AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶದ ರೈತ ಸಮುದಾಯದ ಜೊತೆ ಪ್ರಧಾನಿ ಮೋದಿಯಿಂದ ಇಂದು ವರ್ಚುವಲ್ ಸಂವಾದ

ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯ ಪ್ರದೇಶದ ರೈತರ ಜೊತೆ ವರ್ಚುವಲ್ ಸಂವಾದ ನಡೆಸಲಿದ್ದಾರೆ. ನೂತನ ಕೃಷಿ ಕಾಯ್ದೆಗಳ ಕುರಿತು 23ನೇ ದಿನಕ್ಕೂ ಮುಂದುವರೆದಿರುವ ದೆಹಲಿ ಚಲೋ ಹಿನ್ನೆಲೆಯಲ್ಲಿ ಈ ಸಂವಾದ ಮಹತ್ವ ಪಡೆದಿದೆ.

ಮಧ್ಯ ಪ್ರದೇಶದ ರೈತ ಸಮುದಾಯದ ಜೊತೆ ಪ್ರಧಾನಿ ಮೋದಿಯಿಂದ ಇಂದು ವರ್ಚುವಲ್ ಸಂವಾದ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
guruganesh bhat
|

Updated on: Dec 18, 2020 | 11:40 AM

Share

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯ ಪ್ರದೇಶದ ರೈತರ ಜೊತೆ ವರ್ಚುವಲ್ ಸಂವಾದ ನಡೆಸಲಿದ್ದಾರೆ. ಬೆಳೆ ಹಾನಿಗೊಳಗಾದ 35 ಲಕ್ಷ ರೈತ ಕುಟುಂಬಗಳಿಗೆ ಮಧ್ಯ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ 1660 ಕೋಟಿ ಹಣ ವಿತರಿಸಿ ಅವರು ಸಂವಾದ ನಡೆಸಲಿದ್ದಾರೆ. ನೂತನ ಕೃಷಿ ಕಾಯ್ದೆಗಳ ಕುರಿತು 23ನೇ ದಿನಕ್ಕೂ ಮುಂದುವರೆದಿರುವ ದೆಹಲಿ ಚಲೋ ಹಿನ್ನೆಲೆಯಲ್ಲಿ ಈ ಸಂವಾದ ಮಹತ್ವ ಪಡೆದಿದೆ.

ಗ್ರಾಮ ಪಂಚಾಯತಿ ಹಂತದಿಂದಲೂ ರೈತ ಸಮುದಾಯವನ್ನು ಈ ಸಂವಾದದ ಮೂಲಕ ತಲುಪುವ ಗುರಿಯನ್ನು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೊಂದಿದ್ದಾರೆ. ಮಧ್ಯಾಹ್ನ ಎರಡು ಗಂಟೆಗೆ ಆಯೋಜನೆಯಾಗಿರುವ ವರ್ಚುವಲ್ ಸಂವಾದದಲ್ಲಿ ಸುಮಾರು 20 ಸಾವಿರ ಜನರ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮಧ್ಯ ಪ್ರದೇಶ ಸರ್ಕಾರ ತಿಳಿಸಿದೆ.

ರೈತ ಸಮುದಾಯದಲ್ಲಿ ನೂತನ ಕೃಷಿ ಕಾಯ್ದೆಗಳ ಪರ ಅಭಿಪ್ರಾಯ ಮೂಡಿಸುವಲ್ಲಿ ಈ ವರ್ಚುವಲ್ ಸಂವಾದ ಬಿಜೆಪಿಗೆ ನೆರವಾಗುವ ನಿರೀಕ್ಷೆಯಿದೆ. ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೃಷಿ ಕಾಯ್ದೆಗಳ ಪರ ರಾಜ್ಯಾದ್ಯಂತ ಸರಣಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.

ಇತ್ತ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ದೆಹಲಿ ಚಲೋ ನಿರತರರಿಗೆ ಬರೆದ ಪತ್ರವನ್ನು ಪ್ರಧಾನಿ ಮೋದಿ ರಿಟ್ವೀಟ್ ಮಾಡಿದ್ದಾರೆ. ನರೇಂದ್ರ ತೋಮರ್ ಪತ್ರದಲ್ಲಿ, ‘ಕೃಷಿ ಸಮುದಾಯದ ಸಹೋದರ, ಸಹೋದರಿಯರೇ.. ನಿಮ್ಮ ಜೊತೆ ಅತ್ಯಂತ ಪ್ರಾಮಾಣಿಕ ಮತ್ತು ಶಿಷ್ಟಾಚಾರದೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ’ ಎಂದು ಸೂಚ್ಯವಾಗಿ ಹೇಳಿದ್ದಾರೆ. ಅಲ್ಲದೇ, ದೇಶದ ಎಲ್ಲಾ ಸಾರ್ವಜನಿಕರು ಸಹ ಈ ಪತ್ರವನ್ನು ಓದಬಯಸುವೆ ಎಂದು ಸಹ ಅವರು ಹೇಳಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ