AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಸಿಂಘು ಗಡಿಯಲ್ಲಿ ಪಿಜ್ಜಾ ತಿಂದ ಪ್ರತಿಭಟನಾ ರೈತರು

ನೂತನ ಕೃಷಿ ಕಾಯ್ದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧದ ರೈತರ ಪ್ರತಿಭಟನೆ ಹದಿನಾರು ದಿನಗಳನ್ನು ಪೂರೈಸಿದೆ. ಸಿಂಘು ಬಾರ್ಡರ್​ನಲ್ಲಿ ರೈತರು ಪಿಜ್ಜಾ ತಿನ್ನುತ್ತಿರುವ ಫೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

Delhi Chalo: ಸಿಂಘು ಗಡಿಯಲ್ಲಿ ಪಿಜ್ಜಾ ತಿಂದ ಪ್ರತಿಭಟನಾ ರೈತರು
ಸಿಂಘು ಗಡಿಯಲ್ಲಿ ಪಿಜ್ಝಾ ಶಾಪ್
TV9 Web
| Edited By: |

Updated on:Apr 07, 2022 | 10:47 AM

Share

ದೆಹಲಿ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯು 16 ದಿನಗಳನ್ನು ಪೂರೈಸಿದೆ. ಸರ್ಕಾರದ ನಿರ್ಧಾರದ ವಿರುದ್ಧ ಪಣತೊಟ್ಟಿರುವ ರೈತರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಸರ್ಕಾರ ಮಾತ್ರ ರೈತರ ಮನವೊಲಿಕೆಗೆ ಮಾತುಕತೆಯ ಪ್ರಯತ್ನ ನಡೆಸುತ್ತಿದೆ.

ಈ ನಡುವೆ ರೈತರು ಪ್ರತಿಭಟನೆಯಲ್ಲಿ ಪಿಜ್ಜಾ ತಿಂದಿರುವ ಬಗ್ಗೆ ವರದಿಯಾಗಿದೆ. ದೆಹಲಿ ಗಡಿಭಾಗವಾದ ಸಿಂಘು ಪ್ರದೇಶದಲ್ಲಿ ರೈತರು ಪಿಜ್ಜಾ ತಿನ್ನುತ್ತಿರುವ ಫೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಟ್ವಿಟರ್ ಟ್ರೆಂಡಿಂಗ್​ನಲ್ಲೂ ಸ್ಥಾನ ಪಡೆದಿರುವ ಪಿಜ್ಜಾ ಹ್ಯಾಷ್​ಟ್ಯಾಗ್​ನಲ್ಲಿ, ಇಂದು ಮಧ್ಯಾಹ್ನದ ವೇಳೆಗೆ ಲಕ್ಷಾಂತರ (1 ಲಕ್ಷ 16 ಸಾವಿರ) ಟ್ವೀಟ್​ಗಳಾಗಿವೆ.

ರೈತರ ಪಾದಗಳಿಗೆ ಮಸಾಜ್ ಮಾಡುವ ಫೋಟೋಗಳು ಈ ಮೊದಲು ಸುದ್ದಿಯಾಗಿತ್ತು. ಇದೀಗ ಪ್ರತಿಭಟನೆಯಲ್ಲಿ ಪಿಜ್ಜಾ ಬಂದಿರುವುದು ಸುದ್ದಿ ಮಾಡುತ್ತಿದೆ. ಈ ಬಗ್ಗೆ ವರದಿ ಮಾಡಿರುವ ‘ದಿ ಟ್ರಿಬ್ಯೂನ್’, ಭಾರತೀಯ ಕಿಸಾನ್ ಯೂನಿಯನ್​ನ ರೈತರು ಪಿಜ್ಜಾ ಅಂಗಡಿ ತೆರೆದಿರುವ ಬಗ್ಗೆ ಮಾಹಿತಿ ನೀಡಿದೆ. ಮಂಗಳವಾರ ಆರಂಭವಾಗಿರುವ ಈ ಪಿಜ್ಜಾ ಅಂಗಡಿ ಪ್ರತಿಭಟನೆ ಕೊನೆಯಾಗುವವರೆಗೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

ಪ್ರತಿಭಟನಾಕಾರರ ಉತ್ಸಾಹ ಹೆಚ್ಚಿಸಲು, ಅವರಿಗೆ ಬೆಂಬಲ ಸೂಚಿಸಲು ಪಿಜ್ಜಾ ಶಾಪ್ ತೆರೆದಿರುವುದಾಗಿ ಮಾಲೀಕ ತಿರ್ಲೋಚನ್ ಸಿಂಗ್ ತಿಳಿಸಿದ್ದಾರೆ. ಜಿಲ್ಲಾ ಪರಿಷತ್ ಸದಸ್ಯ, ಪ್ರಭ್​ದೀಪ್ ಸಿಂಗ್ ನರಂಗ್​ವಾಲ್ ಸಹಿತ ಎಲ್ಲಾ ವಯೋಮಾನದ ಜನರು ಈ ಕೆಲಸವನ್ನು ಅಭಿನಂದಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..

Published On - 4:00 pm, Sat, 12 December 20

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ