AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶದ ರೈತ ಸಮುದಾಯದ ಜೊತೆ ಪ್ರಧಾನಿ ಮೋದಿಯಿಂದ ಇಂದು ವರ್ಚುವಲ್ ಸಂವಾದ

ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯ ಪ್ರದೇಶದ ರೈತರ ಜೊತೆ ವರ್ಚುವಲ್ ಸಂವಾದ ನಡೆಸಲಿದ್ದಾರೆ. ನೂತನ ಕೃಷಿ ಕಾಯ್ದೆಗಳ ಕುರಿತು 23ನೇ ದಿನಕ್ಕೂ ಮುಂದುವರೆದಿರುವ ದೆಹಲಿ ಚಲೋ ಹಿನ್ನೆಲೆಯಲ್ಲಿ ಈ ಸಂವಾದ ಮಹತ್ವ ಪಡೆದಿದೆ.

ಮಧ್ಯ ಪ್ರದೇಶದ ರೈತ ಸಮುದಾಯದ ಜೊತೆ ಪ್ರಧಾನಿ ಮೋದಿಯಿಂದ ಇಂದು ವರ್ಚುವಲ್ ಸಂವಾದ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
guruganesh bhat
|

Updated on: Dec 18, 2020 | 11:40 AM

Share

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯ ಪ್ರದೇಶದ ರೈತರ ಜೊತೆ ವರ್ಚುವಲ್ ಸಂವಾದ ನಡೆಸಲಿದ್ದಾರೆ. ಬೆಳೆ ಹಾನಿಗೊಳಗಾದ 35 ಲಕ್ಷ ರೈತ ಕುಟುಂಬಗಳಿಗೆ ಮಧ್ಯ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ 1660 ಕೋಟಿ ಹಣ ವಿತರಿಸಿ ಅವರು ಸಂವಾದ ನಡೆಸಲಿದ್ದಾರೆ. ನೂತನ ಕೃಷಿ ಕಾಯ್ದೆಗಳ ಕುರಿತು 23ನೇ ದಿನಕ್ಕೂ ಮುಂದುವರೆದಿರುವ ದೆಹಲಿ ಚಲೋ ಹಿನ್ನೆಲೆಯಲ್ಲಿ ಈ ಸಂವಾದ ಮಹತ್ವ ಪಡೆದಿದೆ.

ಗ್ರಾಮ ಪಂಚಾಯತಿ ಹಂತದಿಂದಲೂ ರೈತ ಸಮುದಾಯವನ್ನು ಈ ಸಂವಾದದ ಮೂಲಕ ತಲುಪುವ ಗುರಿಯನ್ನು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೊಂದಿದ್ದಾರೆ. ಮಧ್ಯಾಹ್ನ ಎರಡು ಗಂಟೆಗೆ ಆಯೋಜನೆಯಾಗಿರುವ ವರ್ಚುವಲ್ ಸಂವಾದದಲ್ಲಿ ಸುಮಾರು 20 ಸಾವಿರ ಜನರ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮಧ್ಯ ಪ್ರದೇಶ ಸರ್ಕಾರ ತಿಳಿಸಿದೆ.

ರೈತ ಸಮುದಾಯದಲ್ಲಿ ನೂತನ ಕೃಷಿ ಕಾಯ್ದೆಗಳ ಪರ ಅಭಿಪ್ರಾಯ ಮೂಡಿಸುವಲ್ಲಿ ಈ ವರ್ಚುವಲ್ ಸಂವಾದ ಬಿಜೆಪಿಗೆ ನೆರವಾಗುವ ನಿರೀಕ್ಷೆಯಿದೆ. ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೃಷಿ ಕಾಯ್ದೆಗಳ ಪರ ರಾಜ್ಯಾದ್ಯಂತ ಸರಣಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.

ಇತ್ತ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ದೆಹಲಿ ಚಲೋ ನಿರತರರಿಗೆ ಬರೆದ ಪತ್ರವನ್ನು ಪ್ರಧಾನಿ ಮೋದಿ ರಿಟ್ವೀಟ್ ಮಾಡಿದ್ದಾರೆ. ನರೇಂದ್ರ ತೋಮರ್ ಪತ್ರದಲ್ಲಿ, ‘ಕೃಷಿ ಸಮುದಾಯದ ಸಹೋದರ, ಸಹೋದರಿಯರೇ.. ನಿಮ್ಮ ಜೊತೆ ಅತ್ಯಂತ ಪ್ರಾಮಾಣಿಕ ಮತ್ತು ಶಿಷ್ಟಾಚಾರದೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ’ ಎಂದು ಸೂಚ್ಯವಾಗಿ ಹೇಳಿದ್ದಾರೆ. ಅಲ್ಲದೇ, ದೇಶದ ಎಲ್ಲಾ ಸಾರ್ವಜನಿಕರು ಸಹ ಈ ಪತ್ರವನ್ನು ಓದಬಯಸುವೆ ಎಂದು ಸಹ ಅವರು ಹೇಳಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ