AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡಿಕೆಗೆ ತಕ್ಕಂತೆ ರೈಲು ಸಂಚಾರ ಆರಂಭಿಸಲಾಗುವುದು: ರೈಲ್ವೆ ಸಚಿವ ಪಿಯೂಷ್ ಗೋಯಲ್

ತಿರುಮಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಬಾಲಾಜಿಯ ದರ್ಶನ ಪಡೆದರು. ಸಚಿವರನ್ನು ಸ್ವಾಗತಿಸಿ, ದರ್ಶನಕ್ಕೆ ಟಿಟಿಡಿ ಅಧಿಕಾರಿಗಳು ವ್ಯವಸ್ಥೆಯನ್ನು ಮಾಡಿದ್ದರು. ರೈಲ್ವೆ ಸಚಿವ ಪಿಯೂಷ್ ಗೋಯಲ್​ಗೆ ಆಂಧ್ರದ ಹಣಕಾಸು ಸಚಿವ ರಾಜೇಂದ್ರನಾಥರೆಡ್ಡಿ ಸಾಥ್ ನೀಡಿದರು.

ಬೇಡಿಕೆಗೆ ತಕ್ಕಂತೆ ರೈಲು ಸಂಚಾರ ಆರಂಭಿಸಲಾಗುವುದು: ರೈಲ್ವೆ ಸಚಿವ ಪಿಯೂಷ್ ಗೋಯಲ್
ರೈಲ್ವೆ ಸಚಿವ ಪಿಯೂಷ್ ಗೋಯಲ್
sandhya thejappa
|

Updated on: Mar 13, 2021 | 11:20 AM

Share

ಹೈದರಾಬಾದ್: ಭಾರತ ವಿಶ್ವಕ್ಕೆ ತನ್ನ ಸಾಮರ್ಥ್ಯ ಏನೆಂದು ತೋರಿಸಿದೆ. ಪ್ರಪಂಚದ ಹಲವು ರಾಷ್ಟ್ರಗಳು ಭಾರತದತ್ತ ನೋಡುತ್ತಿವೆ. ವಿಶ್ವದ 150 ದೇಶಗಳಿಗೆ ಭಾರತ ಔಷಧಿಗಳನ್ನು ಕಳಿಸಿದೆ. 57 ದೇಶಗಳಿಗೆ ಕೋವಿಡ್ ಲಸಿಕೆಯನ್ನು ಪೂರೈಸುತ್ತಿದೆ ಎಂದು ಮಾತನಾಡಿದ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ದೇಶದಲ್ಲಿ ಶೇ.80ರಷ್ಟು ರೈಲುಗಳ ಸಂಚಾರ ಆರಂಭವಾಗಿದೆ. ಬೇಡಿಕೆಗೆ ತಕ್ಕಂತೆ ರೈಲು ಸಂಚಾರ ಆರಂಭಿಸಲಾಗುವುದು ಎಂದು ತಿಳಿಸಿದರು.

ತಿರುಮಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಬಾಲಾಜಿಯ ದರ್ಶನ ಪಡೆದರು. ಸಚಿವರನ್ನು ಸ್ವಾಗತಿಸಿ, ದರ್ಶನಕ್ಕೆ ಟಿಟಿಡಿ ಅಧಿಕಾರಿಗಳು ವ್ಯವಸ್ಥೆಯನ್ನು ಮಾಡಿದ್ದರು. ರೈಲ್ವೆ ಸಚಿವ ಪಿಯೂಷ್ ಗೋಯಲ್​ಗೆ ಆಂಧ್ರದ ಹಣಕಾಸು ಸಚಿವ ರಾಜೇಂದ್ರನಾಥರೆಡ್ಡಿ ಸಾಥ್ ನೀಡಿದರು.

ವಸುದೈವಕ ಕುಟುಂಬವನ್ನಾಗಿ ನೋಡುತ್ತಿರುವ ಮೋದಿ 130 ಕೋಟಿ ಜನಸಂಖ್ಯೆಯುಳ್ಳ ಭಾರತ ಇಡೀ ವಿಶ್ವಕ್ಕೆ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ವಿಶ್ವದಲ್ಲಿ ಸ್ವಾಭಿಮಾನಿ ಭಾರತವಾಗಿ ಸ್ಥರವಾಗಿ ನಿಂತಿರುವ ವೇಳೆ ಬಾಲಾಜಿಯ ದರ್ಶನ ಸಂತಸ ಉಂಟು ಮಾಡಿದೆ. ಪ್ರಪಂಚದ ಅನೇಕ ದೇಶಗಳು ಭಾರತದತ್ತ ತಿರುಗಿ ನೋಡುತ್ತಿವೆ. ಪ್ರಧಾನಿ ಮೋದಿ ಇಡೀ ವಿಶ್ವವನ್ನು ವಸುದೈವಕ ಕುಟುಂಬವನ್ನಾಗಿ ನೋಡುತ್ತಿದ್ದಾರೆ. ಕೊರೊನಾ ವೇಳೆ 150 ದೇಶಗಳಿಗೆ ಭಾರತ ಔಷಧಿಗಳನ್ನು ಕಳುಹಿಸಿರುವುದು ಸಂತಸದ ವಿಷಯ. ಸಂಪೂರ್ಣವಾಗಿ ಕೊರೊನಾ ಹಾವಳಿ ಕಡಿಮೆಯಾಗಿಲ್ಲ. ಇದರಿಂದ ಕೆಲವು ದಿನ ಕೊರೊನಾ ನಿಬಂಧನೆಗಳನ್ನು ಪಾಲಿಸಬೇಕಿದೆ ಎಂದು ಹೇಳಿದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಅಧಿಕ ಸರಕು ರವಾನೆಯನ್ನು ಭಾರತೀಯ ರೈಲ್ವೆ ಮಾಡಿದೆ. ಈಗಾಗಲೇ ಶೇಕಡಾ 80ರಷ್ಟು ರೈಲುಗಳ ಓಡಾಟ ಆರಂಭಿಸಲಾಗಿದೆ. ಪ್ರಯಾಣಿಕರ ಬೇಡಿಕೆ ಇರುವ ಕಡೆಗಳಲ್ಲಿ ಇನ್ನಷ್ಟು ರೈಲು ಓಡಿಸಲಾಗುವುದು. ತಿರುಪತಿಯಲ್ಲಿ ರೈಲ್ವೆ ಸ್ಟೇಷನ್ ವಿಸ್ತರಣೆ ಕಾರ್ಯಗಳು ವೇಗವಾಗಿ ನಡೆಯುತ್ತಿವೆ. ಇನ್ನಷ್ಟು ಮಂದಿ ಭಕ್ತರಿಗೆ ಬಾಲಾಜಿ ದರ್ಶನಕ್ಕೆ ಬರಲು ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ

Piyush Goyal Tweet: ಚನ್ನಪಟ್ಟಣದ ರೈಲ್ವೇ ನಿಲ್ದಾಣದಲ್ಲಿ ಬೊಂಬೆಗಳ ಪ್ರದರ್ಶನ: ರೈಲ್ವೇ ಸಚಿವ ಪಿಯೂಶ್ ಗೋಯಲ್ ಟ್ವೀಟ್, ಪ್ರಧಾನಿ ಮೋದಿ ರೀಟ್ವೀಟ್

ವಿಜಯಪುರ ಜನರಿಗೆ ಶಾಪವಾಗಿ ಪರಿಣಮಿಸಿದ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?