AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಜನ, ಸಂಸ್ಕೃತಿಯ ಮೇಲೆ ಪ್ರಧಾನಿ ಮೋದಿಗಿಲ್ಲ ಗೌರವ, ಆದರೆ ನನಗಿದು ಕುಟುಂಬದಂತೆ!: ರಾಹುಲ್ ಗಾಂಧಿ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ರೈತರಿಗೆ ಏನು ಬೇಕೋ ಅದನ್ನೇ ಅವರಿಂದ ಕಿತ್ತುಕೊಳ್ಳಲಾಗಿದೆ. ಅದಕ್ಕಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ನಾವೂ ರೈತರೊಂದಿಗೆ ಇದ್ದೇವೆ. ಆದರೆ ಪಿಎಂ ಮೋದಿ ದೊಡ್ಡ ಉದ್ಯಮಿಗಳೊಂದಿಗೆ ನಿಂತಿದ್ದಾರೆ ಎಂದು ಹೇಳಿದರು.

ತಮಿಳುನಾಡಿನ ಜನ, ಸಂಸ್ಕೃತಿಯ ಮೇಲೆ ಪ್ರಧಾನಿ ಮೋದಿಗಿಲ್ಲ ಗೌರವ, ಆದರೆ ನನಗಿದು ಕುಟುಂಬದಂತೆ!: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 23, 2021 | 2:27 PM

Share

ಚೆನ್ನೈ: ತಮಿಳುನಾಡು ವಿಧಾನಸಭೆಗೆ ಏಪ್ರಿಲ್​-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳಿಂದಲೂ ಪ್ರಚಾರ ಸಿದ್ಧತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಇಂದು ತಮಿಳುನಾಡಿಗೆ ತೆರಳಿದ್ದು, ಜನವರಿ 25ರವರೆಗೆ ಅಂದರೆ ಮೂರು ದಿನ ಅಲ್ಲಿಯೇ ಇದ್ದು, ಪ್ರಚಾರ ಮಾಡಲಿದ್ದಾರೆ.

ಮೊದಲ ದಿನವಾದ ಇಂದು ಕೊಯಂಬತ್ತೂರಿನಲ್ಲಿ ಮಾತನಾಡಿ, ನಮ್ಮ ದೇಶದಲ್ಲಿ ಹಲವು ಭಾಷೆ, ಸಂಸ್ಕೃತಿಗಳು ಇವೆ. ತಮಿಳು, ಹಿಂದಿ, ಬೆಂಗಾಳಿ ಸೇರಿ ಎಲ್ಲ ಭಾಷೆಗಳಿಗೂ ಗೌರವ, ಅವಕಾಶ ಇದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರಿಗೆ ತಮಿಳುನಾಡಿನ ಸಂಸ್ಕೃತಿ, ಭಾಷೆ, ಜನರ ಬಗ್ಗೆ ಗೌರವ ಇಲ್ಲ. ತಮಿಳು ಜನರು ಮತ್ತು ಅವರ ಸಂಸ್ಕೃತಿಗಳು ತಮ್ಮ ವಿಚಾರಧಾರೆ ಮತ್ತು ಸಂಸ್ಕೃತಿಯ ಅಧೀನವಾಗಿರಬೇಕು ಎಂದು ಮೋದಿ ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಹಾಗೇ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ರೈತರಿಗೆ ಏನು ಬೇಕೋ ಅದನ್ನೇ ಅವರಿಂದ ಕಿತ್ತುಕೊಳ್ಳಲಾಗಿದೆ. ಅದಕ್ಕಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ನಾವೂ ರೈತರೊಂದಿಗೆ ಇದ್ದೇವೆ. ಆದರೆ ಪಿಎಂ ಮೋದಿ ದೊಡ್ಡ ಉದ್ಯಮಿಗಳೊಂದಿಗೆ ನಿಂತಿದ್ದಾರೆ ಎಂದು ಹೇಳಿದರು. ತಮಿಳುನಾಡು ಎಂದರೆ ನನಗೆ ಕುಟುಂಬದಂತೆ. ನಾನಿಲ್ಲಿ ಯಾವುದೇ ಸ್ವಾರ್ಥ ಸಾಧನೆಗಾಗಿ ಬಂದಿಲ್ಲ ಎಂದು ರಾಹುಲ್​ ಹೇಳಿದರು.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು