Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡಿಕೆಗೆ ತಕ್ಕಂತೆ ರೈಲು ಸಂಚಾರ ಆರಂಭಿಸಲಾಗುವುದು: ರೈಲ್ವೆ ಸಚಿವ ಪಿಯೂಷ್ ಗೋಯಲ್

ತಿರುಮಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಬಾಲಾಜಿಯ ದರ್ಶನ ಪಡೆದರು. ಸಚಿವರನ್ನು ಸ್ವಾಗತಿಸಿ, ದರ್ಶನಕ್ಕೆ ಟಿಟಿಡಿ ಅಧಿಕಾರಿಗಳು ವ್ಯವಸ್ಥೆಯನ್ನು ಮಾಡಿದ್ದರು. ರೈಲ್ವೆ ಸಚಿವ ಪಿಯೂಷ್ ಗೋಯಲ್​ಗೆ ಆಂಧ್ರದ ಹಣಕಾಸು ಸಚಿವ ರಾಜೇಂದ್ರನಾಥರೆಡ್ಡಿ ಸಾಥ್ ನೀಡಿದರು.

ಬೇಡಿಕೆಗೆ ತಕ್ಕಂತೆ ರೈಲು ಸಂಚಾರ ಆರಂಭಿಸಲಾಗುವುದು: ರೈಲ್ವೆ ಸಚಿವ ಪಿಯೂಷ್ ಗೋಯಲ್
ರೈಲ್ವೆ ಸಚಿವ ಪಿಯೂಷ್ ಗೋಯಲ್
Follow us
sandhya thejappa
|

Updated on: Mar 13, 2021 | 11:20 AM

ಹೈದರಾಬಾದ್: ಭಾರತ ವಿಶ್ವಕ್ಕೆ ತನ್ನ ಸಾಮರ್ಥ್ಯ ಏನೆಂದು ತೋರಿಸಿದೆ. ಪ್ರಪಂಚದ ಹಲವು ರಾಷ್ಟ್ರಗಳು ಭಾರತದತ್ತ ನೋಡುತ್ತಿವೆ. ವಿಶ್ವದ 150 ದೇಶಗಳಿಗೆ ಭಾರತ ಔಷಧಿಗಳನ್ನು ಕಳಿಸಿದೆ. 57 ದೇಶಗಳಿಗೆ ಕೋವಿಡ್ ಲಸಿಕೆಯನ್ನು ಪೂರೈಸುತ್ತಿದೆ ಎಂದು ಮಾತನಾಡಿದ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ದೇಶದಲ್ಲಿ ಶೇ.80ರಷ್ಟು ರೈಲುಗಳ ಸಂಚಾರ ಆರಂಭವಾಗಿದೆ. ಬೇಡಿಕೆಗೆ ತಕ್ಕಂತೆ ರೈಲು ಸಂಚಾರ ಆರಂಭಿಸಲಾಗುವುದು ಎಂದು ತಿಳಿಸಿದರು.

ತಿರುಮಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಬಾಲಾಜಿಯ ದರ್ಶನ ಪಡೆದರು. ಸಚಿವರನ್ನು ಸ್ವಾಗತಿಸಿ, ದರ್ಶನಕ್ಕೆ ಟಿಟಿಡಿ ಅಧಿಕಾರಿಗಳು ವ್ಯವಸ್ಥೆಯನ್ನು ಮಾಡಿದ್ದರು. ರೈಲ್ವೆ ಸಚಿವ ಪಿಯೂಷ್ ಗೋಯಲ್​ಗೆ ಆಂಧ್ರದ ಹಣಕಾಸು ಸಚಿವ ರಾಜೇಂದ್ರನಾಥರೆಡ್ಡಿ ಸಾಥ್ ನೀಡಿದರು.

ವಸುದೈವಕ ಕುಟುಂಬವನ್ನಾಗಿ ನೋಡುತ್ತಿರುವ ಮೋದಿ 130 ಕೋಟಿ ಜನಸಂಖ್ಯೆಯುಳ್ಳ ಭಾರತ ಇಡೀ ವಿಶ್ವಕ್ಕೆ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ವಿಶ್ವದಲ್ಲಿ ಸ್ವಾಭಿಮಾನಿ ಭಾರತವಾಗಿ ಸ್ಥರವಾಗಿ ನಿಂತಿರುವ ವೇಳೆ ಬಾಲಾಜಿಯ ದರ್ಶನ ಸಂತಸ ಉಂಟು ಮಾಡಿದೆ. ಪ್ರಪಂಚದ ಅನೇಕ ದೇಶಗಳು ಭಾರತದತ್ತ ತಿರುಗಿ ನೋಡುತ್ತಿವೆ. ಪ್ರಧಾನಿ ಮೋದಿ ಇಡೀ ವಿಶ್ವವನ್ನು ವಸುದೈವಕ ಕುಟುಂಬವನ್ನಾಗಿ ನೋಡುತ್ತಿದ್ದಾರೆ. ಕೊರೊನಾ ವೇಳೆ 150 ದೇಶಗಳಿಗೆ ಭಾರತ ಔಷಧಿಗಳನ್ನು ಕಳುಹಿಸಿರುವುದು ಸಂತಸದ ವಿಷಯ. ಸಂಪೂರ್ಣವಾಗಿ ಕೊರೊನಾ ಹಾವಳಿ ಕಡಿಮೆಯಾಗಿಲ್ಲ. ಇದರಿಂದ ಕೆಲವು ದಿನ ಕೊರೊನಾ ನಿಬಂಧನೆಗಳನ್ನು ಪಾಲಿಸಬೇಕಿದೆ ಎಂದು ಹೇಳಿದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಅಧಿಕ ಸರಕು ರವಾನೆಯನ್ನು ಭಾರತೀಯ ರೈಲ್ವೆ ಮಾಡಿದೆ. ಈಗಾಗಲೇ ಶೇಕಡಾ 80ರಷ್ಟು ರೈಲುಗಳ ಓಡಾಟ ಆರಂಭಿಸಲಾಗಿದೆ. ಪ್ರಯಾಣಿಕರ ಬೇಡಿಕೆ ಇರುವ ಕಡೆಗಳಲ್ಲಿ ಇನ್ನಷ್ಟು ರೈಲು ಓಡಿಸಲಾಗುವುದು. ತಿರುಪತಿಯಲ್ಲಿ ರೈಲ್ವೆ ಸ್ಟೇಷನ್ ವಿಸ್ತರಣೆ ಕಾರ್ಯಗಳು ವೇಗವಾಗಿ ನಡೆಯುತ್ತಿವೆ. ಇನ್ನಷ್ಟು ಮಂದಿ ಭಕ್ತರಿಗೆ ಬಾಲಾಜಿ ದರ್ಶನಕ್ಕೆ ಬರಲು ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ

Piyush Goyal Tweet: ಚನ್ನಪಟ್ಟಣದ ರೈಲ್ವೇ ನಿಲ್ದಾಣದಲ್ಲಿ ಬೊಂಬೆಗಳ ಪ್ರದರ್ಶನ: ರೈಲ್ವೇ ಸಚಿವ ಪಿಯೂಶ್ ಗೋಯಲ್ ಟ್ವೀಟ್, ಪ್ರಧಾನಿ ಮೋದಿ ರೀಟ್ವೀಟ್

ವಿಜಯಪುರ ಜನರಿಗೆ ಶಾಪವಾಗಿ ಪರಿಣಮಿಸಿದ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ