AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಲ್​ಡೋಜರ್ ರಾಜಕೀಯ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮುಸ್ಲಿಂ ಸಂಘಟನೆ ಅರ್ಜಿ

‘ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಅಪರಾಧ ತಡೆಯುವ ನೆಪದಲ್ಲಿ ಅಲ್ಪಸಂಖ್ಯಾತರನ್ನು, ಅದರಲ್ಲಿಯೂ ಮುಖ್ಯವಾಗಿ ಮುಸ್ಲಿಮರನ್ನು ಹತ್ತಿಕ್ಕಲು ಬುಲ್​ಡೋಜರ್​ಗಳನ್ನು ಬಳಸಲಾಗುತ್ತಿದೆ’ ಎಂದು ಹೇಳಲಾಗಿದೆ.

ಬುಲ್​ಡೋಜರ್ ರಾಜಕೀಯ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮುಸ್ಲಿಂ ಸಂಘಟನೆ ಅರ್ಜಿ
ಮಧ್ಯಪ್ರದೇಶದಲ್ಲಿ ಮನೆಗಳನ್ನು ಕೆಡವುತ್ತಿರುವ ಜೆಸಿಬಿಗಳು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Apr 18, 2022 | 1:20 PM

Share

ದೆಹಲಿ: ಹಿಂಸಾಚಾರದಂಥ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವವರ ಮನೆಗಳನ್ನು ಬುಲ್​ಡೋಜರ್ ಬಳಸಿ ಕೆಡವುವ ಕ್ರಮಗಳನ್ನು ಪ್ರಶ್ನಿಸಿ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯ ಜಮಾತ್ ಉಲಾಮಾ-ಎ-ಹಿಂದ್ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಭಾರತ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ಈ ಕುರಿತು ಅಗತ್ಯ ಸೂಚನೆ ನೀಡಬೇಕು. ಯಾವುದೇ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಆರೋಪಿಗಳ ಮನೆಯನ್ನು ಪ್ರತೀಕಾರಕ್ಕಾಗಿ ಕೆಡುವುವ ಹಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವಿನಂತಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಜಮಾತ್ ಉಲಾಮಾ-ಎ-ಹಿಂದ್​ ಅಧ್ಯಕ್ಷ ಅರ್ಷದ್ ಮದಾನಿ, ‘ಅಪಾಯಕಾರಿ ಬುಲ್​ಡೋಜರ್ ರಾಜಕಾರಣ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದೇವೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಅಪರಾಧ ತಡೆಯುವ ನೆಪದಲ್ಲಿ ಅಲ್ಪಸಂಖ್ಯಾತರನ್ನು, ಅದರಲ್ಲಿಯೂ ಮುಖ್ಯವಾಗಿ ಮುಸ್ಲಿಮರನ್ನು ಹತ್ತಿಕ್ಕಲು ಬುಲ್​ಡೋಜರ್​ಗಳನ್ನು ಬಳಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ಗಲಭೆಯಂಥ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎನ್ನುವ ಕಾರಣಕ್ಕೆ ಹಲವರ ಮನೆ ಹಾಗೂ ವಾಣಿಜ್ಯ ಕಟ್ಟಡಗಳನ್ನು ವಿನಾಕಾರಣ ಕೆಡವಲಾಗಿದೆ. ಇತ್ತೀಚಿನ ದಿನಗಳಲ್ಲಿ ಈ ವಿದ್ಯಮಾನ ಹೆಚ್ಚಾಗುತ್ತಿದೆ. ಈ ಕೆಟ್ಟ ಪರಂಪರೆಗೆ ಕಡಿವಾಣ ಹಾಕಬೇಕಿದೆ. ಅದೇ ಉದ್ದೇಶದಿಂದ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ. ‘ಅಪರಾಧ ತಡೆಯುವ ನೆಪದಲ್ಲಿ ಮುಸ್ಲಿಮರ ವಿರುದ್ಧ ಪ್ರತೀಕಾರ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸಹ ಬುಲ್​ಡೋಜರ್ ರಾಜಕಾರಣ ಸಮರ್ಥಿಸುತ್ತಿದ್ದು, ಅಲ್ಪಸಂಖ್ಯಾತರು ಮನೆಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಬೆದರಿಕೆ ಹಾಕುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ರಾಜ್ಯ ಅಥವಾ ಕೇಂದ್ರ ಸರ್ಕಾರವು ಜರುಗಿಸುವ ಇಂಥ ಕ್ರಮಗಳು ಸಂವಿಧಾನದ ಆಶಯಗಳು ಮತ್ತು ಅಪರಾಧ ನ್ಯಾಯ ಪ್ರಕ್ರಿಯೆ ವ್ಯವಸ್ಥೆಗೆ ವಿರುದ್ಧವಾಗಿವೆ. ಆರೋಪಿಗಳ ಹಕ್ಕುಗಳನ್ನೂ ಈ ಕ್ರಮಗಳು ಉಲ್ಲಂಘಿಸುತ್ತವೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. ‘ದೇಶದಲ್ಲಿ ಪ್ರಚಲಿತದಲ್ಲಿರುವ ಅಪರಾಧ ನ್ಯಾಯ ಪ್ರಕ್ರಿಯೆ ವ್ಯವಸ್ಥೆಗೂ ಬುಲ್​ಡೋಜರ್ ರಾಜಕಾರಣವು ಬಾಧಕವಾಗಿದೆ. ನ್ಯಾಯ ವಿಚಾರಣೆ ಮತ್ತು ತೀರ್ಪು ನೀಡುವ ಪ್ರಕ್ರಿಯೆಯಲ್ಲಿ ನ್ಯಾಯಾಲಯಗಳಿಗೆ ಪಾತ್ರವೇ ಇಲ್ಲದಂತೆ ಆಗಿದೆ. ಸರ್ಕಾರಗಳು ಈ ದುಸ್ಸಾಹಸಗಳಿಗೆ ಶೀಘ್ರ ಕಡಿವಾಣ ಹಾಕಬೇಕು. ಮತ್ತೊಮ್ಮೆ ಇಂಥ ಪ್ರಕರಣಗಳು ಮರುಕಳಿಸದಂತೆ ಕ್ರಮ ವಹಿಸಬೇಕು. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲು ನ್ಯಾಯಾಲಯ ಅವಕಾಶ ನೀಡಬಾರದು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅಪರಾಧ ತಡೆ ಕ್ರಮದ ಭಾಗವಾಗಿ ಯಾವುದೇ ವಾಣಿಜ್ಯ ಆಸ್ತಿಯನ್ನು ಮುಟ್ಟುಗೋಲು ಹಾಕುವುದು ಅಥವಾ ಕೆಡುವುದು ತಪ್ಪು. ದೇಶದಲ್ಲಿ ಕೋಮು ಗಲಭೆ ತಡೆಯುವ ಕುಡಿರುವ ಪೊಲೀಸರಿಗೆ ಇನ್ನಷ್ಟು ತರಬೇತಿ ಒದಗಿಸಬೇಕಿದೆ. ಈ ಬಗ್ಗೆಯೂ ನ್ಯಾಯಾಲಯ ಅಗತ್ಯ ಸೂಚನೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅಪರಾಧ ತನಿಖಾ ಪ್ರಕ್ರಿಯೆಯ ಭಾಗ ಆಗಿರದ ಸಚಿವರು, ಶಾಸಕರು ಮತ್ತು ಇತರ ಯಾವುದೇ ಜನರು ತನಿಖೆಯಲ್ಲಿ ವಿನಾಕಾರಣ ಮೂಗುತೂರಿಸಬಾರದು. ಯಾವುದೇ ವ್ಯಕ್ತಿ ಅಥವಾ ಸಮುದಾಯದ ಮೇಲೆ ಅಪರಾಧದ ಆರೋಪ ಹೊರಿಸಬಾರದು. ಈ ಬಗ್ಗೆಯೂ ನ್ಯಾಯಾಲಯ ಅಗತ್ಯ ನಿರ್ದೇಶನ ನೀಡಬೇಕು ಎಂದು ಜಮಾತ್ ಮನವಿ ಮಾಡಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ ಮಾಡಿದ್ದ ವ್ಯಕ್ತಿಗಳ ಆಸ್ತಿ ಧ್ವಂಸ

ಇದನ್ನೂ ಓದಿ: ಮಧ್ಯಪ್ರದೇಶ: ಪೊಲೀಸ್ ಠಾಣೆಯಲ್ಲಿ ಪತ್ರಕರ್ತ ಸೇರಿ ಎಂಟು ಮಂದಿಯನ್ನು ಅರೆನಗ್ನರಾಗಿ ನಿಲ್ಲಿಸಿದ ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು

Published On - 12:46 pm, Mon, 18 April 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?