AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ನಿಲ್ದಾಣಗಳಲ್ಲಿ ಇನ್ನು ಮುಂದೆ ಕುಡಿಕೆಯಲ್ಲಿ ಮಾತ್ರ ಚಹಾ ಸಿಗುತ್ತೆ: ರೈಲ್ವೇ ಸಚಿವ ಪಿಯೂಷ್​ ಗೋಯಲ್

ಪ್ಲಾಸ್ಟಿಕ್​ ಮುಕ್ತ ಭಾರತದ ಭಾಗವಾಗಿ ರೈಲ್ವೆ ನಿಲ್ದಾಣಗಳಲ್ಲಿ ಕುಲ್ಹಾದ್​​ ಅಂದರೆ, ಮಣ್ಣಿನ ಕುಡಿಕೆಗಳಿಂದ ಮಾತ್ರ ಚಹಾ ಸಿಗುತ್ತದೆ ಎಂದು ಪಿಯೂಷ್ ಗೋಯಲ್ ತಿಳಿಸಿದರು.

ರೈಲ್ವೇ ನಿಲ್ದಾಣಗಳಲ್ಲಿ ಇನ್ನು ಮುಂದೆ  ಕುಡಿಕೆಯಲ್ಲಿ ಮಾತ್ರ ಚಹಾ ಸಿಗುತ್ತೆ: ರೈಲ್ವೇ ಸಚಿವ ಪಿಯೂಷ್​ ಗೋಯಲ್
ಪೀಯುಷ್ ಗೋಯಲ್ ಚಹ ಕುಡಿಯುತ್ತಿರುವ ಸಾಂದರ್ಭಿಕ ಚಿತ್ರ
shruti hegde
|

Updated on:Nov 30, 2020 | 1:29 PM

Share

ದೆಹಲಿ: ಪ್ಲಾಸ್ಟಿಕ್​ ಮುಕ್ತ ಭಾರತದ ಭಾಗವಾಗಿ ರೈಲ್ವೆ ನಿಲ್ದಾಣಗಳಲ್ಲಿ ಕುಲ್ಹಾದ್​​ ಅಂದರೆ, ಮಣ್ಣಿನ ಕುಡಿಕೆಗಳಿಂದ ಮಾತ್ರ ಇನ್ನು ಮುಂದೆ ಚಹಾ ಸಿಗುತ್ತದೆ ಎಂದು ಭಾನುವಾರ ರಾಜಸ್ಥಾನ ಅಲ್ವಾರ್​ನ ಧಿಗವಾಡ ಬಂಡಿಕುಯಿ ರೈಲ್ವೇ ಬ್ಲಾಕ್​ನಲ್ಲಿ ವಿದ್ಯುದ್ದೀಕೃತ ರೈಲ್ವೆ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ರೈಲ್ವೇ ಸಚಿವ ಪಿಯೂಷ್​ ಗೋಯಲ್ ತಿಳಿಸಿದರು.

ದೇಶ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡುವ ಗುರಿಯತ್ತ ಸಾಗುತ್ತಿದೆ. ಈಗಾಗಲೇ 400 ರೈಲ್ವೇ ನಿಲ್ದಾಣದಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಮುಂಬರುವ ದಿನಗಳಲ್ಲಿ ದೇಶದ ಎಲ್ಲಾ ರೈಲ್ವೇ ನಿಲ್ದಾಣಗಳಲ್ಲಿ ಈ ಯೋಜನೆಯನ್ನು ಹಮ್ಮಿಕೊಳ್ಳುವ ಉದ್ದೇಶವನ್ನು ಹೊಂದಿದ್ದೇವೆ. ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಇದೊಂದು ಚಿಕ್ಕ ಕೊಡುಗೆಯಾಗಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದರು.

ಇದರಿಂದ, ಮಣ್ಣಿನ ಕುಡಿಕೆ ತಯಾರಿಸುವ ಕುಂಬಾರರಿಗೆ ಉದ್ಯೋಗ ಸಿಗುತ್ತದೆ. ನೈಸರ್ಗಿಕವಾಗಿ ಯೋಚಿಸಿದರೆ ಒಳ್ಳೆಯ ವ್ಯವಸ್ಥೆ. ಪರಿಸರಕ್ಕೆ ಮಣ್ಣಿನ ಕುಡಿಕೆಯಿಂದ ಯಾವುದೇ ಹಾನಿ ಇಲ್ಲ. ಆದ್ದರಿಂದ ಕುಲ್ಹಾದ್​ನಲ್ಲಿ ಚಹಾ ಮಾರಾಟ ಮಾಡುವುದು ನಮ್ಮ ಉದ್ದೇಶ ಎಂದು ಗೋಯಲ್ ತಿಳಿಸಿದರು.

ಮಣ್ಣಿನ ಕುಡಿಕೆಯ (ಕುಲ್ಹಾದ್ ) ಚಹಾ

2014ರಲ್ಲಿ ಪ್ರಧಾನಿ ಮೋದಿ ಆಡಳಿತ ಪ್ರಾರಂಭವಾದಾಗ ದೇಶದಲ್ಲಿ ಪ್ಲಾಸ್ಟಿಕ್ ನಿಷೇಧದ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಜೊತೆಗೆ, ಖಾದಿ ಗ್ರಾಮೋದ್ಯೋಗ ವ್ಯವಸ್ಥೆಯೂ (KVIC) ಸಹಕರಿಸುತ್ತಿದೆ. ಇದಕ್ಕೆ ಪೂರಕವಾಗಿ ನಮ್ಮ ರೈಲ್ವೇ ಕೂಡ ಈ ಯೋಜನೆಯತ್ತ ಒತ್ತು ಕೊಟ್ಟು ಮುನ್ನಡೆದರೆ ದೇಶವನ್ನು ಸಂಪೂರ್ಣವಾಗಿ ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ನೆರವಾದಂತೆ ಎಂದು ಗೋಯಲ್ ಅಭಿಪ್ರಾಯಪಟ್ಟರು.

Published On - 1:17 pm, Mon, 30 November 20

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!