AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 11 ವರ್ಷದ ಬಾಲಕನ ಮುಖಕ್ಕೆ ಕಚ್ಚಿದ ಪಿಟ್​ಬುಲ್ ನಾಯಿ; ಬರೋಬ್ಬರಿ 150 ಹೊಲಿಗೆ ಹಾಕಿದ ವೈದ್ಯರು

ಸೆಪ್ಟೆಂಬರ್ 3ರಂದು ಬಾಲಕ ಆಟವಾಡುತ್ತಿದ್ದ ಪಾರ್ಕ್​ನಲ್ಲಿ ಈ ಘಟನೆ ಸಂಭವಿಸಿತ್ತು. ನಾಯಿಯ ಮಾಲೀಕ ಆ ನಾಯಿಯನ್ನು ಪಾರ್ಕ್​ಗೆ ಕರೆದುಕೊಂಡು ಬಂದಾಗ ಅಲ್ಲಿದ್ದ ಬಾಲಕನ ಮುಖಕ್ಕೆ ಕಚ್ಚಿತ್ತು.

Viral Video: 11 ವರ್ಷದ ಬಾಲಕನ ಮುಖಕ್ಕೆ ಕಚ್ಚಿದ ಪಿಟ್​ಬುಲ್ ನಾಯಿ; ಬರೋಬ್ಬರಿ 150 ಹೊಲಿಗೆ ಹಾಕಿದ ವೈದ್ಯರು
ಪಿಟ್‌ಬುಲ್‌ ನಾಯಿ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 09, 2022 | 12:44 PM

Share

ಗಾಜಿಯಾಬಾದ್: ಕಳೆದ ವಾರ ನಡೆದ ಭೀಕರ ಘಟನೆಯಲ್ಲಿ 11 ವರ್ಷದ ಬಾಲಕನ ಮೇಲೆ ಪಿಟ್‌ಬುಲ್‌ (Pit Bull) ನಾಯಿ ದಾಳಿ ನಡೆಸಿತ್ತು. ಆ ಬಾಲಕನ ಮುಖದ ಮೇಲೆ ದಾಳಿ ನಡೆಸಿ, ಗಾಯಗೊಳಿಸಲಾಗಿತ್ತು. ಇದರಿಂದ ಆ ಬಾಲಕನಿಗೆ ಸುಮಾರು 150 ಹೊಲಿಗೆಗಳನ್ನು ಹಾಕಲಾಗಿತ್ತು. 3 ದಿನಗಳ ಕಾಲ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೆಪ್ಟೆಂಬರ್ 3ರಂದು ಬಾಲಕ ಆಟವಾಡುತ್ತಿದ್ದ ಪಾರ್ಕ್​ನಲ್ಲಿ ಈ ಘಟನೆ ಸಂಭವಿಸಿತ್ತು. ನಾಯಿಯ ಮಾಲೀಕ ಆ ನಾಯಿಯನ್ನು ಪಾರ್ಕ್​ಗೆ ಕರೆದುಕೊಂಡು ಬಂದಾಗ ಅಲ್ಲಿದ್ದ ಬಾಲಕನ ಮುಖಕ್ಕೆ ಕಚ್ಚಿತ್ತು. ಈ ಘಟನೆಯ ಸಿಸಿಟಿವಿ ದೃಶ್ಯಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡ ನಂತರ ಈ ಘಟನೆಯು ಬೆಳಕಿಗೆ ಬಂದಿತ್ತು. ನಾಯಿ ಓಡಿ ಹೋಗಿ ಬಾಲಕನ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿದೆ.

ಇದನ್ನೂ ಓದಿ: ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ; ಶ್ವಾನದ ಮಾಲೀಕರಿಗೆ 5,000 ರೂ. ದಂಡ

ಪಕ್ಕದಲ್ಲಿದ್ದವರು ನಾಯಿಯ ಹಿಡಿತದಿಂದ ಬಾಲಕನನ್ನು ರಕ್ಷಿಸಿದರು. ಇಲ್ಲವಾದರೆ ಆ ಬಾಲಕನ ಪ್ರಾಣಕ್ಕೆ ಸಂಚಕಾರ ಉಂಟಾಗುವ ಸಾಧ್ಯತೆಯಿತ್ತು. ಆದರೆ ಅಷ್ಟರಲ್ಲಾಗಲೇ ಆ ನಾಯಿ ಬಾಲಕನ ಮುಖಕ್ಕೆ ತೀವ್ರವಾಗಿ ಕಚ್ಚಿತ್ತು. ಇದರಿಂದ ಬಾಲಕನ ಮುಖದ ಎಡಭಾಗದಲ್ಲಿ ಕಿವಿಯವರೆಗೆ 150 ಹೊಲಿಗೆಗಳನ್ನು ಹಾಕಲಾಗಿದೆ. ಆ ಬಾಲಕ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಎಂದು ವರದಿಗಳು ತಿಳಿಸಿವೆ.

ಈ ಘಟನೆಯ ವಿಡಿಯೋ ನೋಡಿದವರು ನಾಯಿಯ ಮಾಲೀಕರ ವಿರುದ್ಧ ಕಿಡಿ ಕಾರಿದ್ದಾರೆ. ನಾಯಿ ಅಥವಾ ಸಾಕುಪ್ರಾಣಿಗಳನ್ನು ಸಾರ್ವಜನಿಕ ಸ್ಥಳಗಳಿಗೆ ಕರೆತರುವ ಮೊದಲು ಅದರ ಬಾಯಿಗೆ ಟೇಪ್ ಹಾಕುವಂತೆ ಮಾಲೀಕರಿಗೆ ಒತ್ತಾಯಿಸಿದ್ದಾರೆ. ಈ ವಿಡಿಯೋ ಅಧಿಕಾರಿಗಳ ಗಮನ ಸೆಳೆದಿದೆ. ಪರವಾನಗಿ ಅಥವಾ ನೋಂದಣಿ ಇಲ್ಲದೆ ನಾಯಿಯನ್ನು ಸಾಕಿದ್ದಕ್ಕಾಗಿ ಮುನ್ಸಿಪಲ್ ಕಾರ್ಪೊರೇಷನ್ ನಾಯಿ ಮಾಲೀಕ ಗಾಜಿಯಾಬಾದ್‌ನ ಸುಭಾಷ್ ತ್ಯಾಗಿಗೆ 50,000 ರೂ. ದಂಡ ವಿಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!