AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ […]

35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Aug 23, 2020 | 2:33 PM

Share

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ ಹೇಗೆ ಮುದ್ರಿಸಲಾಗುತ್ತಿದೆ ಎಂಬ ಪ್ರಶ್ನೆಗಳೂ ಸಹ ಉದ್ಭವಿಸುತ್ತಿವೆ. ದಾಳಿಯಲ್ಲಿ ಮುಟ್ಟುಗೋಲು ಹಾಕಿಕೊಂಡ NCERT ಪಠ್ಯಪುಸ್ತಕಗಳನ್ನು 2 ರಿಂದ 12 ನೇ ತರಗತಿಗೆ ಮುದ್ರಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಜೊತೆಗೆ, ದೇಶದ ಹಲವು ರಾಜ್ಯಗಳಲ್ಲಿ ಈ ಪುಸ್ತಕಗಳನ್ನ ಮಾರಾಟ ಮಾಡುತ್ತಿದ್ದವರ ವಿಳಾಸಗಳೂ ಸಹ ಪೊಲೀಸರಿಗೆ ದೊರೆತಿವೆ.

ಇದಲ್ಲದೆ, ಪ್ರಕರಣದ ಮಾಸ್ಟರ್ ಮೈಂಡ್ ಸಚಿನ್ ಗುಪ್ತಾ ಉತ್ತರಪ್ರದೇಶದ ಶಿಕ್ಷಣ ಮಂಡಳಿಯ ನಕಲಿ ಪಠ್ಯಪುಸ್ತಕಗಳನ್ನು ಸಹ ಮುದ್ರಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

Published On - 2:33 pm, Sun, 23 August 20

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ