AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್​ ಅಭಾವ ನೀಗಿಸಲು ಕೇಂದ್ರ ಸರ್ಕಾರದಿಂದ ಕ್ರಮ; ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 551 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ

ಈ ವರ್ಷದ ಪ್ರಾರಂಭದಲ್ಲಿ ದೇಶಾದ್ಯಂತ ವಿವಿಧ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ 162 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪಿಎಂ ಕೇರ್ಸ್​​ನಿಂದ 201.58 ಕೋಟಿ ರೂ.ನೀಡಿತ್ತು.

ಆಕ್ಸಿಜನ್​ ಅಭಾವ ನೀಗಿಸಲು ಕೇಂದ್ರ ಸರ್ಕಾರದಿಂದ ಕ್ರಮ; ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 551 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: ರಶ್ಮಿ ಕಲ್ಲಕಟ್ಟ|

Updated on:Apr 25, 2021 | 7:02 PM

Share

ದೆಹಲಿ: ಆಕ್ಸಿಜನ್ ಕೊರತೆಯನ್ನು ನೀಗಿಸಲು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ದೇಶನದ ಮೇರೆಗೆ, ದೇಶದಲ್ಲಿ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 551 ಪ್ರೆಶರ್​ ಸ್ವಿಂಗ್​ ಆಡ್ಸರ್ಪ್ಶನ್ (ಪಿಎಸ್​ಎ) ವೈದ್ಯಕೀಯ ಆಕ್ಸಿಜನ್​ ಉತ್ಪಾದನಾ ಘಟಕಗಳ ಸ್ಥಾಪನೆಗೆ ಹಣ ನೀಡಲು ಪಿಎಂ ಕೇರ್ಸ್​ ಫಂಡ್​​ನಿಂದ ತಾತ್ವಿಕ ಅನುಮೋದನೆ ಸಿಕ್ಕಿದೆ. ಎಷ್ಟಾಗತ್ತೋ ಅಷ್ಟು ಬೇಗ ಈ ಘಟಕಗಳು ಕಾರ್ಯಶುರುಮಾಡುವಂತಾಗಬೇಕು. ಇವುಗಳಿಂದ ಆಮ್ಲಜನಕ ಪೂರೈಕೆಗೆ ಲಭ್ಯತೆಗೆ ಉತ್ತೇಜನ ಸಿಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ.

ಒಟ್ಟು 551 ಆಕ್ಸಿಜನ್ ಉತ್ಪಾದನಾ ಘಟಕಗಳ ಸ್ಥಾಪನೆಗೆ ಅನುಮೋದನೆ ಸಿಕ್ಕಿದ್ದು, ಇವುಗಳನ್ನು ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಮಾನ್ಯತೆ ಪಡೆದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ವರ್ಷದ ಪ್ರಾರಂಭದಲ್ಲಿ ದೇಶಾದ್ಯಂತ ವಿವಿಧ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ 162 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪಿಎಂ ಕೇರ್ಸ್​​ನಿಂದ 201.58 ಕೋಟಿ ರೂ.ನೀಡಿತ್ತು. ಸದ್ಯ ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿದೆ. ಈ ಮಧ್ಯೆ ದೇಶದ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ರೋಗಿಗಳು ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಯನ್ನು ನೀಗಿಸಲು ಕೇಂದ್ರ ಸರ್ಕಾರ 551 ಆಕ್ಸಿಜನ್ ಘಟಕಗಳ ಸ್ಥಾಪನೆಗೆ ಮುಂದಾಗಿದೆ.

ಎಲ್ಲ ಜಿಲ್ಲೆಗಳಲ್ಲಿ ಆಕ್ಸಿಜನ್ ಸ್ಥಾವರ

ಸಮರ್ಪಕ  ಆಕ್ಸಿಜನ್ ಪೂರೈಕೆದಾಗಿ ಎಲ್ಲ ಜಿಲ್ಲೆಗಳಲ್ಲಿಯೂ ಆಕ್ಸಿಜನ್  ಸ್ಥಾವರ ಸ್ಥಾಪಿಸಲಾಗುವುದು .ದೇಶದಾದ್ಯಂತವಿರುವ ಜನರಿಗೆ ನೆರವಾಗಲು ಮತ್ತು ಆಸ್ಪತ್ರೆಗಲ್ಲಿ ಆಕ್ಸಿಜನ್ ಪೂರೈಕೆ  ಅಡಚಣೆ ಇಲ್ಲದೆ ಸಿಗುವಂತ ಮಾಡುವ ಮಹತ್ವದ ನಿರ್ಧಾರ  ಇದಾಗಿದೆ ಎಂದು ಪ್ರಧಾನಿ  ನರೇಂದ್ರ ಮೋದಿ  ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಿಂಗೆ ಮರ್ಯಾದೆ ಇಲ್ವಾ, ನನ್ ಹಿಂದೆ ಬರಬೇಡ; ಬಿಗ್​ ಬಾಸ್​ ಚೆಲುವೆಗೆ ಮಂಜು ಹೀಗೆ ಹೇಳಿದ್ದೇಕೆ?

ಶರಣು ಮಣ್ಣಿಗೆ : ಹಸಿರಿಲ್ಲದೆ ಉಪವಾಸ ಬಿದ್ದ ಕಣ್ಣಿಗೆ ಖಿನ್ನತೆಗೆ ಜಾರಿದ ಮನಸ್ಸಿಗೆ ಕಂಡುಕೊಂಡ ಉಪಾಯವಿದು!

Published On - 2:47 pm, Sun, 25 April 21

Follow Us
Lakshmi Hegde
Lakshmi Hegde
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ