AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಎಲ್ಲ ನಾಯಿಗಳಿಗೂ ಮಾಸ್ಕ್​ ಕಡ್ಡಾಯ, ಪಿಟ್​ಬುಲ್ ಸೇರಿ ಮೂರು ನಾಯಿ ತಳಿಗಳಿಗೆ ನಿಷೇಧ

ಸಾರ್ವಜನಿಕ ಸ್ಥಳಗಳಿಗೆ ನಾಯಿಗಳನ್ನು ಕರೆತರುವಾಗ ಬಲೆಯಂಥ ಮಾಸ್ಕ್ ತೊಡಿಸಿರಬೇಕು. ಸಾಕು ನಾಯಿಗಳು ಯಾರಿಗಾದರೂ ಕಚ್ಚಿದರೆ ಮಾಲೀಕರಿಗೆ ದುಬಾರಿ ದಂಡ ವಿಧಿಸಲಾಗುವುದು ಎಂದು ಪಾಲಿಕೆಯು ಎಚ್ಚರಿಸಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಎಲ್ಲ ನಾಯಿಗಳಿಗೂ ಮಾಸ್ಕ್​ ಕಡ್ಡಾಯ, ಪಿಟ್​ಬುಲ್ ಸೇರಿ ಮೂರು ನಾಯಿ ತಳಿಗಳಿಗೆ ನಿಷೇಧ
ಗಾಜಿಯಾಬಾದ್​ನಲ್ಲಿ ಪಿಟ್​ಬುಲ್ ನಾಯಿ ಕಡಿತದಿಂದ ಗಾಯಗೊಂಡಿರುವ ಮಕ್ಕಳು (ಎಡ ಮತ್ತು ಬಲಚಿತ್ರ).
TV9 Web
| Edited By: |

Updated on:Oct 17, 2022 | 7:48 AM

Share

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್​ ಮುನಿಸಿಪಲ್ ಕಾರ್ಪೊರೇಷನ್​ನಲ್ಲಿ (GMC) ಇತ್ತೀಚೆಗೆ ನಾಯಿಗಳು ದಾಳಿ ಮಾಡುವ, ಕಂಡಕಂಡವರಿಗೆ ಕಚ್ಚುವ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತವು ನಾಯಿಗಳನ್ನು ಸಾಕುವುದಕ್ಕೆ ಸಂಬಂಧಿಸಿದಂತೆ ಹೊಸದಾಗಿ ನಿಯಮಾವಳಿಗಳನ್ನು ರೂಪಿಸಿದೆ. ಅದರಂತೆ ಹೋರಾಟ ಮನೋಭಾವದ ಪಿಟ್​ಬುಲ್, ರೊಟ್​ವೀಲರ್ ಮತ್ತು ಡೊಗೊ ಅರ್ಜಂಟಿನೊ (Pit Bull, Rottweiler and Dogo Argentino) ತಳಿಗಳನ್ನು ಮನೆಗಳಲ್ಲಿ ಮುದ್ದಿನ ನಾಯಿಗಳಾಗಿ ಸಾಕುವುದಕ್ಕೆ ನಿಷೇಧ ಹೇರಲಾಗಿದೆ.

ಯಾವುದೇ ಕುಟುಂಬವು ಒಂದಕ್ಕಿಂತ ಹೆಚ್ಚು ನಾಯಿಗಳನ್ನು ಸಾಕುವಂತಿಲ್ಲ. ನಾಯಿಗಳನ್ನು ಸಾಕಲು ಕಡ್ಡಾಯವಾಗಿ ಲೈಸೆನ್ಸ್​ ಪಡೆಯಬೇಕು. ಹೊಸ ಲೈಸೆನ್ಸ್​ ವಿತರಣೆ ಪ್ರಕ್ರಿಯೆಯು ನವೆಂಬರ್ 1ರಿಂದ ಆರಂಭವಾಗುತ್ತದೆ. ಹೊಸ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಗಾಜಿಯಾಬಾದ್ ನಗರಾಡಳಿತವು ಸ್ಪಷ್ಟಪಡಿಸಿದೆ. ಎತ್ತರದ ಕಟ್ಟಡಗಳಲ್ಲಿ ವಾಸಿಸುತ್ತಿರುವವರು ನಾಯಿಗಳನ್ನು ಮನೆಗಳಿಂದ ಹೊರಗೆ ಕರೆತರಲು ಕಡ್ಡಾಯವಾಗಿ ಲಿಫ್ಟ್ ಬಳಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ನಾಯಿಗಳನ್ನು ಕರೆದೊಯ್ಯುವಾಗ ಬಲೆಯಂಥ ಮಾಸ್ಕ್​ ಅನ್ನು ನಾಯಿಗಳ ಬಾಯಿಗೆ ಕಡ್ಡಾಯವಾಗಿ ಹಾಕಿರಬೇಕು ಎಂದು ಸೂಚಿಸಲಾಗಿದೆ.

ಗಾಜಿಯಾಬಾದ್ ನಗರದ ವಿವಿಧೆಡೆ ಇತ್ತೀಚೆಗೆ ನಾಯಿ ಕಡಿತ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಈ ನಿಯಮಗಳನ್ನು ನಗರಾಡಳಿತ ಜಾರಿಗೊಳಿಸಿದೆ. ನಾಯಿಗಳನ್ನು ಸಾಕಿರುವವರು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಲಾಗಿದೆ. ಪಿಟ್​ ಬುಲ್, ರೊಟ್​ವೀಲರ್ ಮತ್ತು ಡೊಗೊ ಅರ್ಜೆಂಟಿನೊ ತಳಿಗಳು ಹೋರಾಟದ ಮನೋಭಾವ (ಫೆರೊಶಿಯಸ್) ಹೊಂದಿವೆ. ಈ ತಳಿಗಳನ್ನು ಸಾಕಲು ಯಾರಿಗೂ ಅನುಮತಿ ನೀಡುವುದಿಲ್ಲ. ಸೂಚನೆ ಉಲ್ಲಂಘಿಸಿ ಯಾರೇ ಈ ತಳಿಗಳನ್ನು ಸಾಕಿದರೆ ಅದರಿಂದ ಆಗುವ ಅನಾಹುತಗಳಿಗೆ ಅವರೇ ಜವಾಬ್ದಾರರಾಗುತ್ತಾರೆ. ಈ ಮೂರೂ ತಳಿಗಳನ್ನು ಗಾಜಿಯಾಬಾದ್​ನಲ್ಲಿ ನಿಷೇಧಿಸಲಾಗಿದೆ ಎಂದು ಬಿಜೆಪಿ ನಾಯಕ ಮತ್ತು ಗಾಜಿಯಾಬಾದ್ ಪಾಲಿಕೆಯ ಸದಸ್ಯ ಸಂಜಯ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ಹೇಳಿದ್ದಾರೆ.

ಈ ಮೂರೂ ತಳಿಗಳನ್ನು ನಿಷೇಧಿಸುವ ಕುರಿತು ಸಿಂಗ್ ಅವರು ಮಂಡಿಸಿದ ನಿಲುವಳಿಯನ್ನು ಮಹಾನಗರ ಪಾಲಿಕೆಯು ಅಂಗೀಕರಿಸಿತು. ‘ಹೊಸದಾಗಿ ಈ ತಳಿಗಳನ್ನು ಸಾಕಲು ಅವಕಾಶವಿಲ್ಲ. ಈಗಾಗಲೇ ಸಾಕುತ್ತಿರುವವರು ತಮ್ಮ ನಾಯಿಗಳಿಗೆ ಎರಡು ತಿಂಗಳ ಒಳಗೆ ಸಂತಾನಹರಣ ಚಿಕಿತ್ಸೆ ಮಾಡಿಸಬೇಕು’ ಎಂದು ಗಾಜಿಯಾಬಾದ್ ಮೇಯರ್ ಆಶಾ ಶರ್ಮಾ ಹೇಳಿದ್ದಾರೆ.

‘ನಾಯಿಗಳನ್ನು ಸಾಕಿರುವವರಿಗೆ ಅದು ಮುದ್ದು. ಆದರೆ ನಾಯಿಗಳಿಂದ ಕಡಿಸಿಕೊಂಡು ಗಾಯಗೊಂಡ ಮಕ್ಕಳ ಬಗ್ಗೆಯೂ ನಾವು ಯೋಚಿಸಬೇಕಿದೆ. ಪಿಟ್​ಬುಲ್ ಕಡಿತದಿಂದ ಕುಶ್ ತ್ಯಾಗಿ ಎಂಬ ಮಗುವಿನ ಮುಖಕ್ಕೆ 150 ಹೊಲಿಗೆ ಬಿದ್ದಿದೆ. ಇದಾದ ಕೆಲವೇ ದಿನಗಳಲ್ಲಿ ಇದೇ ತಳಿಯ ಮತ್ತೊಂದು ನಾಯಿ ಇನ್ನೊಂದು ಮಗುವಿನ ಮೇಲೆ ದಾಳಿ ಮಾಡಿತ್ತು. ನಗರ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ಮಕ್ಕಳು ನಾಯಿ ಕಡಿತದಿಂದ ಗಾಯಗೊಂಡಿದ್ದಾರೆ’ ಎಂದು ಅವರು ವಿವರಿಸಿದರು.

ಬೀದಿನಾಯಿಗಳಿಗೆ ಆಹಾರ ಕೊಡುವ ಬಗ್ಗೆ ಗಾಜಿಯಾಬಾದ್ ಮಹಾನಗರ ಪಾಲಿಕೆಯು ಯಾವುದೇ ನಿರ್ಬಂಧ ವಿಧಿಸಿಲ್ಲ. ಅವುಗಳಿಗೆ ಆಹಾರ ಕೊಡಲು ನಿರ್ದಿಷ್ಟ ಸ್ಥಳಗಳನ್ನು ಗುರುತಿಸಲಾಗುವುದು. ಎಲ್ಲೆಂದರಲ್ಲಿ ಆಹಾರ ಕೊಡುವಂತಿಲ್ಲ ಎಂದು ಪಾಲಿಕೆಯು ಸೂಚಿಸಿದೆ. ಸಾಕು ನಾಯಿ ಕಡಿತದಿಂದ ಯಾವುದೇ ವ್ಯಕ್ತಿಗೆ ತೊಂದರೆಯಾದರೆ ನಾಯಿ ಸಾಕಿದವರಿಗೆ ದಂಡ ವಿಧಿಸಲಾಗುವುದು ಎಂದು ಪಾಲಿಕೆಯು ಎಚ್ಚರಿಸಿದೆ.

ಪಿಟ್​ಬುಲ್ ಮತ್ತು ರೊಟ್​ವೀಲರ್ ನಾಯಿಗಳನ್ನು ಸಾಕುವಂತಿಲ್ಲ ಎಂದು ಈ ಮೊದಲು ಕಾನ್​ಪುರ್ ಮಹಾನಗರ ಪಾಲಿಕೆ ಮತ್ತು ಪಂಚಕುಲ ಮಹಾನಗರ ಪಾಲಿಕೆಗಳು ನಿರ್ಣಯ ಅಂಗೀಕರಿಸಿದ್ದವು.

Published On - 7:48 am, Mon, 17 October 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ