AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 11 ವರ್ಷದ ಬಾಲಕನ ಮುಖಕ್ಕೆ ಕಚ್ಚಿದ ಪಿಟ್​ಬುಲ್ ನಾಯಿ; ಬರೋಬ್ಬರಿ 150 ಹೊಲಿಗೆ ಹಾಕಿದ ವೈದ್ಯರು

ಸೆಪ್ಟೆಂಬರ್ 3ರಂದು ಬಾಲಕ ಆಟವಾಡುತ್ತಿದ್ದ ಪಾರ್ಕ್​ನಲ್ಲಿ ಈ ಘಟನೆ ಸಂಭವಿಸಿತ್ತು. ನಾಯಿಯ ಮಾಲೀಕ ಆ ನಾಯಿಯನ್ನು ಪಾರ್ಕ್​ಗೆ ಕರೆದುಕೊಂಡು ಬಂದಾಗ ಅಲ್ಲಿದ್ದ ಬಾಲಕನ ಮುಖಕ್ಕೆ ಕಚ್ಚಿತ್ತು.

Viral Video: 11 ವರ್ಷದ ಬಾಲಕನ ಮುಖಕ್ಕೆ ಕಚ್ಚಿದ ಪಿಟ್​ಬುಲ್ ನಾಯಿ; ಬರೋಬ್ಬರಿ 150 ಹೊಲಿಗೆ ಹಾಕಿದ ವೈದ್ಯರು
ಪಿಟ್‌ಬುಲ್‌ ನಾಯಿ
TV9 Web
| Edited By: |

Updated on: Sep 09, 2022 | 12:44 PM

Share

ಗಾಜಿಯಾಬಾದ್: ಕಳೆದ ವಾರ ನಡೆದ ಭೀಕರ ಘಟನೆಯಲ್ಲಿ 11 ವರ್ಷದ ಬಾಲಕನ ಮೇಲೆ ಪಿಟ್‌ಬುಲ್‌ (Pit Bull) ನಾಯಿ ದಾಳಿ ನಡೆಸಿತ್ತು. ಆ ಬಾಲಕನ ಮುಖದ ಮೇಲೆ ದಾಳಿ ನಡೆಸಿ, ಗಾಯಗೊಳಿಸಲಾಗಿತ್ತು. ಇದರಿಂದ ಆ ಬಾಲಕನಿಗೆ ಸುಮಾರು 150 ಹೊಲಿಗೆಗಳನ್ನು ಹಾಕಲಾಗಿತ್ತು. 3 ದಿನಗಳ ಕಾಲ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೆಪ್ಟೆಂಬರ್ 3ರಂದು ಬಾಲಕ ಆಟವಾಡುತ್ತಿದ್ದ ಪಾರ್ಕ್​ನಲ್ಲಿ ಈ ಘಟನೆ ಸಂಭವಿಸಿತ್ತು. ನಾಯಿಯ ಮಾಲೀಕ ಆ ನಾಯಿಯನ್ನು ಪಾರ್ಕ್​ಗೆ ಕರೆದುಕೊಂಡು ಬಂದಾಗ ಅಲ್ಲಿದ್ದ ಬಾಲಕನ ಮುಖಕ್ಕೆ ಕಚ್ಚಿತ್ತು. ಈ ಘಟನೆಯ ಸಿಸಿಟಿವಿ ದೃಶ್ಯಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡ ನಂತರ ಈ ಘಟನೆಯು ಬೆಳಕಿಗೆ ಬಂದಿತ್ತು. ನಾಯಿ ಓಡಿ ಹೋಗಿ ಬಾಲಕನ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿದೆ.

ಇದನ್ನೂ ಓದಿ: ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ; ಶ್ವಾನದ ಮಾಲೀಕರಿಗೆ 5,000 ರೂ. ದಂಡ

ಪಕ್ಕದಲ್ಲಿದ್ದವರು ನಾಯಿಯ ಹಿಡಿತದಿಂದ ಬಾಲಕನನ್ನು ರಕ್ಷಿಸಿದರು. ಇಲ್ಲವಾದರೆ ಆ ಬಾಲಕನ ಪ್ರಾಣಕ್ಕೆ ಸಂಚಕಾರ ಉಂಟಾಗುವ ಸಾಧ್ಯತೆಯಿತ್ತು. ಆದರೆ ಅಷ್ಟರಲ್ಲಾಗಲೇ ಆ ನಾಯಿ ಬಾಲಕನ ಮುಖಕ್ಕೆ ತೀವ್ರವಾಗಿ ಕಚ್ಚಿತ್ತು. ಇದರಿಂದ ಬಾಲಕನ ಮುಖದ ಎಡಭಾಗದಲ್ಲಿ ಕಿವಿಯವರೆಗೆ 150 ಹೊಲಿಗೆಗಳನ್ನು ಹಾಕಲಾಗಿದೆ. ಆ ಬಾಲಕ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಎಂದು ವರದಿಗಳು ತಿಳಿಸಿವೆ.

ಈ ಘಟನೆಯ ವಿಡಿಯೋ ನೋಡಿದವರು ನಾಯಿಯ ಮಾಲೀಕರ ವಿರುದ್ಧ ಕಿಡಿ ಕಾರಿದ್ದಾರೆ. ನಾಯಿ ಅಥವಾ ಸಾಕುಪ್ರಾಣಿಗಳನ್ನು ಸಾರ್ವಜನಿಕ ಸ್ಥಳಗಳಿಗೆ ಕರೆತರುವ ಮೊದಲು ಅದರ ಬಾಯಿಗೆ ಟೇಪ್ ಹಾಕುವಂತೆ ಮಾಲೀಕರಿಗೆ ಒತ್ತಾಯಿಸಿದ್ದಾರೆ. ಈ ವಿಡಿಯೋ ಅಧಿಕಾರಿಗಳ ಗಮನ ಸೆಳೆದಿದೆ. ಪರವಾನಗಿ ಅಥವಾ ನೋಂದಣಿ ಇಲ್ಲದೆ ನಾಯಿಯನ್ನು ಸಾಕಿದ್ದಕ್ಕಾಗಿ ಮುನ್ಸಿಪಲ್ ಕಾರ್ಪೊರೇಷನ್ ನಾಯಿ ಮಾಲೀಕ ಗಾಜಿಯಾಬಾದ್‌ನ ಸುಭಾಷ್ ತ್ಯಾಗಿಗೆ 50,000 ರೂ. ದಂಡ ವಿಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ