AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ನಿಲ್ದಾಣಗಳಲ್ಲಿ ಇನ್ನು ಮುಂದೆ ಕುಡಿಕೆಯಲ್ಲಿ ಮಾತ್ರ ಚಹಾ ಸಿಗುತ್ತೆ: ರೈಲ್ವೇ ಸಚಿವ ಪಿಯೂಷ್​ ಗೋಯಲ್

ಪ್ಲಾಸ್ಟಿಕ್​ ಮುಕ್ತ ಭಾರತದ ಭಾಗವಾಗಿ ರೈಲ್ವೆ ನಿಲ್ದಾಣಗಳಲ್ಲಿ ಕುಲ್ಹಾದ್​​ ಅಂದರೆ, ಮಣ್ಣಿನ ಕುಡಿಕೆಗಳಿಂದ ಮಾತ್ರ ಚಹಾ ಸಿಗುತ್ತದೆ ಎಂದು ಪಿಯೂಷ್ ಗೋಯಲ್ ತಿಳಿಸಿದರು.

ರೈಲ್ವೇ ನಿಲ್ದಾಣಗಳಲ್ಲಿ ಇನ್ನು ಮುಂದೆ  ಕುಡಿಕೆಯಲ್ಲಿ ಮಾತ್ರ ಚಹಾ ಸಿಗುತ್ತೆ: ರೈಲ್ವೇ ಸಚಿವ ಪಿಯೂಷ್​ ಗೋಯಲ್
ಪೀಯುಷ್ ಗೋಯಲ್ ಚಹ ಕುಡಿಯುತ್ತಿರುವ ಸಾಂದರ್ಭಿಕ ಚಿತ್ರ
shruti hegde
|

Updated on:Nov 30, 2020 | 1:29 PM

Share

ದೆಹಲಿ: ಪ್ಲಾಸ್ಟಿಕ್​ ಮುಕ್ತ ಭಾರತದ ಭಾಗವಾಗಿ ರೈಲ್ವೆ ನಿಲ್ದಾಣಗಳಲ್ಲಿ ಕುಲ್ಹಾದ್​​ ಅಂದರೆ, ಮಣ್ಣಿನ ಕುಡಿಕೆಗಳಿಂದ ಮಾತ್ರ ಇನ್ನು ಮುಂದೆ ಚಹಾ ಸಿಗುತ್ತದೆ ಎಂದು ಭಾನುವಾರ ರಾಜಸ್ಥಾನ ಅಲ್ವಾರ್​ನ ಧಿಗವಾಡ ಬಂಡಿಕುಯಿ ರೈಲ್ವೇ ಬ್ಲಾಕ್​ನಲ್ಲಿ ವಿದ್ಯುದ್ದೀಕೃತ ರೈಲ್ವೆ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ರೈಲ್ವೇ ಸಚಿವ ಪಿಯೂಷ್​ ಗೋಯಲ್ ತಿಳಿಸಿದರು.

ದೇಶ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡುವ ಗುರಿಯತ್ತ ಸಾಗುತ್ತಿದೆ. ಈಗಾಗಲೇ 400 ರೈಲ್ವೇ ನಿಲ್ದಾಣದಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಮುಂಬರುವ ದಿನಗಳಲ್ಲಿ ದೇಶದ ಎಲ್ಲಾ ರೈಲ್ವೇ ನಿಲ್ದಾಣಗಳಲ್ಲಿ ಈ ಯೋಜನೆಯನ್ನು ಹಮ್ಮಿಕೊಳ್ಳುವ ಉದ್ದೇಶವನ್ನು ಹೊಂದಿದ್ದೇವೆ. ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಇದೊಂದು ಚಿಕ್ಕ ಕೊಡುಗೆಯಾಗಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದರು.

ಇದರಿಂದ, ಮಣ್ಣಿನ ಕುಡಿಕೆ ತಯಾರಿಸುವ ಕುಂಬಾರರಿಗೆ ಉದ್ಯೋಗ ಸಿಗುತ್ತದೆ. ನೈಸರ್ಗಿಕವಾಗಿ ಯೋಚಿಸಿದರೆ ಒಳ್ಳೆಯ ವ್ಯವಸ್ಥೆ. ಪರಿಸರಕ್ಕೆ ಮಣ್ಣಿನ ಕುಡಿಕೆಯಿಂದ ಯಾವುದೇ ಹಾನಿ ಇಲ್ಲ. ಆದ್ದರಿಂದ ಕುಲ್ಹಾದ್​ನಲ್ಲಿ ಚಹಾ ಮಾರಾಟ ಮಾಡುವುದು ನಮ್ಮ ಉದ್ದೇಶ ಎಂದು ಗೋಯಲ್ ತಿಳಿಸಿದರು.

ಮಣ್ಣಿನ ಕುಡಿಕೆಯ (ಕುಲ್ಹಾದ್ ) ಚಹಾ

2014ರಲ್ಲಿ ಪ್ರಧಾನಿ ಮೋದಿ ಆಡಳಿತ ಪ್ರಾರಂಭವಾದಾಗ ದೇಶದಲ್ಲಿ ಪ್ಲಾಸ್ಟಿಕ್ ನಿಷೇಧದ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಜೊತೆಗೆ, ಖಾದಿ ಗ್ರಾಮೋದ್ಯೋಗ ವ್ಯವಸ್ಥೆಯೂ (KVIC) ಸಹಕರಿಸುತ್ತಿದೆ. ಇದಕ್ಕೆ ಪೂರಕವಾಗಿ ನಮ್ಮ ರೈಲ್ವೇ ಕೂಡ ಈ ಯೋಜನೆಯತ್ತ ಒತ್ತು ಕೊಟ್ಟು ಮುನ್ನಡೆದರೆ ದೇಶವನ್ನು ಸಂಪೂರ್ಣವಾಗಿ ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ನೆರವಾದಂತೆ ಎಂದು ಗೋಯಲ್ ಅಭಿಪ್ರಾಯಪಟ್ಟರು.

Published On - 1:17 pm, Mon, 30 November 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ