ಅಸೆಂಬ್ಲಿ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿದ ತಪ್ಪಿಗೆ ಮಾಜಿ ಶಾಸಕನಿಗೆ ಜೈಲು ಶಿಕ್ಷೆ ವಿಧಿಸಿದ ಪ್ರಜಾ ಪ್ರತಿನಿಧಿ ಕೋರ್ಟ್​

ಬಿಎ ಪದವೀಧರನಾದ ಪಾಯಂ ವೆಂಕಟೇಶ್ವರುಲು (payam venkateswarlu) 2018ರ ಅಸೆಂಬ್ಲಿ ಚುನಾವಣೆ ವೇಳೆ ಮತದಾರರಿಗೆ ಹಣದ ಆಮಿಷವೊಡ್ಡಿ ಮತ ಗಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ ತೆಲಂಗಾಣದ ಪ್ರಜಾ ಪ್ರತಿನಿಧಿ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ಜುಲ್ಮಾನೆ ವಿಧಿಸಿದೆ.

ಅಸೆಂಬ್ಲಿ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿದ ತಪ್ಪಿಗೆ ಮಾಜಿ ಶಾಸಕನಿಗೆ ಜೈಲು ಶಿಕ್ಷೆ ವಿಧಿಸಿದ ಪ್ರಜಾ ಪ್ರತಿನಿಧಿ ಕೋರ್ಟ್​
ಅಸೆಂಬ್ಲಿ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿದ ತಪ್ಪಿಗೆ ಮಾಜಿ ಶಾಸಕನಿಗೆ ಜೈಲು ಶಿಕ್ಷೆ ವಿಧಿಸಿದ ಪ್ರಜಾ ಪ್ರತಿನಿಧಿ ಕೋರ್ಟ್​
Follow us
| Updated By: ಸಾಧು ಶ್ರೀನಾಥ್​

Updated on: Aug 13, 2021 | 9:14 AM

ಚುನಾವಣೆ ಸಂದರ್ಭದಲ್ಲಿ ಮತ ಗಳಿಕೆಗಾಗಿ ಮತದಾರರಿಗೆ ಹಣ ಹಂಚಿಕೆ ಮಾಡಿದ ತಪ್ಪಿಗೆ ಮಾಜಿ ಶಾಸಕರೊಬ್ಬರಿಗೆ ಪ್ರಜಾ ಪ್ರತಿನಿಧಿ ಕೋರ್ಟ್ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಇದ್ಯಾವುದೊ ಮಹಾ ಸುದ್ದಿ! ಇದೆಲ್ಲಾ ಮಾಮೂಲೇ ಆಗಿದೆಯಲ್ಲಾ? ಎಂದು ಪ್ರಶ್ನಿಸುವವರಿಗೆ ತೆಲಂಗಾಣದ ನ್ಯಾಯಾಲಯವು ನಿನ್ನೆ ಗುರುವಾರ ಮಾದರಿಯ ಆದೇಶ ನೀಡಿದೆ. ವೋಟಿಗಾಗಿ ನೋಟು ರಾಜಕೀಯ ಪಕ್ಷಗಳ ಮೂಲ ಹಕ್ಕು ಎಂಬಂತಾಗಿರುವಾಗಿ ತೆಲಂಗಾಣದ ನ್ಯಾಯಾಲಯ ಅದೂ ಪ್ರಜಾ ಪ್ರತಿನಿಧಿ ಕೋರ್ಟ್ ಇಂತಹ ತೀರ್ಪು ನೀಡಿರುವುದು ಪ್ರಜಾಪ್ರಭುತ್ವದ ನಾಡಿನಲ್ಲಿ ಆಶಾಕಿರಣ ಮೂಡಿದೆ.

ಪ್ರಚಲಿತದಲ್ಲಿ ಚುನಾವಣೆಯೆಂದರೇನೆ ಹಣ, ಮದ್ಯಗಳ ಅಕ್ರಮಗಳು ಸರ್ವಾಂತರ್ಯಾಮಿ ಎಂಬುದು ಸರ್ವವಿಧಿತ. ಆದರೆ ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಎಳ್ಳುನೀರು ಬಿಡುವ ಈ ಅಕ್ರಮಗಳನ್ನು ತೊಡೆದು ಹಾಕಲು ಸಾಧ್ಯವಿಲ್ಲ ಎಂಬಂತಾಗಿದೆ. ಆದರೆ ಕನಿಷ್ಠ ನಿಯಂತ್ರಿಸಬೇಕು ಎಂಬುದು ಎಲ್ಲರ ಹಕ್ಕೊತ್ತಾಯವಾಗಿದೆ. ಹೀಗಿರುವಾಗ ಸಾಕ್ಷಾತ್​ ಪ್ರಜಾ ಪ್ರತಿನಿಧಿ ಕೋರ್ಟ್ ಪ್ರಜಾಪ್ರಭುತ್ವದ ಆಶಯಕ್ಕೆ ಆಸರೆಯಾಗುವಂತಹ ತೀರ್ಪು ನೀಡಿದೆ.

ಚುನಾವಣೆ ವೇಳೆ ನೀರಿನಂತೆ ಹಣ ಖರ್ಚು ಮಾಡಿದ್ದ 48 ವರ್ಷ ವಯಸ್ಸಿನ, ಮಾಜಿ ಶಾಸಕರೊಬ್ಬರಿಗೆ ತೆಲಂಗಾಣದ ಪ್ರಜಾ ಪ್ರತಿನಿಧಿ ಕೋರ್ಟ್ ಶಿಕ್ಷೆ ವಿಧಿಸಿದೆ. ಪಾಯಂ ವೆಂಕಟೇಶ್ವರುಲು ಎಂಬಾತನೇ ಶಿಕ್ಷೆಗೆ ಗುರಿಯಾಗಿರುವ ಮಾಜಿ ಎಂಎಲ್​ಎ. ತೆಲಂಗಾಣ ವಿಧಾನಸಭೆಯ ವ್ಯಾಪ್ತಿಗೆ (Telangana Legislative Assembly) ಬರುವ ಖಮ್ಮಂ ಜಿಲ್ಲೆಯ (Khammam) ಎಸ್​ಟಿ (ST) ಮೀಸಲು ಕ್ಷೇತ್ರವಾದ ಪಿನಪಾಕ ಅಸೆಂಬ್ಲಿ ಕ್ಷೇತ್ರದಲ್ಲಿ (Pinapaka Assembly constituency) ಈ ಅಕ್ರಮ ನಡೆದಿತ್ತು.

ಬಿಎ ಪದವೀಧರನಾದ ಪಾಯಂ ವೆಂಕಟೇಶ್ವರುಲು (payam venkateswarlu) 2018ರ ಅಸೆಂಬ್ಲಿ ಚುನಾವಣೆ ವೇಳೆ ಮತದಾರರಿಗೆ ಹಣದ ಆಮಿಷವೊಡ್ಡಿ ಮತ ಗಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ ತೆಲಂಗಾಣದ ಪ್ರಜಾ ಪ್ರತಿನಿಧಿ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ಜುಲ್ಮಾನೆ ವಿಧಿಸಿದೆ. ಅಸೆಂಬ್ಲಿ ಚುನಾವಣೆ ವೇಳೆ ಮತದಾರರಿಗೆ ಹಣ ನೀಡಿದ್ದಾರೆ ಎಂಬ ಆರೋಪದ ಮೇಲೆ 2018ರಲ್ಲಿ ಅಶ್ವಾಪುರಂ ಪೊಲೀಸ್​ ಸ್ಟೇಷನ್​​ನಲ್ಲಿ ಪಾಯಂ ವೆಂಕಟೇಶ್ವರುಲು ವಿರುದ್ಧ ಕೇಸು ದಾಖಲಾಗಿತ್ತು. ಪ್ರಕರಣವನ್ನು ಆಲಿಸಿದ ಪ್ರಜಾ ಪ್ರತಿನಿಧಿ ಕೋರ್ಟ್ ಗುರುವಾರ ಶಿಕ್ಷೆ ವಿಧಿಸಿ, ಈ ಮಹತ್ವದ ತೀರ್ಪು ನೀಡಿದೆ.

ವಿಶ್ಲೇಷಣೆ | ಭ್ರಷ್ಟಾಚಾರ ವಿರೋಧಿ ಹೋರಾಟಗಳು ವಿಫಲವಾಗಲು ನಾವು ಹೇಗೆ ಕಾರಣ? (Pinapaka ex mla payam venkateswarlu jailed for distributing money during election)

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು