AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಸಿಂಘು ಗಡಿಯಲ್ಲಿ ಪಿಜ್ಜಾ ತಿಂದ ಪ್ರತಿಭಟನಾ ರೈತರು

ನೂತನ ಕೃಷಿ ಕಾಯ್ದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧದ ರೈತರ ಪ್ರತಿಭಟನೆ ಹದಿನಾರು ದಿನಗಳನ್ನು ಪೂರೈಸಿದೆ. ಸಿಂಘು ಬಾರ್ಡರ್​ನಲ್ಲಿ ರೈತರು ಪಿಜ್ಜಾ ತಿನ್ನುತ್ತಿರುವ ಫೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

Delhi Chalo: ಸಿಂಘು ಗಡಿಯಲ್ಲಿ ಪಿಜ್ಜಾ ತಿಂದ ಪ್ರತಿಭಟನಾ ರೈತರು
ಸಿಂಘು ಗಡಿಯಲ್ಲಿ ಪಿಜ್ಝಾ ಶಾಪ್
TV9 Web
| Edited By: |

Updated on:Apr 07, 2022 | 10:47 AM

Share

ದೆಹಲಿ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯು 16 ದಿನಗಳನ್ನು ಪೂರೈಸಿದೆ. ಸರ್ಕಾರದ ನಿರ್ಧಾರದ ವಿರುದ್ಧ ಪಣತೊಟ್ಟಿರುವ ರೈತರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಸರ್ಕಾರ ಮಾತ್ರ ರೈತರ ಮನವೊಲಿಕೆಗೆ ಮಾತುಕತೆಯ ಪ್ರಯತ್ನ ನಡೆಸುತ್ತಿದೆ.

ಈ ನಡುವೆ ರೈತರು ಪ್ರತಿಭಟನೆಯಲ್ಲಿ ಪಿಜ್ಜಾ ತಿಂದಿರುವ ಬಗ್ಗೆ ವರದಿಯಾಗಿದೆ. ದೆಹಲಿ ಗಡಿಭಾಗವಾದ ಸಿಂಘು ಪ್ರದೇಶದಲ್ಲಿ ರೈತರು ಪಿಜ್ಜಾ ತಿನ್ನುತ್ತಿರುವ ಫೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಟ್ವಿಟರ್ ಟ್ರೆಂಡಿಂಗ್​ನಲ್ಲೂ ಸ್ಥಾನ ಪಡೆದಿರುವ ಪಿಜ್ಜಾ ಹ್ಯಾಷ್​ಟ್ಯಾಗ್​ನಲ್ಲಿ, ಇಂದು ಮಧ್ಯಾಹ್ನದ ವೇಳೆಗೆ ಲಕ್ಷಾಂತರ (1 ಲಕ್ಷ 16 ಸಾವಿರ) ಟ್ವೀಟ್​ಗಳಾಗಿವೆ.

ರೈತರ ಪಾದಗಳಿಗೆ ಮಸಾಜ್ ಮಾಡುವ ಫೋಟೋಗಳು ಈ ಮೊದಲು ಸುದ್ದಿಯಾಗಿತ್ತು. ಇದೀಗ ಪ್ರತಿಭಟನೆಯಲ್ಲಿ ಪಿಜ್ಜಾ ಬಂದಿರುವುದು ಸುದ್ದಿ ಮಾಡುತ್ತಿದೆ. ಈ ಬಗ್ಗೆ ವರದಿ ಮಾಡಿರುವ ‘ದಿ ಟ್ರಿಬ್ಯೂನ್’, ಭಾರತೀಯ ಕಿಸಾನ್ ಯೂನಿಯನ್​ನ ರೈತರು ಪಿಜ್ಜಾ ಅಂಗಡಿ ತೆರೆದಿರುವ ಬಗ್ಗೆ ಮಾಹಿತಿ ನೀಡಿದೆ. ಮಂಗಳವಾರ ಆರಂಭವಾಗಿರುವ ಈ ಪಿಜ್ಜಾ ಅಂಗಡಿ ಪ್ರತಿಭಟನೆ ಕೊನೆಯಾಗುವವರೆಗೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

ಪ್ರತಿಭಟನಾಕಾರರ ಉತ್ಸಾಹ ಹೆಚ್ಚಿಸಲು, ಅವರಿಗೆ ಬೆಂಬಲ ಸೂಚಿಸಲು ಪಿಜ್ಜಾ ಶಾಪ್ ತೆರೆದಿರುವುದಾಗಿ ಮಾಲೀಕ ತಿರ್ಲೋಚನ್ ಸಿಂಗ್ ತಿಳಿಸಿದ್ದಾರೆ. ಜಿಲ್ಲಾ ಪರಿಷತ್ ಸದಸ್ಯ, ಪ್ರಭ್​ದೀಪ್ ಸಿಂಗ್ ನರಂಗ್​ವಾಲ್ ಸಹಿತ ಎಲ್ಲಾ ವಯೋಮಾನದ ಜನರು ಈ ಕೆಲಸವನ್ನು ಅಭಿನಂದಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..

Published On - 4:00 pm, Sat, 12 December 20

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ