AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಿಧಿಗೆ 1000 ರೂ.ದೇಣಿಗೆ ನೀಡಿದ ಪ್ರಧಾನಿ ಮೋದಿ; ಕೈಲಾದಷ್ಟು ಹಣ ನೀಡಿ, ಪಕ್ಷ ಸದೃಢಗೊಳಿಸಲು ಕರೆ

ಬಿಜೆಪಿಯ ಈ ದೇಣಿಗೆ ಸಂಗ್ರಹ ಕಾರ್ಯಕ್ರಮಕ್ಕೆ ಮೈಕ್ರೋ-ಡೊನೇಶನ್​ ಎಂದೇ ಹೆಸರಿಡಲಾಗಿದ್ದು, ಆ ಫೋಟೋವನ್ನೂ ಕೂಡ ಪಿಎಂ ಮೋದಿ ಶೇರ್​ ಮಾಡಿದ್ದಾರೆ.

ಬಿಜೆಪಿ ನಿಧಿಗೆ 1000 ರೂ.ದೇಣಿಗೆ ನೀಡಿದ ಪ್ರಧಾನಿ ಮೋದಿ; ಕೈಲಾದಷ್ಟು ಹಣ ನೀಡಿ, ಪಕ್ಷ ಸದೃಢಗೊಳಿಸಲು ಕರೆ
ಪ್ರಧಾನಿ ಮೋದಿ
TV9 Web
| Edited By: |

Updated on: Dec 25, 2021 | 4:19 PM

Share

ದೆಹಲಿ: ಇಂದು ಭಾರತೀಯ ಜನತಾ ಪಕ್ಷ (ಬಿಜೆಪಿ)ದ ನಿಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ(PM Modi)ಯವರು 1000 ರೂಪಾಯಿ ದೇಣಿಗೆ ನೀಡಿದ್ದಾರೆ. ಹೀಗೆ, ನಿಮ್ಮ ಕೈಲಾದಷ್ಟು ಮೊತ್ತದ ದೇಣಿಗೆ ನೀಡಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಿ ಎಂದು ಬಿಜೆಪಿ ಬೆಂಬಲಿಗರಿಗೆ ಪ್ರಧಾನಿ ಮೋದಿ (PM Narendra Modi) ಕರೆ ನೀಡಿದ್ದಾರೆ.  ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಾನಿಂದು ಭಾರತೀಯ ಜನತಾ ಪಾರ್ಟಿಯ ನಿಧಿಗೆ 1 ಸಾವಿರ ರೂಪಾಯಿ ದೇಣಿಗೆ ನೀಡಿದ್ದೇನೆ. ಯಾವಾಗಲೂ ರಾಷ್ಟ್ರಕ್ಕೆ ಪ್ರಥಮ ಆದ್ಯತೆ ನೀಡುವುದು ನಮ್ಮ ಆದರ್ಶ. ಇಂಥ ಪಕ್ಷಕ್ಕೆ ನೀವು ಚಿಕ್ಕಚಿಕ್ಕ ಮೊತ್ತದ ದೇಣಿಗೆ ನೀಡಿದರೆ, ನಮ್ಮ ಸಿಬ್ಬಂದಿಗೆ ತುಂಬ ಅನುಕೂಲವಾಗುತ್ತದೆ. ಜೀವಮಾನ ಪೂರ್ತಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಅವರ ಉತ್ಸಾಹಕ್ಕೆ ಇನ್ನಷ್ಟು ಉತ್ತೇಜನ ನೀಡಿದಂತಾಗುತ್ತದೆ. ಬಿಜೆಪಿಯನ್ನು ಬಲಿಷ್ಠಗೊಳಿಸಲು, ಈ ಮೂಲಕ ಭಾರತವನ್ನು ಬಲಿಷ್ಠಗೊಳಿಸಲು ಸಹಾಯ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಹಾಗೇ, ತಾವು ಪಕ್ಷಕ್ಕೆ ದೇಣಿಗೆ ನೀಡಿದ್ದಕ್ಕಾಗಿ, ತಮಗೆ ನೀಡಲಾದ ರಸೀದಿಯ ಫೋಟೋವನ್ನೂ ಟ್ವೀಟ್​ನಲ್ಲಿ ಹಂಚಿಕೊಂಡಿದ್ದಾರೆ.

ಬಿಜೆಪಿಯ ಈ ದೇಣಿಗೆ ಸಂಗ್ರಹ ಕಾರ್ಯಕ್ರಮಕ್ಕೆ ಮೈಕ್ರೋ-ಡೊನೇಶನ್​ ಎಂದೇ ಹೆಸರಿಡಲಾಗಿದ್ದು, ಆ ಫೋಟೋವನ್ನೂ ಕೂಡ ಪಿಎಂ ಮೋದಿ ಶೇರ್​ ಮಾಡಿದ್ದಾರೆ, ಈ ದೇಣಿಗೆ ಸಂಗ್ರಹ ಅಭಿಯಾನ ಒಂದು ಕಾರಣಕ್ಕೆ ವಿಶೇಷವಾಗಿದೆ. ಇದು ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನವಾದ ಇಂದು (ಡಿ.25) ಶುರುವಾಗಲಿದ್ದು, ಫೆಬ್ರವರಿ 11ರಂದು ದೀನ್​ ದಯಾಳ್​ ಉಪಾಧ್ಯಾಯ ಅವರ ಪುಣ್ಯತಿಥಿಯಂದು ಮುಕ್ತಾಯಗೊಳ್ಳಲಿದೆ. ನೀವು ನೀಡುವ ದೇಣಿಗೆ, ಈ ರಾಷ್ಟ್ರ ನಿರ್ಮಾಣಕ್ಕಾಗಿ ಸ್ವಾರ್ಥರಹಿತವಾಗಿ ದುಡಿಯುತ್ತಿರುವ ಲಕ್ಷಾಂತರ ಕಾರ್ಯಕರ್ತರಿಗೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಪಕ್ಷಕ್ಕೆ 1 ಸಾವಿರ ರೂಪಾಯಿ ದೇಣಿಗೆ ನೀಡಿದ್ದಾರೆ. ನಾನು NaMo ಆ್ಯಪ್​ ಮೂಲಕ 1000 ರೂಪಾಯಿ ನೀಡಿ, ಪಕ್ಷ ಸದೃಢಗೊಳಿಸಲು ನನ್ನದೇ ಆದ ಚಿಕ್ಕ ಕೊಡುಗೆ ನೀಡಿದ್ದೇನೆ. ನೀವು ರೆಫೆರೆಲ್​ ಕೋಡ್ ಬಳಸಿಕೊಂಡು, ನಿಮ್ಮ ಕುಟುಂಬ, ಸ್ನೇಹಿತರನ್ನೂ ಈ ಅಭಿಯಾನದಲ್ಲಿ ಸೇರಿಸಿಕೊಳ್ಳಬಹುದು. ಈ ಮೂಲಕ ಬಿಜೆಪಿಯನ್ನು ಬಲಿಷ್ಠಗೊಳಿಸಬಹುದು ಎಂದು ಜೆಪಿ ನಡ್ಡಾ ಟ್ವೀಟ್ ಮಾಡಿದ್ದಾರೆ.   ಅಂದಹಾಗೆ, ಬಿಜೆಪಿಯನ್ನು ಬೆಂಬಲಿಸುವವರು 5 ರೂಪಾಯಿಯಿಂದ 1000 ರೂ.ವರೆಗೆ ದೇಣಿಗೆ ನೀಡಬಹುದು ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ‘ಕರ್ನಾಟಕ ಬಂದ್‌ನಿಂದ ಮಹಾರಾಷ್ಟ್ರದವರಿಗೆ ತೊಂದರೆ ಆಗಲ್ಲ; ಬಂದ್‌ಗೆ ಕರೆ ನೀಡಿದವರು ಈ ಬಗ್ಗೆ ಯೋಚಿಸಬೇಕು’

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ