AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇಕ್‌ ಇನ್ ಇಂಡಿಯಾ’ ಜೊತೆ ‘ಮೇಕ್‌ ಫಾರ್ ವರ್ಲ್ಡ್’ -ಪ್ರಧಾನಿ ಮೋದಿ ಘೋಷವಾಕ್ಯ

ದೆಹಲಿ: ದೇಶಾದ್ಯಂತ ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಭಾರತದ ಸ್ವಾತಂತ್ರ್ಯಕ್ಕಾಗಿ ಮಣಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನ ನೆನೆಯುವ ಸುವರ್ಣ ದಿನ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿ ರಾಜ್‌ ಘಾಟ್​ಗೆ ತೆರಳಿ ಪುಷ್ಪನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಬಳಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ನಂತರ ದೇಶವನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ದೇಶದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದರು. ಇಂದು ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಇದರ ಹಿಂದೆ ದೇಶದ ಲಕ್ಷಾಂತರ ಜನರ ತ್ಯಾಗ ಬಲಿದಾನವಿದೆ. […]

‘ಮೇಕ್‌ ಇನ್ ಇಂಡಿಯಾ’ ಜೊತೆ ‘ಮೇಕ್‌ ಫಾರ್ ವರ್ಲ್ಡ್’ -ಪ್ರಧಾನಿ ಮೋದಿ ಘೋಷವಾಕ್ಯ
KUSHAL V
|

Updated on:Aug 15, 2020 | 8:41 AM

Share

ದೆಹಲಿ: ದೇಶಾದ್ಯಂತ ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಭಾರತದ ಸ್ವಾತಂತ್ರ್ಯಕ್ಕಾಗಿ ಮಣಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನ ನೆನೆಯುವ ಸುವರ್ಣ ದಿನ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿ ರಾಜ್‌ ಘಾಟ್​ಗೆ ತೆರಳಿ ಪುಷ್ಪನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಬಳಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ನಂತರ ದೇಶವನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ದೇಶದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದರು. ಇಂದು ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಇದರ ಹಿಂದೆ ದೇಶದ ಲಕ್ಷಾಂತರ ಜನರ ತ್ಯಾಗ ಬಲಿದಾನವಿದೆ. ಎಲ್ಲ ಸ್ವಾತಂತ್ರ್ಯ ಸೇನಾನಿಗಳು, ಹುತಾತ್ಮರಿಗೆ ನನ್ನ ನಮನ ಎಂದು ಗೌರವ ಸೂಚಿಸಿದರು. ಜೊತೆಗೆ, ಕೊರೊನಾ ವಾರಿಯರ್ಸ್‌ಗೆ ಸಹ ಪ್ರಧಾನಿ ಮೋದಿ ನಮನ ಸಲ್ಲಿಸಿದರು.

ನಾವು ಹಲವು ಸಂಕಲ್ಪಗಳೊಂದಿಗೆ ಮುನ್ನಡೆಯಬೇಕಿದೆ. ನಾವು ನಮ್ಮವರ ಹೋರಾಟವನ್ನು ಎಂದೂ ಮರೆಯಬಾರದು. ಮುಂದಿನ ವರ್ಷ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದೇವೆ. 75ನೇ ಸ್ವಾತಂತ್ರ್ಯದಿನ ವೇಳೆಗೆ ನಮ್ಮ ಸಂಕಲ್ಪ ಈಡೇರಬೇಕು. ಕೊರೊನಾ ಸೋಂಕು ಎಲ್ಲವನ್ನೂ ನಿಯಂತ್ರಿಸಿದೆ. ವಿಸ್ತಾರವಾದದ ಯೋಚನೆಯಿಂದ ವಿಸ್ತರಿಸಲು ಹಲವು ಯತ್ನ ನಡೆಯುತ್ತಿದೆ. ಆದ್ರೆ ಭಾರತ ವಿಸ್ತಾರವಾದದ ಯೋಚನೆಗೆ ಸವಾಲಾಗಿ ನಿಂತಿದೆ ಎಂದು ಹೇಳಿದರು. ಭಾರತ ಜನಾಂದೋಲನದ ಮೂಲಕ ಸ್ವಾತಂತ್ರ್ಯ ಪಡೆದಿದೆ. ಇಡೀ ವಿಶ್ವಕ್ಕೆ ಭಾರತ ತನ್ನ ಏಕತೆಯ ಶಕ್ತಿಯನ್ನು ತೋರಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಜೊತೆಗೆ, ಭಾರತದಲ್ಲಿ FDI ಹೆಚ್ಚಳವಾಗಿದ. ವಿಶ್ವದ ದೊಡ್ಡ ದೊಡ್ಡ ಕಂಪನಿಗಳು ಇದೀಗ ಭಾರತದತ್ತ ಮುಖಮಾಡಿದೆ. ಕೊರೊನಾ ಸಂಕಷ್ಟದಲ್ಲೂ ವಿಶ್ವ ಭಾರತದ ಮೇಲೆ ವಿಶ್ವಾಸವಿರಿಸಿದೆ. ಇಡೀ ವಿಶ್ವಕ್ಕೆ ಭಾರತದಿಂದ ಹಲವು ಅಪೇಕ್ಷೆಗಳಿದೆ. ಹಾಗಾಗಿ, ನಾವು ‘ಮೇಕ್‌ ಇನ್ ಇಂಡಿಯಾ’ ಜೊತೆ ‘ಮೇಕ್‌ ಫಾರ್ ವರ್ಲ್ಡ್’ ಎಂಬ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ತಮ್ಮ ಭಾಷಣದಲ್ಲಿ ಹೇಳಿದರು.

ನಾವು ಆತ್ಮನಿರ್ಭರ ಭಾರತ ಎಂಬ ಸಂಕಲ್ಪವನ್ನು ಕೈಗೊಂಡಿದ್ದೇವೆ. ಆತ್ಮನಿರ್ಭರದ ಕನಸು ಈಗ ಸಂಕಲ್ಪವಾಗಿ ಬದಲಾಗಿದೆ. ಭಾರತ ಈ ಸಂಕಲ್ಪವನ್ನು ಪೂರ್ಣಗೊಳಿಸಿ ತೋರಿಸಲಿದೆ ಎಂದು ತಮ್ಮ ಆತ್ಮವಿಶ್ವಾಸದ ಮಾತುಗಳನ್ನು ಆಡಿದರು. ಭಾರತ ಏನನ್ನು ನಿರ್ಧರಿಸುತ್ತೋ ಅದನ್ನು ಮಾಡಿ ತೋರಿಸುತ್ತೆ. ನಾವು ಇಡೀ ವಿಶ್ವಕ್ಕೆ ಇದನ್ನು ತೋರಿಸಬೇಕು. ಭಾರತದ ಸಾಮರ್ಥ್ಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

Published On - 8:33 am, Sat, 15 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ