AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಜನ, ಸಂಸ್ಕೃತಿಯ ಮೇಲೆ ಪ್ರಧಾನಿ ಮೋದಿಗಿಲ್ಲ ಗೌರವ, ಆದರೆ ನನಗಿದು ಕುಟುಂಬದಂತೆ!: ರಾಹುಲ್ ಗಾಂಧಿ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ರೈತರಿಗೆ ಏನು ಬೇಕೋ ಅದನ್ನೇ ಅವರಿಂದ ಕಿತ್ತುಕೊಳ್ಳಲಾಗಿದೆ. ಅದಕ್ಕಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ನಾವೂ ರೈತರೊಂದಿಗೆ ಇದ್ದೇವೆ. ಆದರೆ ಪಿಎಂ ಮೋದಿ ದೊಡ್ಡ ಉದ್ಯಮಿಗಳೊಂದಿಗೆ ನಿಂತಿದ್ದಾರೆ ಎಂದು ಹೇಳಿದರು.

ತಮಿಳುನಾಡಿನ ಜನ, ಸಂಸ್ಕೃತಿಯ ಮೇಲೆ ಪ್ರಧಾನಿ ಮೋದಿಗಿಲ್ಲ ಗೌರವ, ಆದರೆ ನನಗಿದು ಕುಟುಂಬದಂತೆ!: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Jan 23, 2021 | 2:27 PM

ಚೆನ್ನೈ: ತಮಿಳುನಾಡು ವಿಧಾನಸಭೆಗೆ ಏಪ್ರಿಲ್​-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳಿಂದಲೂ ಪ್ರಚಾರ ಸಿದ್ಧತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಇಂದು ತಮಿಳುನಾಡಿಗೆ ತೆರಳಿದ್ದು, ಜನವರಿ 25ರವರೆಗೆ ಅಂದರೆ ಮೂರು ದಿನ ಅಲ್ಲಿಯೇ ಇದ್ದು, ಪ್ರಚಾರ ಮಾಡಲಿದ್ದಾರೆ.

ಮೊದಲ ದಿನವಾದ ಇಂದು ಕೊಯಂಬತ್ತೂರಿನಲ್ಲಿ ಮಾತನಾಡಿ, ನಮ್ಮ ದೇಶದಲ್ಲಿ ಹಲವು ಭಾಷೆ, ಸಂಸ್ಕೃತಿಗಳು ಇವೆ. ತಮಿಳು, ಹಿಂದಿ, ಬೆಂಗಾಳಿ ಸೇರಿ ಎಲ್ಲ ಭಾಷೆಗಳಿಗೂ ಗೌರವ, ಅವಕಾಶ ಇದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರಿಗೆ ತಮಿಳುನಾಡಿನ ಸಂಸ್ಕೃತಿ, ಭಾಷೆ, ಜನರ ಬಗ್ಗೆ ಗೌರವ ಇಲ್ಲ. ತಮಿಳು ಜನರು ಮತ್ತು ಅವರ ಸಂಸ್ಕೃತಿಗಳು ತಮ್ಮ ವಿಚಾರಧಾರೆ ಮತ್ತು ಸಂಸ್ಕೃತಿಯ ಅಧೀನವಾಗಿರಬೇಕು ಎಂದು ಮೋದಿ ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಹಾಗೇ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ರೈತರಿಗೆ ಏನು ಬೇಕೋ ಅದನ್ನೇ ಅವರಿಂದ ಕಿತ್ತುಕೊಳ್ಳಲಾಗಿದೆ. ಅದಕ್ಕಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ನಾವೂ ರೈತರೊಂದಿಗೆ ಇದ್ದೇವೆ. ಆದರೆ ಪಿಎಂ ಮೋದಿ ದೊಡ್ಡ ಉದ್ಯಮಿಗಳೊಂದಿಗೆ ನಿಂತಿದ್ದಾರೆ ಎಂದು ಹೇಳಿದರು. ತಮಿಳುನಾಡು ಎಂದರೆ ನನಗೆ ಕುಟುಂಬದಂತೆ. ನಾನಿಲ್ಲಿ ಯಾವುದೇ ಸ್ವಾರ್ಥ ಸಾಧನೆಗಾಗಿ ಬಂದಿಲ್ಲ ಎಂದು ರಾಹುಲ್​ ಹೇಳಿದರು.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ