AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡಿಕೆಗೆ ತಕ್ಕಂತೆ ರೈಲು ಸಂಚಾರ ಆರಂಭಿಸಲಾಗುವುದು: ರೈಲ್ವೆ ಸಚಿವ ಪಿಯೂಷ್ ಗೋಯಲ್

ತಿರುಮಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಬಾಲಾಜಿಯ ದರ್ಶನ ಪಡೆದರು. ಸಚಿವರನ್ನು ಸ್ವಾಗತಿಸಿ, ದರ್ಶನಕ್ಕೆ ಟಿಟಿಡಿ ಅಧಿಕಾರಿಗಳು ವ್ಯವಸ್ಥೆಯನ್ನು ಮಾಡಿದ್ದರು. ರೈಲ್ವೆ ಸಚಿವ ಪಿಯೂಷ್ ಗೋಯಲ್​ಗೆ ಆಂಧ್ರದ ಹಣಕಾಸು ಸಚಿವ ರಾಜೇಂದ್ರನಾಥರೆಡ್ಡಿ ಸಾಥ್ ನೀಡಿದರು.

ಬೇಡಿಕೆಗೆ ತಕ್ಕಂತೆ ರೈಲು ಸಂಚಾರ ಆರಂಭಿಸಲಾಗುವುದು: ರೈಲ್ವೆ ಸಚಿವ ಪಿಯೂಷ್ ಗೋಯಲ್
ರೈಲ್ವೆ ಸಚಿವ ಪಿಯೂಷ್ ಗೋಯಲ್
sandhya thejappa
|

Updated on: Mar 13, 2021 | 11:20 AM

Share

ಹೈದರಾಬಾದ್: ಭಾರತ ವಿಶ್ವಕ್ಕೆ ತನ್ನ ಸಾಮರ್ಥ್ಯ ಏನೆಂದು ತೋರಿಸಿದೆ. ಪ್ರಪಂಚದ ಹಲವು ರಾಷ್ಟ್ರಗಳು ಭಾರತದತ್ತ ನೋಡುತ್ತಿವೆ. ವಿಶ್ವದ 150 ದೇಶಗಳಿಗೆ ಭಾರತ ಔಷಧಿಗಳನ್ನು ಕಳಿಸಿದೆ. 57 ದೇಶಗಳಿಗೆ ಕೋವಿಡ್ ಲಸಿಕೆಯನ್ನು ಪೂರೈಸುತ್ತಿದೆ ಎಂದು ಮಾತನಾಡಿದ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ದೇಶದಲ್ಲಿ ಶೇ.80ರಷ್ಟು ರೈಲುಗಳ ಸಂಚಾರ ಆರಂಭವಾಗಿದೆ. ಬೇಡಿಕೆಗೆ ತಕ್ಕಂತೆ ರೈಲು ಸಂಚಾರ ಆರಂಭಿಸಲಾಗುವುದು ಎಂದು ತಿಳಿಸಿದರು.

ತಿರುಮಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಬಾಲಾಜಿಯ ದರ್ಶನ ಪಡೆದರು. ಸಚಿವರನ್ನು ಸ್ವಾಗತಿಸಿ, ದರ್ಶನಕ್ಕೆ ಟಿಟಿಡಿ ಅಧಿಕಾರಿಗಳು ವ್ಯವಸ್ಥೆಯನ್ನು ಮಾಡಿದ್ದರು. ರೈಲ್ವೆ ಸಚಿವ ಪಿಯೂಷ್ ಗೋಯಲ್​ಗೆ ಆಂಧ್ರದ ಹಣಕಾಸು ಸಚಿವ ರಾಜೇಂದ್ರನಾಥರೆಡ್ಡಿ ಸಾಥ್ ನೀಡಿದರು.

ವಸುದೈವಕ ಕುಟುಂಬವನ್ನಾಗಿ ನೋಡುತ್ತಿರುವ ಮೋದಿ 130 ಕೋಟಿ ಜನಸಂಖ್ಯೆಯುಳ್ಳ ಭಾರತ ಇಡೀ ವಿಶ್ವಕ್ಕೆ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ವಿಶ್ವದಲ್ಲಿ ಸ್ವಾಭಿಮಾನಿ ಭಾರತವಾಗಿ ಸ್ಥರವಾಗಿ ನಿಂತಿರುವ ವೇಳೆ ಬಾಲಾಜಿಯ ದರ್ಶನ ಸಂತಸ ಉಂಟು ಮಾಡಿದೆ. ಪ್ರಪಂಚದ ಅನೇಕ ದೇಶಗಳು ಭಾರತದತ್ತ ತಿರುಗಿ ನೋಡುತ್ತಿವೆ. ಪ್ರಧಾನಿ ಮೋದಿ ಇಡೀ ವಿಶ್ವವನ್ನು ವಸುದೈವಕ ಕುಟುಂಬವನ್ನಾಗಿ ನೋಡುತ್ತಿದ್ದಾರೆ. ಕೊರೊನಾ ವೇಳೆ 150 ದೇಶಗಳಿಗೆ ಭಾರತ ಔಷಧಿಗಳನ್ನು ಕಳುಹಿಸಿರುವುದು ಸಂತಸದ ವಿಷಯ. ಸಂಪೂರ್ಣವಾಗಿ ಕೊರೊನಾ ಹಾವಳಿ ಕಡಿಮೆಯಾಗಿಲ್ಲ. ಇದರಿಂದ ಕೆಲವು ದಿನ ಕೊರೊನಾ ನಿಬಂಧನೆಗಳನ್ನು ಪಾಲಿಸಬೇಕಿದೆ ಎಂದು ಹೇಳಿದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಅಧಿಕ ಸರಕು ರವಾನೆಯನ್ನು ಭಾರತೀಯ ರೈಲ್ವೆ ಮಾಡಿದೆ. ಈಗಾಗಲೇ ಶೇಕಡಾ 80ರಷ್ಟು ರೈಲುಗಳ ಓಡಾಟ ಆರಂಭಿಸಲಾಗಿದೆ. ಪ್ರಯಾಣಿಕರ ಬೇಡಿಕೆ ಇರುವ ಕಡೆಗಳಲ್ಲಿ ಇನ್ನಷ್ಟು ರೈಲು ಓಡಿಸಲಾಗುವುದು. ತಿರುಪತಿಯಲ್ಲಿ ರೈಲ್ವೆ ಸ್ಟೇಷನ್ ವಿಸ್ತರಣೆ ಕಾರ್ಯಗಳು ವೇಗವಾಗಿ ನಡೆಯುತ್ತಿವೆ. ಇನ್ನಷ್ಟು ಮಂದಿ ಭಕ್ತರಿಗೆ ಬಾಲಾಜಿ ದರ್ಶನಕ್ಕೆ ಬರಲು ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ

Piyush Goyal Tweet: ಚನ್ನಪಟ್ಟಣದ ರೈಲ್ವೇ ನಿಲ್ದಾಣದಲ್ಲಿ ಬೊಂಬೆಗಳ ಪ್ರದರ್ಶನ: ರೈಲ್ವೇ ಸಚಿವ ಪಿಯೂಶ್ ಗೋಯಲ್ ಟ್ವೀಟ್, ಪ್ರಧಾನಿ ಮೋದಿ ರೀಟ್ವೀಟ್

ವಿಜಯಪುರ ಜನರಿಗೆ ಶಾಪವಾಗಿ ಪರಿಣಮಿಸಿದ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ