AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಜನ, ಸಂಸ್ಕೃತಿಯ ಮೇಲೆ ಪ್ರಧಾನಿ ಮೋದಿಗಿಲ್ಲ ಗೌರವ, ಆದರೆ ನನಗಿದು ಕುಟುಂಬದಂತೆ!: ರಾಹುಲ್ ಗಾಂಧಿ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ರೈತರಿಗೆ ಏನು ಬೇಕೋ ಅದನ್ನೇ ಅವರಿಂದ ಕಿತ್ತುಕೊಳ್ಳಲಾಗಿದೆ. ಅದಕ್ಕಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ನಾವೂ ರೈತರೊಂದಿಗೆ ಇದ್ದೇವೆ. ಆದರೆ ಪಿಎಂ ಮೋದಿ ದೊಡ್ಡ ಉದ್ಯಮಿಗಳೊಂದಿಗೆ ನಿಂತಿದ್ದಾರೆ ಎಂದು ಹೇಳಿದರು.

ತಮಿಳುನಾಡಿನ ಜನ, ಸಂಸ್ಕೃತಿಯ ಮೇಲೆ ಪ್ರಧಾನಿ ಮೋದಿಗಿಲ್ಲ ಗೌರವ, ಆದರೆ ನನಗಿದು ಕುಟುಂಬದಂತೆ!: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Lakshmi Hegde
| Edited By: |

Updated on: Jan 23, 2021 | 2:27 PM

Share

ಚೆನ್ನೈ: ತಮಿಳುನಾಡು ವಿಧಾನಸಭೆಗೆ ಏಪ್ರಿಲ್​-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳಿಂದಲೂ ಪ್ರಚಾರ ಸಿದ್ಧತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಇಂದು ತಮಿಳುನಾಡಿಗೆ ತೆರಳಿದ್ದು, ಜನವರಿ 25ರವರೆಗೆ ಅಂದರೆ ಮೂರು ದಿನ ಅಲ್ಲಿಯೇ ಇದ್ದು, ಪ್ರಚಾರ ಮಾಡಲಿದ್ದಾರೆ.

ಮೊದಲ ದಿನವಾದ ಇಂದು ಕೊಯಂಬತ್ತೂರಿನಲ್ಲಿ ಮಾತನಾಡಿ, ನಮ್ಮ ದೇಶದಲ್ಲಿ ಹಲವು ಭಾಷೆ, ಸಂಸ್ಕೃತಿಗಳು ಇವೆ. ತಮಿಳು, ಹಿಂದಿ, ಬೆಂಗಾಳಿ ಸೇರಿ ಎಲ್ಲ ಭಾಷೆಗಳಿಗೂ ಗೌರವ, ಅವಕಾಶ ಇದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರಿಗೆ ತಮಿಳುನಾಡಿನ ಸಂಸ್ಕೃತಿ, ಭಾಷೆ, ಜನರ ಬಗ್ಗೆ ಗೌರವ ಇಲ್ಲ. ತಮಿಳು ಜನರು ಮತ್ತು ಅವರ ಸಂಸ್ಕೃತಿಗಳು ತಮ್ಮ ವಿಚಾರಧಾರೆ ಮತ್ತು ಸಂಸ್ಕೃತಿಯ ಅಧೀನವಾಗಿರಬೇಕು ಎಂದು ಮೋದಿ ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಹಾಗೇ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ರೈತರಿಗೆ ಏನು ಬೇಕೋ ಅದನ್ನೇ ಅವರಿಂದ ಕಿತ್ತುಕೊಳ್ಳಲಾಗಿದೆ. ಅದಕ್ಕಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ನಾವೂ ರೈತರೊಂದಿಗೆ ಇದ್ದೇವೆ. ಆದರೆ ಪಿಎಂ ಮೋದಿ ದೊಡ್ಡ ಉದ್ಯಮಿಗಳೊಂದಿಗೆ ನಿಂತಿದ್ದಾರೆ ಎಂದು ಹೇಳಿದರು. ತಮಿಳುನಾಡು ಎಂದರೆ ನನಗೆ ಕುಟುಂಬದಂತೆ. ನಾನಿಲ್ಲಿ ಯಾವುದೇ ಸ್ವಾರ್ಥ ಸಾಧನೆಗಾಗಿ ಬಂದಿಲ್ಲ ಎಂದು ರಾಹುಲ್​ ಹೇಳಿದರು.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್