ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮುನ್ನ ಮೋದಿಯವರ ವ್ರತಾಚರಣೆ ಹೇಗಿರುತ್ತದೆ?

|

Updated on: Jan 18, 2024 | 5:27 PM

ಮೋದಿ ಅವರು 11 ದಿನಗಳ ಕಾಲ 'ಯಮ್ ನಿಯಮ್' ಅನ್ನು ಅನುಸರಿಸುತ್ತಾರೆ. ಅವರು ಧರ್ಮಗ್ರಂಥಗಳಲ್ಲಿ ನೀಡಿರುವ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮುನ್ನ ಮೋದಿಯವರ ವ್ರತಾಚರಣೆ ಹೇಗಿರುತ್ತದೆ?
ನರೇಂದ್ರ ಮೋದಿ
Follow us on

ದೆಹಲಿ ಜನವರಿ 18: ರಾಮಮಂದಿರದಲ್ಲಿ (Ram Mandir)  ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) 11ದಿನಗಳ ವ್ರತಾಚರಣೆ ಮಾಡುತ್ತಿದ್ದಾರೆ. ವ್ರತಾಚರಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನೆಲದ ಮೇಲೆ ಮಲಗಲಿದ್ದಾರೆ. ಅವರು ಕೇವಲ ಎಳನೀರು ಮಾತ್ರ ಸೇವಿಸಲಿದ್ದಾರೆ ಎಂದು ಮೂಲಗಳು ಗುರುವಾರ ಇಂಡಿಯಾ ಟುಡೇಗೆ ತಿಳಿಸಿವೆ.
ಜನವರಿ 12 ರಂದು ಮೋದಿ ವ್ರತಾಚರಣೆ ಆರಂಭಿಸಿದ್ದು, ಪ್ರಾಣ ಪ್ರತಿಷ್ಠೆಯ “ಐತಿಹಾಸಿಕ” ಮತ್ತು “ಶುಭ” ಸಂದರ್ಭಕ್ಕೆ ಸಾಕ್ಷಿಯಾಗಲು ನಾನು ಅದೃಷ್ಟಶಾಲಿ ಎಂದು ಹೇಳಿದರು.

ಪ್ರಾಣ ಪ್ರತಿಷ್ಠಾ ವ್ಯಾಯಾಮದ ಸಮಯದಲ್ಲಿ ಎಲ್ಲಾ ಭಾರತೀಯರನ್ನು ಪ್ರತಿನಿಧಿಸುವವರಾಗಿ ದೇವರು ನನ್ನನ್ನು ಆಯ್ಕೆ ಮಾಡಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು  ನಾನು 11 ದಿನಗಳ ವಿಶೇಷ ಧಾರ್ಮಿಕ ವ್ರತಾಚರಣೆ ಪಾಲನೆ ಕೈಗೊಳ್ಳುತ್ತಿರುವುದಾಗಿ ಮೋದಿ ಹೇಳಿದ್ದಾರೆ.  ಮೋದಿ ಅವರು 11 ದಿನಗಳ ಕಾಲ ‘ಯಮ್ ನಿಯಮ್’ ಅನ್ನು ಅನುಸರಿಸುತ್ತಾರೆ. ಅವರು ಧರ್ಮಗ್ರಂಥಗಳಲ್ಲಿ ನೀಡಿರುವ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಯಮ್ ನಿಯಮ’ ತನ್ನ ಸಾಧಕರಿಗೆ ಯೋಗ, ಧ್ಯಾನ ಮತ್ತು ವಿವಿಧ ಅಂಶಗಳಲ್ಲಿ ಶಿಸ್ತು ಸೇರಿದಂತೆ ಹಲವಾರು ಕಠಿಣ ಕ್ರಮಗಳನ್ನು ವಿವರಿಸುತ್ತದೆ. ಪ್ರಧಾನಿ ಮೋದಿ ಅವರು ತಮ್ಮ ದೈನಂದಿನ ಜೀವನದಲ್ಲಿ ಸೂರ್ಯೋದಯಕ್ಕೂ ಮುನ್ನ ಶುಭ ಸಮಯದಲ್ಲಿ ಏಳುವುದು, ಧ್ಯಾನ ಮತ್ತು ಸಾತ್ವಿಕ ಆಹಾರವನ್ನು ಸೇವಿಸುವುದು ಸೇರಿದಂತೆ ಹಲವು ಶಿಸ್ತುಗಳನ್ನು ಅನುಸರಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

11 ದಿನಗಳ ಕಾಲ ಕಠಿಣ ತಪಸ್ಸಿನೊಂದಿಗೆ ಉಪವಾಸವನ್ನೂ ಆಚರಿಸಲು ಪ್ರಧಾನಿ ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇವರ ವಿಗ್ರಹದಲ್ಲಿ ದೈವಿಕ ಪ್ರಜ್ಞೆಯ ಅಭಿವ್ಯಕ್ತಿ ಎಂದು ಪ್ರಾಣ ಪ್ರತಿಷ್ಠೆಯನ್ನು ವಿವರಿಸಲಾಗಿದೆ. ಪವಿತ್ರ ಗ್ರಂಥಗಳು ಪ್ರಾಣ ಪ್ರತಿಷ್ಠೆ ಮೊದಲು ಉಪವಾಸದ ನಿಯಮಗಳಿಗೆ ಮಾರ್ಗಸೂಚಿಗಳನ್ನು ಒದಗಿಸುತ್ತವೆ.

ರಾಮಮಂದಿರದಲ್ಲಿ  ಪ್ರಾಣ ಪ್ರತಿಷ್ಠಾ

ಜನವರಿ 22 ರಂದು ನಡೆಯುವ ಪ್ರಾಣ ಪ್ರತಿಷ್ಠೆಯ ಮುನ್ನ, ಬುಧವಾರ ರಾತ್ರಿ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮ ಲಲ್ಲಾನ ವಿಗ್ರಹವನ್ನು ತರಲಾಗಿದೆ ಎಂದು ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.
ಗರ್ಭಗುಡಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಇಂದು ನೆರವೇರುವ ನಿರೀಕ್ಷೆ ಇದೆ.

ಇದನ್ನೂ ಓದಿ:ರಾಮಮಂದಿರ ಜ್ಞಾಪಕಾರ್ಥ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಜನವರಿ 22 ರ ಪ್ರಾಣ ಪ್ರತಿಷ್ಠಾ ಸಮಾರಂಭದ ಪೂರ್ವಭಾವಿಯಾಗಿ ಹಲವಾರು ವಿಧಿವಿಧಾನಗಳನ್ನು ನಡೆಸಲಾಗುತ್ತಿದೆ ಮತ್ತು ಕಾರ್ಯಕ್ರಮದ ಮುನ್ನಾದಿನದವರೆಗೆ ಮುಂದುವರಿಯುತ್ತದೆ. ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದೇವಸ್ಥಾನದ ಟ್ರಸ್ಟ್ ಪ್ರಕಾರ, ರಾಜಕಾರಣಿಗಳು, ಸೆಲೆಬ್ರಿಟಿಗಳು, ಕೈಗಾರಿಕೋದ್ಯಮಿಗಳು, ಸಂತರು ಸೇರಿದಂತೆ 7,000 ಕ್ಕೂ ಹೆಚ್ಚು ಜನರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ