AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 11 ವರ್ಷದ ಬಾಲಕನ ಮುಖಕ್ಕೆ ಕಚ್ಚಿದ ಪಿಟ್​ಬುಲ್ ನಾಯಿ; ಬರೋಬ್ಬರಿ 150 ಹೊಲಿಗೆ ಹಾಕಿದ ವೈದ್ಯರು

ಸೆಪ್ಟೆಂಬರ್ 3ರಂದು ಬಾಲಕ ಆಟವಾಡುತ್ತಿದ್ದ ಪಾರ್ಕ್​ನಲ್ಲಿ ಈ ಘಟನೆ ಸಂಭವಿಸಿತ್ತು. ನಾಯಿಯ ಮಾಲೀಕ ಆ ನಾಯಿಯನ್ನು ಪಾರ್ಕ್​ಗೆ ಕರೆದುಕೊಂಡು ಬಂದಾಗ ಅಲ್ಲಿದ್ದ ಬಾಲಕನ ಮುಖಕ್ಕೆ ಕಚ್ಚಿತ್ತು.

Viral Video: 11 ವರ್ಷದ ಬಾಲಕನ ಮುಖಕ್ಕೆ ಕಚ್ಚಿದ ಪಿಟ್​ಬುಲ್ ನಾಯಿ; ಬರೋಬ್ಬರಿ 150 ಹೊಲಿಗೆ ಹಾಕಿದ ವೈದ್ಯರು
ಪಿಟ್‌ಬುಲ್‌ ನಾಯಿ
TV9 Web
| Edited By: |

Updated on: Sep 09, 2022 | 12:44 PM

Share

ಗಾಜಿಯಾಬಾದ್: ಕಳೆದ ವಾರ ನಡೆದ ಭೀಕರ ಘಟನೆಯಲ್ಲಿ 11 ವರ್ಷದ ಬಾಲಕನ ಮೇಲೆ ಪಿಟ್‌ಬುಲ್‌ (Pit Bull) ನಾಯಿ ದಾಳಿ ನಡೆಸಿತ್ತು. ಆ ಬಾಲಕನ ಮುಖದ ಮೇಲೆ ದಾಳಿ ನಡೆಸಿ, ಗಾಯಗೊಳಿಸಲಾಗಿತ್ತು. ಇದರಿಂದ ಆ ಬಾಲಕನಿಗೆ ಸುಮಾರು 150 ಹೊಲಿಗೆಗಳನ್ನು ಹಾಕಲಾಗಿತ್ತು. 3 ದಿನಗಳ ಕಾಲ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೆಪ್ಟೆಂಬರ್ 3ರಂದು ಬಾಲಕ ಆಟವಾಡುತ್ತಿದ್ದ ಪಾರ್ಕ್​ನಲ್ಲಿ ಈ ಘಟನೆ ಸಂಭವಿಸಿತ್ತು. ನಾಯಿಯ ಮಾಲೀಕ ಆ ನಾಯಿಯನ್ನು ಪಾರ್ಕ್​ಗೆ ಕರೆದುಕೊಂಡು ಬಂದಾಗ ಅಲ್ಲಿದ್ದ ಬಾಲಕನ ಮುಖಕ್ಕೆ ಕಚ್ಚಿತ್ತು. ಈ ಘಟನೆಯ ಸಿಸಿಟಿವಿ ದೃಶ್ಯಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡ ನಂತರ ಈ ಘಟನೆಯು ಬೆಳಕಿಗೆ ಬಂದಿತ್ತು. ನಾಯಿ ಓಡಿ ಹೋಗಿ ಬಾಲಕನ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿದೆ.

ಇದನ್ನೂ ಓದಿ: ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ; ಶ್ವಾನದ ಮಾಲೀಕರಿಗೆ 5,000 ರೂ. ದಂಡ

ಪಕ್ಕದಲ್ಲಿದ್ದವರು ನಾಯಿಯ ಹಿಡಿತದಿಂದ ಬಾಲಕನನ್ನು ರಕ್ಷಿಸಿದರು. ಇಲ್ಲವಾದರೆ ಆ ಬಾಲಕನ ಪ್ರಾಣಕ್ಕೆ ಸಂಚಕಾರ ಉಂಟಾಗುವ ಸಾಧ್ಯತೆಯಿತ್ತು. ಆದರೆ ಅಷ್ಟರಲ್ಲಾಗಲೇ ಆ ನಾಯಿ ಬಾಲಕನ ಮುಖಕ್ಕೆ ತೀವ್ರವಾಗಿ ಕಚ್ಚಿತ್ತು. ಇದರಿಂದ ಬಾಲಕನ ಮುಖದ ಎಡಭಾಗದಲ್ಲಿ ಕಿವಿಯವರೆಗೆ 150 ಹೊಲಿಗೆಗಳನ್ನು ಹಾಕಲಾಗಿದೆ. ಆ ಬಾಲಕ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಎಂದು ವರದಿಗಳು ತಿಳಿಸಿವೆ.

ಈ ಘಟನೆಯ ವಿಡಿಯೋ ನೋಡಿದವರು ನಾಯಿಯ ಮಾಲೀಕರ ವಿರುದ್ಧ ಕಿಡಿ ಕಾರಿದ್ದಾರೆ. ನಾಯಿ ಅಥವಾ ಸಾಕುಪ್ರಾಣಿಗಳನ್ನು ಸಾರ್ವಜನಿಕ ಸ್ಥಳಗಳಿಗೆ ಕರೆತರುವ ಮೊದಲು ಅದರ ಬಾಯಿಗೆ ಟೇಪ್ ಹಾಕುವಂತೆ ಮಾಲೀಕರಿಗೆ ಒತ್ತಾಯಿಸಿದ್ದಾರೆ. ಈ ವಿಡಿಯೋ ಅಧಿಕಾರಿಗಳ ಗಮನ ಸೆಳೆದಿದೆ. ಪರವಾನಗಿ ಅಥವಾ ನೋಂದಣಿ ಇಲ್ಲದೆ ನಾಯಿಯನ್ನು ಸಾಕಿದ್ದಕ್ಕಾಗಿ ಮುನ್ಸಿಪಲ್ ಕಾರ್ಪೊರೇಷನ್ ನಾಯಿ ಮಾಲೀಕ ಗಾಜಿಯಾಬಾದ್‌ನ ಸುಭಾಷ್ ತ್ಯಾಗಿಗೆ 50,000 ರೂ. ದಂಡ ವಿಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ