AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ […]

35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Aug 23, 2020 | 2:33 PM

Share

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ ಹೇಗೆ ಮುದ್ರಿಸಲಾಗುತ್ತಿದೆ ಎಂಬ ಪ್ರಶ್ನೆಗಳೂ ಸಹ ಉದ್ಭವಿಸುತ್ತಿವೆ. ದಾಳಿಯಲ್ಲಿ ಮುಟ್ಟುಗೋಲು ಹಾಕಿಕೊಂಡ NCERT ಪಠ್ಯಪುಸ್ತಕಗಳನ್ನು 2 ರಿಂದ 12 ನೇ ತರಗತಿಗೆ ಮುದ್ರಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಜೊತೆಗೆ, ದೇಶದ ಹಲವು ರಾಜ್ಯಗಳಲ್ಲಿ ಈ ಪುಸ್ತಕಗಳನ್ನ ಮಾರಾಟ ಮಾಡುತ್ತಿದ್ದವರ ವಿಳಾಸಗಳೂ ಸಹ ಪೊಲೀಸರಿಗೆ ದೊರೆತಿವೆ.

ಇದಲ್ಲದೆ, ಪ್ರಕರಣದ ಮಾಸ್ಟರ್ ಮೈಂಡ್ ಸಚಿನ್ ಗುಪ್ತಾ ಉತ್ತರಪ್ರದೇಶದ ಶಿಕ್ಷಣ ಮಂಡಳಿಯ ನಕಲಿ ಪಠ್ಯಪುಸ್ತಕಗಳನ್ನು ಸಹ ಮುದ್ರಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

Published On - 2:33 pm, Sun, 23 August 20

Follow Us
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ