AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶದ ರೈತ ಸಮುದಾಯದ ಜೊತೆ ಪ್ರಧಾನಿ ಮೋದಿಯಿಂದ ಇಂದು ವರ್ಚುವಲ್ ಸಂವಾದ

ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯ ಪ್ರದೇಶದ ರೈತರ ಜೊತೆ ವರ್ಚುವಲ್ ಸಂವಾದ ನಡೆಸಲಿದ್ದಾರೆ. ನೂತನ ಕೃಷಿ ಕಾಯ್ದೆಗಳ ಕುರಿತು 23ನೇ ದಿನಕ್ಕೂ ಮುಂದುವರೆದಿರುವ ದೆಹಲಿ ಚಲೋ ಹಿನ್ನೆಲೆಯಲ್ಲಿ ಈ ಸಂವಾದ ಮಹತ್ವ ಪಡೆದಿದೆ.

ಮಧ್ಯ ಪ್ರದೇಶದ ರೈತ ಸಮುದಾಯದ ಜೊತೆ ಪ್ರಧಾನಿ ಮೋದಿಯಿಂದ ಇಂದು ವರ್ಚುವಲ್ ಸಂವಾದ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
guruganesh bhat
|

Updated on: Dec 18, 2020 | 11:40 AM

Share

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯ ಪ್ರದೇಶದ ರೈತರ ಜೊತೆ ವರ್ಚುವಲ್ ಸಂವಾದ ನಡೆಸಲಿದ್ದಾರೆ. ಬೆಳೆ ಹಾನಿಗೊಳಗಾದ 35 ಲಕ್ಷ ರೈತ ಕುಟುಂಬಗಳಿಗೆ ಮಧ್ಯ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ 1660 ಕೋಟಿ ಹಣ ವಿತರಿಸಿ ಅವರು ಸಂವಾದ ನಡೆಸಲಿದ್ದಾರೆ. ನೂತನ ಕೃಷಿ ಕಾಯ್ದೆಗಳ ಕುರಿತು 23ನೇ ದಿನಕ್ಕೂ ಮುಂದುವರೆದಿರುವ ದೆಹಲಿ ಚಲೋ ಹಿನ್ನೆಲೆಯಲ್ಲಿ ಈ ಸಂವಾದ ಮಹತ್ವ ಪಡೆದಿದೆ.

ಗ್ರಾಮ ಪಂಚಾಯತಿ ಹಂತದಿಂದಲೂ ರೈತ ಸಮುದಾಯವನ್ನು ಈ ಸಂವಾದದ ಮೂಲಕ ತಲುಪುವ ಗುರಿಯನ್ನು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೊಂದಿದ್ದಾರೆ. ಮಧ್ಯಾಹ್ನ ಎರಡು ಗಂಟೆಗೆ ಆಯೋಜನೆಯಾಗಿರುವ ವರ್ಚುವಲ್ ಸಂವಾದದಲ್ಲಿ ಸುಮಾರು 20 ಸಾವಿರ ಜನರ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮಧ್ಯ ಪ್ರದೇಶ ಸರ್ಕಾರ ತಿಳಿಸಿದೆ.

ರೈತ ಸಮುದಾಯದಲ್ಲಿ ನೂತನ ಕೃಷಿ ಕಾಯ್ದೆಗಳ ಪರ ಅಭಿಪ್ರಾಯ ಮೂಡಿಸುವಲ್ಲಿ ಈ ವರ್ಚುವಲ್ ಸಂವಾದ ಬಿಜೆಪಿಗೆ ನೆರವಾಗುವ ನಿರೀಕ್ಷೆಯಿದೆ. ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೃಷಿ ಕಾಯ್ದೆಗಳ ಪರ ರಾಜ್ಯಾದ್ಯಂತ ಸರಣಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.

ಇತ್ತ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ದೆಹಲಿ ಚಲೋ ನಿರತರರಿಗೆ ಬರೆದ ಪತ್ರವನ್ನು ಪ್ರಧಾನಿ ಮೋದಿ ರಿಟ್ವೀಟ್ ಮಾಡಿದ್ದಾರೆ. ನರೇಂದ್ರ ತೋಮರ್ ಪತ್ರದಲ್ಲಿ, ‘ಕೃಷಿ ಸಮುದಾಯದ ಸಹೋದರ, ಸಹೋದರಿಯರೇ.. ನಿಮ್ಮ ಜೊತೆ ಅತ್ಯಂತ ಪ್ರಾಮಾಣಿಕ ಮತ್ತು ಶಿಷ್ಟಾಚಾರದೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ’ ಎಂದು ಸೂಚ್ಯವಾಗಿ ಹೇಳಿದ್ದಾರೆ. ಅಲ್ಲದೇ, ದೇಶದ ಎಲ್ಲಾ ಸಾರ್ವಜನಿಕರು ಸಹ ಈ ಪತ್ರವನ್ನು ಓದಬಯಸುವೆ ಎಂದು ಸಹ ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ