AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಸಿಂಘು ಗಡಿಯಲ್ಲಿ ಪಿಜ್ಜಾ ತಿಂದ ಪ್ರತಿಭಟನಾ ರೈತರು

ನೂತನ ಕೃಷಿ ಕಾಯ್ದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧದ ರೈತರ ಪ್ರತಿಭಟನೆ ಹದಿನಾರು ದಿನಗಳನ್ನು ಪೂರೈಸಿದೆ. ಸಿಂಘು ಬಾರ್ಡರ್​ನಲ್ಲಿ ರೈತರು ಪಿಜ್ಜಾ ತಿನ್ನುತ್ತಿರುವ ಫೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

Delhi Chalo: ಸಿಂಘು ಗಡಿಯಲ್ಲಿ ಪಿಜ್ಜಾ ತಿಂದ ಪ್ರತಿಭಟನಾ ರೈತರು
ಸಿಂಘು ಗಡಿಯಲ್ಲಿ ಪಿಜ್ಝಾ ಶಾಪ್
TV9 Web
| Edited By: |

Updated on:Apr 07, 2022 | 10:47 AM

Share

ದೆಹಲಿ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯು 16 ದಿನಗಳನ್ನು ಪೂರೈಸಿದೆ. ಸರ್ಕಾರದ ನಿರ್ಧಾರದ ವಿರುದ್ಧ ಪಣತೊಟ್ಟಿರುವ ರೈತರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಸರ್ಕಾರ ಮಾತ್ರ ರೈತರ ಮನವೊಲಿಕೆಗೆ ಮಾತುಕತೆಯ ಪ್ರಯತ್ನ ನಡೆಸುತ್ತಿದೆ.

ಈ ನಡುವೆ ರೈತರು ಪ್ರತಿಭಟನೆಯಲ್ಲಿ ಪಿಜ್ಜಾ ತಿಂದಿರುವ ಬಗ್ಗೆ ವರದಿಯಾಗಿದೆ. ದೆಹಲಿ ಗಡಿಭಾಗವಾದ ಸಿಂಘು ಪ್ರದೇಶದಲ್ಲಿ ರೈತರು ಪಿಜ್ಜಾ ತಿನ್ನುತ್ತಿರುವ ಫೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಟ್ವಿಟರ್ ಟ್ರೆಂಡಿಂಗ್​ನಲ್ಲೂ ಸ್ಥಾನ ಪಡೆದಿರುವ ಪಿಜ್ಜಾ ಹ್ಯಾಷ್​ಟ್ಯಾಗ್​ನಲ್ಲಿ, ಇಂದು ಮಧ್ಯಾಹ್ನದ ವೇಳೆಗೆ ಲಕ್ಷಾಂತರ (1 ಲಕ್ಷ 16 ಸಾವಿರ) ಟ್ವೀಟ್​ಗಳಾಗಿವೆ.

ರೈತರ ಪಾದಗಳಿಗೆ ಮಸಾಜ್ ಮಾಡುವ ಫೋಟೋಗಳು ಈ ಮೊದಲು ಸುದ್ದಿಯಾಗಿತ್ತು. ಇದೀಗ ಪ್ರತಿಭಟನೆಯಲ್ಲಿ ಪಿಜ್ಜಾ ಬಂದಿರುವುದು ಸುದ್ದಿ ಮಾಡುತ್ತಿದೆ. ಈ ಬಗ್ಗೆ ವರದಿ ಮಾಡಿರುವ ‘ದಿ ಟ್ರಿಬ್ಯೂನ್’, ಭಾರತೀಯ ಕಿಸಾನ್ ಯೂನಿಯನ್​ನ ರೈತರು ಪಿಜ್ಜಾ ಅಂಗಡಿ ತೆರೆದಿರುವ ಬಗ್ಗೆ ಮಾಹಿತಿ ನೀಡಿದೆ. ಮಂಗಳವಾರ ಆರಂಭವಾಗಿರುವ ಈ ಪಿಜ್ಜಾ ಅಂಗಡಿ ಪ್ರತಿಭಟನೆ ಕೊನೆಯಾಗುವವರೆಗೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

ಪ್ರತಿಭಟನಾಕಾರರ ಉತ್ಸಾಹ ಹೆಚ್ಚಿಸಲು, ಅವರಿಗೆ ಬೆಂಬಲ ಸೂಚಿಸಲು ಪಿಜ್ಜಾ ಶಾಪ್ ತೆರೆದಿರುವುದಾಗಿ ಮಾಲೀಕ ತಿರ್ಲೋಚನ್ ಸಿಂಗ್ ತಿಳಿಸಿದ್ದಾರೆ. ಜಿಲ್ಲಾ ಪರಿಷತ್ ಸದಸ್ಯ, ಪ್ರಭ್​ದೀಪ್ ಸಿಂಗ್ ನರಂಗ್​ವಾಲ್ ಸಹಿತ ಎಲ್ಲಾ ವಯೋಮಾನದ ಜನರು ಈ ಕೆಲಸವನ್ನು ಅಭಿನಂದಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..

Published On - 4:00 pm, Sat, 12 December 20

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!