35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ […]

35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?
ಸಾಧು ಶ್ರೀನಾಥ್​ Edited By:

Updated on: Aug 23, 2020 | 2:33 PM

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ ಹೇಗೆ ಮುದ್ರಿಸಲಾಗುತ್ತಿದೆ ಎಂಬ ಪ್ರಶ್ನೆಗಳೂ ಸಹ ಉದ್ಭವಿಸುತ್ತಿವೆ. ದಾಳಿಯಲ್ಲಿ ಮುಟ್ಟುಗೋಲು ಹಾಕಿಕೊಂಡ NCERT ಪಠ್ಯಪುಸ್ತಕಗಳನ್ನು 2 ರಿಂದ 12 ನೇ ತರಗತಿಗೆ ಮುದ್ರಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಜೊತೆಗೆ, ದೇಶದ ಹಲವು ರಾಜ್ಯಗಳಲ್ಲಿ ಈ ಪುಸ್ತಕಗಳನ್ನ ಮಾರಾಟ ಮಾಡುತ್ತಿದ್ದವರ ವಿಳಾಸಗಳೂ ಸಹ ಪೊಲೀಸರಿಗೆ ದೊರೆತಿವೆ.

ಇದಲ್ಲದೆ, ಪ್ರಕರಣದ ಮಾಸ್ಟರ್ ಮೈಂಡ್ ಸಚಿನ್ ಗುಪ್ತಾ ಉತ್ತರಪ್ರದೇಶದ ಶಿಕ್ಷಣ ಮಂಡಳಿಯ ನಕಲಿ ಪಠ್ಯಪುಸ್ತಕಗಳನ್ನು ಸಹ ಮುದ್ರಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

Published On - 2:33 pm, Sun, 23 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us