AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan Yojana: ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಂವಾದ

PM Kisan Samman Nidhi Yojana: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರದಂದು (ಮೇ 14, 2021) ಪಿಎಂ ಕಿಸಾನ್ ಯೋಜನೆಯ ಎಂಟನೇ ಕಂತನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು.

PM Kisan Yojana: ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಂವಾದ
ನರೇಂದ್ರ ಮೋದಿ
Srinivas Mata
|

Updated on:May 14, 2021 | 12:49 PM

Share

ಪ್ರಧಾನ್​ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರದಂದು (ಮೇ 14, 2021) ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ- ಕಿಸಾನ್) ಯೋಜನೆಯ ಎಂಟನೇ ಕಂತನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಂತಿನ ಭಾಗವಾಗಿ 19,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತವನ್ನು 9.5 ಕೋಟಿಗೂ ಹೆಚ್ಚು ರೈತರ ಬ್ಯಾಂಕ್​ ಖಾತೆಗಳಿಗೆ ವರ್ಗಾವಣೆ ಮಾಡಲಾಯಿತು. ಇದೇ ವೇಳೆ ಪ್ರಧಾನಿ ಮೋದಿ ಅವರು ಫಲಾನುಭವಿಗಳ ಜತೆಗೆ ಸಂವಾದ ನಡೆಸಿದರು. ಆಂಧ್ರಪ್ರದೇಶದ ರೈತರೊಬ್ಬರು ಬರಡು ನೆಲವನ್ನು ಸಾವಯವ ಕೃಷಿ ಯೋಗ್ಯ ಭೂಮಿ ಮಾಡಿದ್ದು, ಅವರ ಜತೆ ಮಾತನಾಡಿ, ನೀವು ಇತರರಿಗೆ ಮಾದರಿ ಸಿದ್ಧಪಡಿಸಿದ್ದೀರಿ. ನಿಮ್ಮ ವಿಶ್ವಾಸವೇ ಆತ್ಮವಿಶ್ವಾಸ ಹಾಗೂ ಅನುಭವವನ್ನು ಮಾತನಾಡುತ್ತದೆ ಎಂದರು. ದಕ್ಷಿಣ ರಾಜ್ಯದ ರೈತ ಮಹಿಳೆಯೊಬ್ಬರು, ವರ್ಷದಲ್ಲಿ ಮೂರು ಬೆಳೆ ಬೆಳೆಯುವುದಾಗಿ ಹೇಳಿದರು.

ಸಾವಯವ ಕೃಷಿ ಮಾದರಿ ಉದ್ಯಮ ಸ್ಥಾಪಿಸಿದ ಮೇಘಾಲಯದ ರೈತರೊಬ್ಬರ ಜತೆ ಮಾತನಾಡಿದ ಮೋದಿ, ದೇಶದಲ್ಲಿ 10,000 ರೈತ ಉತ್ಪಾದಕ ಒಕ್ಕೂಟ (FPO) ಸ್ಥಾಪಿಸಲಾಗಿದೆ ಮತ್ತು ಸಣ್ಣ ರೈತರು ಸಹ ಅವರೊಂದಿಗೆ ಸೇರಿದ್ದಾರೆ. “ನೀವು ಏನು ಮಾಡುತ್ತೀರಿ ಎಂಬ ಬಗ್ಗೆ ಇರುವ ವಿಶ್ವಾಸವು ಮಾದರಿಯಾಗಿರುತ್ತದೆ,” ಎಂದು ರೈತರಿಗೆ ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಹ ಇದ್ದರು. ಪಶ್ಚಿಮ ಬಂಗಾಲ ಸಹ ಯೋಜನೆಗೆ ಸೇರ್ಪಡೆ ಆಗಿದೆ. ಏಳು ಲಕ್ಷಕ್ಕೂ ಹೆಚ್ಚು ರೈತರು ಈ ಯೋಜನೆ ಅಡಿಯಲ್ಲಿ ಅನುಕೂಲ ಪಡೆಯಲಿದ್ದಾರೆ ಎಂದರು. ಪಿಎಂ ಕಿಸಾನ್ ಯೋಜನೆಯನ್ನು ಎನ್​ಡಿಎ ಸರ್ಕಾರ 2019ರಲ್ಲಿ ಆರಂಭಿಸಿತು. ದೇಶದ ರೈತರಿಗೆ ವರ್ಷಕ್ಕೆ 6000 ರೂಪಾಯಿ, 2000 ರೂಪಾಯಿಯಂತೆ ಮೂರು ಕಂತುಗಳಲ್ಲಿ ವಿತರಿಸಲಾಗುತ್ತದೆ. ಈ ತನಕ 1.15 ಲಕ್ಷ ಕೋಟಿ ರೂಪಾಯಿ ರೈತರ ಖಾತೆಗೆ ವರ್ಗಾವಣೆ ಆಗಿದೆ ಎಂದು ಗುರುವಾರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: PM Kisan Yojana ಒಂದೇ ದಿನದಲ್ಲಿ ಪಿಎಂ ಕಿಸಾನ್ ಯೋಜನೆಯಲ್ಲಿ 19 ಸಾವಿರ ಕೋಟಿ ಪಾವತಿಗೆ ಕೇಂದ್ರ ಸಿದ್ಧತೆ

ಇದನ್ನೂ ಓದಿ: PM Kisan Samman Nidhi: ಪಿಎಂ ಕಿಸಾನ್ ನಿಧಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ?

(PM Kisan Samman Nidhi 8th installment released through video conference by prime minister Narendra Modi through video conference)

Published On - 12:33 pm, Fri, 14 May 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?