ರಾಮಮಂದಿರ ಉದ್ಘಾಟನೆ ವೇಳೆ ರಾಮನಾಮ ಜಪಿಸುವಂತೆ ಕರೆ ನೀಡಿದ ಗಾಯಕಿ ಕೆಎಸ್ ಚಿತ್ರಾ; ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ

ಜನವರಿ 22 ರಂದು ಮಧ್ಯಾಹ್ನ 12:20 ಕ್ಕೆ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆದಾಗ, ಪ್ರತಿಯೊಬ್ಬರೂ ‘ಶ್ರೀರಾಮ, ಜಯ ರಾಮ, ಜಯ ಜಯ ರಾಮ’ ಎಂಬ ಮಂತ್ರವನ್ನು ಪಠಿಸಬೇಕು. ಹಾಗೆಯೇ ಸಂಜೆಯ ವೇಳೆ ಮನೆಯ ಎಲ್ಲಾ ಭಾಗಗಳಲ್ಲಿ ಐದು ಬತ್ತಿಯ ದೀಪಗಳನ್ನು ಹಚ್ಚಬೇಕು. ದೇವರ ಆಶೀರ್ವಾದ ಎಲ್ಲರಿಗೂ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವಿಡಿಯೊದಲ್ಲಿ ಕರೆ ನೀಡಿದ್ದ ಕೆಎಸ್ ಚಿತ್ರಾ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ.

ರಾಮಮಂದಿರ ಉದ್ಘಾಟನೆ ವೇಳೆ ರಾಮನಾಮ ಜಪಿಸುವಂತೆ ಕರೆ ನೀಡಿದ ಗಾಯಕಿ ಕೆಎಸ್ ಚಿತ್ರಾ; ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ
ಕೆ.ಎಸ್.ಚಿತ್ರಾ
ರಶ್ಮಿ ಕಲ್ಲಕಟ್ಟ

Updated on: Jan 16, 2024 | 3:07 PM

ಕೊಚ್ಚಿ ಜನವರಿ 16: ಖ್ಯಾತ ಹಿನ್ನೆಲೆ ಗಾಯಕಿ ಕೆ ಎಸ್ ಚಿತ್ರಾ (K S Chithra)ಅವರು ಅಯೋಧ್ಯೆಯಲ್ಲಿ (Ayodhya) ರಾಮಮಂದಿರದ (Ram mandir) ಉದ್ಘಾಟನಾ ಸಮಾರಂಭಕ್ಕೆ ಬೆಂಬಲಿಸುವಂತೆ ಕರೆ ನೀಡಿರುವ ವಿಡಿಯೊಗೆ ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ. ಭಾನುವಾರ ಬಿಡುಗಡೆ ಮಾಡಿದ ವಿಡಿಯೊ ಸಂದೇಶದಲ್ಲಿ ಜನವರಿ 22 ರಂದು ಮಧ್ಯಾಹ್ನ 12:20 ಕ್ಕೆ ಸಮಾರಂಭದ ಸಮಯದಲ್ಲಿ “ಶ್ರೀ ರಾಮ, ಜಯ ರಾಮ, ಜಯ ಜಯ ರಾಮ” ಎಂದು ಜಪಿಸುವಂತೆ ಚಿತ್ರಾ ಜನರನ್ನು ಒತ್ತಾಯಿಸಿದರು. ಅದೇ ವೇಳೆ ಸಂಜೆ, ಅವರವರ ಮನೆಯಲ್ಲಿ ಎಲ್ಲರೂ ದೀಪಗಳನ್ನು ಬೆಳಗಿಸುವಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.

ವಿಡಿಯೊದಲ್ಲೇನಿದೆ?

“ಎಲ್ಲರಿಗೂ ನಮಸ್ಕಾರ. ಜನವರಿ 22 ರಂದು ಮಧ್ಯಾಹ್ನ 12:20 ಕ್ಕೆ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆದಾಗ, ಪ್ರತಿಯೊಬ್ಬರೂ ‘ಶ್ರೀರಾಮ, ಜಯ ರಾಮ, ಜಯ ಜಯ ರಾಮ’ ಎಂಬ ಮಂತ್ರವನ್ನು ಪಠಿಸಬೇಕು. ಹಾಗೆಯೇ ಸಂಜೆಯ ವೇಳೆ ಮನೆಯ ಎಲ್ಲಾ ಭಾಗಗಳಲ್ಲಿ ಐದು ಬತ್ತಿಯ ದೀಪಗಳನ್ನು ಹಚ್ಚಬೇಕು. ದೇವರ ಆಶೀರ್ವಾದ ಎಲ್ಲರಿಗೂ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಲೋಕಾ ಸಮಸ್ತಾ ಸುಖಿನೋ ಭವಂತು.” ಎಂದು ಚಿತ್ರಾ ಹೇಳಿದ್ದಾರೆ.


ಸಮಾರಂಭವನ್ನು ಬೆಂಬಲಿಸಿದ್ದಕ್ಕಾಗಿ ಹಲವಾರು ಜನರು ಚಿತ್ರಾ ಅವರನ್ನು ಟೀಕಿಸಿದರೆ, ಇನ್ನೂ ಅನೇಕರು ಬೆಂಬಲಿಸಿದ್ದಾರೆ.


ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಚಿತ್ರಾ ಅವರಿಗೆ ಬೆಂಬಲ ಸೂಚಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಈ ರೀತಿ ಬರೆದಿದ್ದಾರೆ. “ಅಯೋಧ್ಯೆ ಪ್ರಾಣ ಪ್ರತಿಷ್ಠಾ ದಿನದಂದು ದೀಪ ಬೆಳಗಿಸುವಂತೆ ಮನವಿ ಮಾಡಿದ ಗಾಯಕಿ ಚಿತ್ರಾ ಅವರ ಮೇಲಿ ಎಡ-ಜಿಹಾದಿ ಗುಂಪುಗಳು ಸೈಬರ್ ದಾಳಿ ನಡೆಸಿವ. ಕೇರಳದಲ್ಲಿ ಪಿಣರಾಯಿ ವಿಜಯನ್ ಆಳ್ವಿಕೆಯಲ್ಲಿ ಒಬ್ಬ ಹಿಂದೂ ತನ್ನ ನಂಬಿಕೆಗಳನ್ನು ಸಹ ಅನುಯಾಯಿಗಳೊಂದಿಗೆ ಮುಕ್ತವಾಗಿ ಹಂಚಿಕೊಳ್ಳಲು ಸಾಧ್ಯವಿಲ್ಲ. ಈ ಕೃತ್ಯದ ಬಗ್ಗೆ ಕಾಂಗ್ರೆಸ್ ಮೌನವಾಗಿರುವುದು ನಾಚಿಕೆಗೇಡಿನ ಸಂಗತಿ. ನಾವು ಕೇರಳ ಬಿಜೆಪಿ ಕೆಎಸ್ ಚಿತ್ರಾ ಅವರ ಅಚಲ ಬೆಂಬಲಕ್ಕೆ ನಿಂತಿದ್ದೇವೆ.

ಇದನ್ನೂ ಓದಿ: ಥೇಟ್ ರಾಮಮಂದಿರದ ಹಾಗೆ ಬೃಹತ್ ಕೇಕ್ ತಯಾರಿಸಿ ರಾಮಭಕ್ತಿ ಮೆರೆದ ರಾಣೆಬೆನ್ನೂರಿನ ಬೇಕರಿ ಮಾಲೀಕ!

ಗಾಯಕ ಜಿ ವೇಣುಗೋಪಾಲ್ ಕೂಡ ಚಿತ್ರಾ ಅವರನ್ನು ಬೆಂಬಲಿಸಿದರು. ವೇಣುಗೋಪಾಲ್ ಮತ್ತು ಚಿತ್ರಾ ಅವರದ್ದು ಸುಮಾರು 50 ವರ್ಷಗಳ ಗೆಳೆತನ. ಚಿತ್ರಾ ವಿರುದ್ದದ ಸೈಬರ್ ದಾಳಿ ಖಂಡಿಸಿದ ವೇಣುಗೋಪಾಲ, ಆಕೆ ಅದ್ಬುತ ಗಾಯಕಿ, ಆಕೆಯನ್ನು ಟೀಕಿಸುವ ಹಲವಾರು ಆನ್‌ಲೈನ್ ಕಾಮೆಂಟ್ ಗಳು ಬರುತ್ತಿರುವುದು ನೋವಿನ ಸಂಗತಿ. ನೀವು ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದರೆ, ನಾವು ಅದನ್ನು ಸುಮ್ಮನೆ ಬಿಡಬಹುದಲ್ಲವೇ? ದಯವಿಟ್ಟು ಪ್ರಯತ್ನಿಸಿ ಮತ್ತು ನೋಯಿಸಬೇಡಿ ಎಂದು ವೇಣುಗೋಪಾಲ್ ಹೇಳಿರುವುದಾಗಿ ಆನ್ ಮನೋರಮಾ ಉಲ್ಲೇಖಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us