AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇಕ್‌ ಇನ್ ಇಂಡಿಯಾ’ ಜೊತೆ ‘ಮೇಕ್‌ ಫಾರ್ ವರ್ಲ್ಡ್’ -ಪ್ರಧಾನಿ ಮೋದಿ ಘೋಷವಾಕ್ಯ

ದೆಹಲಿ: ದೇಶಾದ್ಯಂತ ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಭಾರತದ ಸ್ವಾತಂತ್ರ್ಯಕ್ಕಾಗಿ ಮಣಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನ ನೆನೆಯುವ ಸುವರ್ಣ ದಿನ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿ ರಾಜ್‌ ಘಾಟ್​ಗೆ ತೆರಳಿ ಪುಷ್ಪನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಬಳಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ನಂತರ ದೇಶವನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ದೇಶದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದರು. ಇಂದು ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಇದರ ಹಿಂದೆ ದೇಶದ ಲಕ್ಷಾಂತರ ಜನರ ತ್ಯಾಗ ಬಲಿದಾನವಿದೆ. […]

‘ಮೇಕ್‌ ಇನ್ ಇಂಡಿಯಾ’ ಜೊತೆ ‘ಮೇಕ್‌ ಫಾರ್ ವರ್ಲ್ಡ್’ -ಪ್ರಧಾನಿ ಮೋದಿ ಘೋಷವಾಕ್ಯ
KUSHAL V
|

Updated on:Aug 15, 2020 | 8:41 AM

Share

ದೆಹಲಿ: ದೇಶಾದ್ಯಂತ ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಭಾರತದ ಸ್ವಾತಂತ್ರ್ಯಕ್ಕಾಗಿ ಮಣಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನ ನೆನೆಯುವ ಸುವರ್ಣ ದಿನ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿ ರಾಜ್‌ ಘಾಟ್​ಗೆ ತೆರಳಿ ಪುಷ್ಪನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಬಳಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ನಂತರ ದೇಶವನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ದೇಶದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದರು. ಇಂದು ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಇದರ ಹಿಂದೆ ದೇಶದ ಲಕ್ಷಾಂತರ ಜನರ ತ್ಯಾಗ ಬಲಿದಾನವಿದೆ. ಎಲ್ಲ ಸ್ವಾತಂತ್ರ್ಯ ಸೇನಾನಿಗಳು, ಹುತಾತ್ಮರಿಗೆ ನನ್ನ ನಮನ ಎಂದು ಗೌರವ ಸೂಚಿಸಿದರು. ಜೊತೆಗೆ, ಕೊರೊನಾ ವಾರಿಯರ್ಸ್‌ಗೆ ಸಹ ಪ್ರಧಾನಿ ಮೋದಿ ನಮನ ಸಲ್ಲಿಸಿದರು.

ನಾವು ಹಲವು ಸಂಕಲ್ಪಗಳೊಂದಿಗೆ ಮುನ್ನಡೆಯಬೇಕಿದೆ. ನಾವು ನಮ್ಮವರ ಹೋರಾಟವನ್ನು ಎಂದೂ ಮರೆಯಬಾರದು. ಮುಂದಿನ ವರ್ಷ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದೇವೆ. 75ನೇ ಸ್ವಾತಂತ್ರ್ಯದಿನ ವೇಳೆಗೆ ನಮ್ಮ ಸಂಕಲ್ಪ ಈಡೇರಬೇಕು. ಕೊರೊನಾ ಸೋಂಕು ಎಲ್ಲವನ್ನೂ ನಿಯಂತ್ರಿಸಿದೆ. ವಿಸ್ತಾರವಾದದ ಯೋಚನೆಯಿಂದ ವಿಸ್ತರಿಸಲು ಹಲವು ಯತ್ನ ನಡೆಯುತ್ತಿದೆ. ಆದ್ರೆ ಭಾರತ ವಿಸ್ತಾರವಾದದ ಯೋಚನೆಗೆ ಸವಾಲಾಗಿ ನಿಂತಿದೆ ಎಂದು ಹೇಳಿದರು. ಭಾರತ ಜನಾಂದೋಲನದ ಮೂಲಕ ಸ್ವಾತಂತ್ರ್ಯ ಪಡೆದಿದೆ. ಇಡೀ ವಿಶ್ವಕ್ಕೆ ಭಾರತ ತನ್ನ ಏಕತೆಯ ಶಕ್ತಿಯನ್ನು ತೋರಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಜೊತೆಗೆ, ಭಾರತದಲ್ಲಿ FDI ಹೆಚ್ಚಳವಾಗಿದ. ವಿಶ್ವದ ದೊಡ್ಡ ದೊಡ್ಡ ಕಂಪನಿಗಳು ಇದೀಗ ಭಾರತದತ್ತ ಮುಖಮಾಡಿದೆ. ಕೊರೊನಾ ಸಂಕಷ್ಟದಲ್ಲೂ ವಿಶ್ವ ಭಾರತದ ಮೇಲೆ ವಿಶ್ವಾಸವಿರಿಸಿದೆ. ಇಡೀ ವಿಶ್ವಕ್ಕೆ ಭಾರತದಿಂದ ಹಲವು ಅಪೇಕ್ಷೆಗಳಿದೆ. ಹಾಗಾಗಿ, ನಾವು ‘ಮೇಕ್‌ ಇನ್ ಇಂಡಿಯಾ’ ಜೊತೆ ‘ಮೇಕ್‌ ಫಾರ್ ವರ್ಲ್ಡ್’ ಎಂಬ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ತಮ್ಮ ಭಾಷಣದಲ್ಲಿ ಹೇಳಿದರು.

ನಾವು ಆತ್ಮನಿರ್ಭರ ಭಾರತ ಎಂಬ ಸಂಕಲ್ಪವನ್ನು ಕೈಗೊಂಡಿದ್ದೇವೆ. ಆತ್ಮನಿರ್ಭರದ ಕನಸು ಈಗ ಸಂಕಲ್ಪವಾಗಿ ಬದಲಾಗಿದೆ. ಭಾರತ ಈ ಸಂಕಲ್ಪವನ್ನು ಪೂರ್ಣಗೊಳಿಸಿ ತೋರಿಸಲಿದೆ ಎಂದು ತಮ್ಮ ಆತ್ಮವಿಶ್ವಾಸದ ಮಾತುಗಳನ್ನು ಆಡಿದರು. ಭಾರತ ಏನನ್ನು ನಿರ್ಧರಿಸುತ್ತೋ ಅದನ್ನು ಮಾಡಿ ತೋರಿಸುತ್ತೆ. ನಾವು ಇಡೀ ವಿಶ್ವಕ್ಕೆ ಇದನ್ನು ತೋರಿಸಬೇಕು. ಭಾರತದ ಸಾಮರ್ಥ್ಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

Published On - 8:33 am, Sat, 15 August 20

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ