AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಸರಗೋಡಿನ ಗ್ರಾಮಗಳ ಹೆಸರನ್ನು ಕನ್ನಡದಿಂದ ಮಲಯಾಳಂಗೆ ಬದಲಿಸಲು ಯೋಚಿಸುತ್ತಿಲ್ಲ: ಪಿಣರಾಯಿ ವಿಜಯನ್

Kasaragod: ತಿರುವನಂತಪುರಂನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯನ್, ವಿಷಯವೊಂದು ಸುದ್ದಿಯಾಗಿ ಹೇಗೆ ರೂಪುಗೊಳ್ಳುತ್ತದೆ ಎಂಬುದಕ್ಕೆ ಇದು ಒಂದು ಉತ್ತಮ ಉದಾಹರಣೆಯಾಗಿದೆ. ಅಂತಹ ಸಮಸ್ಯೆ ಎಲ್ಲಿಂದ ಹುಟ್ಟಿತು ಎಂದು ನಾನು ಆಶ್ಚರ್ಯ ಪಡುತ್ತಿದ್ದೆ. ಇದರ ಹಿಂದೆ ಏನಾದರೂ ಪಿತೂರಿ ಇದೆಯೇ ಎಂದು ಪರಿಶೀಲಿಸಬೇಕಾಗಿದೆ.

ಕಾಸರಗೋಡಿನ ಗ್ರಾಮಗಳ ಹೆಸರನ್ನು ಕನ್ನಡದಿಂದ ಮಲಯಾಳಂಗೆ ಬದಲಿಸಲು ಯೋಚಿಸುತ್ತಿಲ್ಲ: ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 30, 2021 | 1:03 PM

ತಿರುವನಂತಪುರಂ: ಕರ್ನಾಟಕದ ಗಡಿಯಾಗಿರುವ ಕಾಸರಗೋಡು ಜಿಲ್ಲೆಯ ಹಳ್ಳಿಗಳ ಹೆಸರನ್ನು ಬದಲಾಯಿಸಲು ತಮ್ಮ ಸರ್ಕಾರ ಯೋಜಿಸುತ್ತಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಹೇಳಿದ್ದಾರೆ. ಕೆಲವು ಪ್ರದೇಶಗಳಲ್ಲಿ ಕನ್ನಡ ಹೆಸರುಗಳನ್ನು ಮಲಯಾಳಂ ಭಾಷೆಗೆ ಬದಲಾಯಿಸಲಾಗಿದೆ ಎಂಬ ವರದಿಗಳ ಬಗ್ಗೆ ಕರ್ನಾಟಕದ ನಾಯಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿಜಯನ್ ಈ ಸ್ಪಷ್ಟೀಕರಣ ನೀಡಿದ್ದಾರೆ. ತಿರುವನಂತಪುರಂನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯನ್, ವಿಷಯವೊಂದು ಸುದ್ದಿಯಾಗಿ ಹೇಗೆ ರೂಪುಗೊಳ್ಳುತ್ತದೆ ಎಂಬುದಕ್ಕೆ ಇದು ಒಂದು ಉತ್ತಮ ಉದಾಹರಣೆಯಾಗಿದೆ. ಅಂತಹ ಸಮಸ್ಯೆ ಎಲ್ಲಿಂದ ಹುಟ್ಟಿತು ಎಂದು ನಾನು ಆಶ್ಚರ್ಯ ಪಡುತ್ತಿದ್ದೆ. ಇದರ ಹಿಂದೆ ಏನಾದರೂ ಪಿತೂರಿ ಇದೆಯೇ ಎಂದು ಪರಿಶೀಲಿಸಬೇಕಾಗಿದೆ.

ಹಳ್ಳಿಗಳ ಮರುನಾಮಕರಣ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಕೋರಿ ಕರ್ನಾಟಕ ನಾಯಕರು ಅದೇ ದಿನ ವಿಜಯನ್‌ಗೆ ಪತ್ರ ಬರೆದಿದ್ದರು.

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಜಯನ್ ಅವರಿಗೆ ಬರೆದ ಪತ್ರದಲ್ಲಿ, ಮಂಜೇಶ್ವರ ಮತ್ತು ಕಾಸರಗೋಡು ನೆಲೆಗೊಂಡಿರುವ ಕಾಸರಗೋಡು ಜಿಲ್ಲೆಯ ಕನ್ನಡ ಮಾತನಾಡುವ ಪ್ರದೇಶಗಳು ಸಾಂಪ್ರದಾಯಿಕ ಸಂಸ್ಕೃತಿ ಮತ್ತು ಐತಿಹಾಸಿಕ ಹಿನ್ನೆಲೆಗೆ ಪ್ರಸಿದ್ಧವಾಗಿವೆ. ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಸ್ಥಳಗಳ ಹೆಸರುಗಳು ಜನರ ಭಾವನೆಗಳಿಗೆ ಹತ್ತಿರದಲ್ಲಿವೆ ಮತ್ತು ಅನಾದಿ ಕಾಲದಿಂದಲೂ ಅವರಿಗೆ ಅಪಾರವಾದ ಭಾವನಾತ್ಮಕ ಮೌಲ್ಯವನ್ನು ಹೊಂದಿವೆ.

ಇತ್ತೀಚಿನ ದಿನಗಳಲ್ಲಿ ಈ ಪ್ರದೇಶಗಳ ನಿವಾಸಿಗಳಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡದೆ. ಕೆಲವು ಹಳ್ಳಿಗಳ ಹೆಸರನ್ನು ಬದಲಾಯಿಸಲು ಸ್ಥಳೀಯ ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ಗಮನಿಸಿದರೆ ಆಶ್ಚರ್ಯವಾಗುತ್ತದೆ” ಎಂದು ಯಡಿಯೂರಪ್ಪ ಹೇಳಿದರು.

ಕರ್ನಾಟಕ ಮುಖ್ಯಮಂತ್ರಿಯಿಂದ ಇನ್ನೂ ಪತ್ರ ಬಂದಿಲ್ಲ ಎಂದು ವಿಜಯನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಮಧ್ಯೆ ಕರ್ನಾಟಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಜಯನ್ ಅವರಿಗೆ ಪತ್ರ ಬರೆದು ಸ್ಥಳಗಳ ಹೆಸರನ್ನು ಬದಲಾಯಿಸದಂತೆ ತಮ್ಮ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕನ್ನಡ ಮತ್ತು ತುಳು ಭಾಷೆಯಿಂದ ಪಡೆದ ಕೆಲವು ಹಳ್ಳಿಗಳ ಹೆಸರನ್ನು ಬದಲಾಯಿಸಲು ಕಾಸರಗೋಡಿನಲ್ಲಿ ಸ್ಥಳೀಯ ಸಂಸ್ಥೆಗಳು ನಿರ್ಧಾರ ತೆಗೆದುಕೊಳ್ಳುತ್ತಿರುವುದು ದುರದೃಷ್ಟಕರ. ಕಾಸರಗೋಡದ ಜನರು ಕನ್ನಡದೊಂದಿಗೆ ವಿಶಿಷ್ಟ ಸಂಬಂಧವನ್ನು ಹಂಚಿಕೊಳ್ಳುತ್ತಾರೆ, ಹಳ್ಳಿಯ ಹೆಸರುಗಳೊಂದಿಗೆ ಭಾವನಾತ್ಮಕವಾಗಿ ಸಂಪರ್ಕ ಹೊಂದಿದ್ದಾರೆ. ಹಳ್ಳಿಗಳ ಹೆಸರು ಬದಲಿಸುವ ಯಾವುದೇ ಪ್ರಯತ್ನಗಳು ಅವರನ್ನು ನಿರಾಶೆಗೊಳಿಸುತ್ತವೆ. ಅವರ ತಾಯ್ನಾಡಿನಿಂದ ದೂರವಾಗಿದೆಯೆಂದು ಭಾವಿಸುತ್ತದೆ. ಸಮಾಜ ವಿರೋಧಿ ಅಂಶಗಳು ಸಾರ್ವತ್ರಿಕ ಭ್ರಾತೃತ್ವದ ಪ್ರಜ್ಞೆಯನ್ನು ತೊಂದರೆಗೊಳಿಸದಂತೆ ನೋಡಿಕೊಳ್ಳುವುದು ಅತ್ಯಗತ್ಯ ಎಂದು ಅವರು ಹೇಳಿದರು.

“ಸಮಸ್ಯೆಯನ್ನು ಪರಿಹರಿಸಲು, ಅಧಿಕಾರಿಗಳೊಂದಿಗೆ ಮಾತನಾಡಲು ಮತ್ತು ಅಂತಹ ಪ್ರಯತ್ನಗಳು ಮತ್ತೆ ನಡೆಯದಂತೆ ನೋಡಿಕೊಳ್ಳಲು ನಾನು ನಿಮ್ಮನ್ನು ವಿನಂತಿಸುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದರು.

 ಇದನ್ನೂ ಓದಿ: ಕಾಸರಗೋಡಿನಲ್ಲಿ ಮಲಯಾಳೀಕರಣ ನಡೆದಿಲ್ಲ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಅಶ್ರಫ್​ಗೆ ಅಭಿನಂದನೆ ತಿಳಿಸಿದ ಹೆಚ್​ಡಿಕೆ

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?