಯಲ್ಲಿ ಬಂದ ಆಪರೇಷನ್ ಸಿಂಧೂರ

ರಾತ್ರಿ 1 ಗಂಟೆಯ ಬಳಿಕ ಭಾರತದ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆ ಸಂಘಟಿತರಾಗಿ ಆಪರೇಷನ್ ಸಿಂಧೂರ ನಡೆಸಿವೆ. ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಲಷ್ಕರೆ ತೈಯಬಾ, ಹಿಜ್ಬುಲ್ ಮುಜಾಹಿದೀನ್ ಮತ್ತು ಜೈಷೆ ಸಂಘಟನೆಗಳಿಗೆ ಸೇರಿದ 9 ಸ್ಥಳಗಳ ಮೇಲೆ ನಿರ್ದಿಷ್ಟವಾಗಿ ಗುರಿ ಮಾಡಿ ಸ್ಟ್ರೈಕ್ ಮಾಡಲಾಗಿದೆ. ಕೆಲ ವರದಿಗಳ ಪ್ರಕಾರ 70ಕ್ಕೂ ಹೆಚ್ಚು ಉಗ್ರರು ಸತ್ತಿದ್ದಾರೆ. ಲಷ್ಕರೆ ಉಗ್ರರ ಹಫೀಜ್ ಸಯ್ಯದ್ ಅವರ ಕುಟುಂಬದ 10 ಮಂದಿ ಸದಸ್ಯರೂ ಸತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಭಾರತದ ದಾಳಿಯಿಂದ ಕೋಪಗೊಂಡು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಗುಂಡು ಹಾರಿಸಿದ ಪಾಕ್, 10 ನಾಗರಿಕರು ಸಾವು

ಬಹವಾಲಪುರ್, ಮುರಿಡ್ಕೆ ಮೊದಲಾದ ಸ್ಥಳಗಳಲ್ಲಿ ಈ ದಾಳಿಗಳು ನಡೆದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Wed, 7 May 25

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ