ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್​ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತ ಹೋರಾಡುತ್ತ ಈಗ ಅನ್‌ಲಾಕ್‌ 2ಕ್ಕೆ ಪ್ರವೇಶ ಮಾಡಿದ್ದೇವೆ. ಕೊರೊನಾ ಸಾವಿನ ಸಂಖ್ಯೆ ನೋಡಿದ್ರೆ ಉತ್ತಮ ಸ್ಥಿತಿಯಲ್ಲಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ ನಾಮ್ಮ ದೇಶದಲ್ಲಿ ಸರಿಯಾದ ಸಮಯದಲ್ಲಿ ಲಾಕ್‌ಡೌನ್ ಮಾಡಿದ್ದೇವೆ. ‌ಹಾಗಾಗಿ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ ಎಂದು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ನವೆಂಬರ್​ವರೆಗೂ ಅನ್ನ ಯೋಜನೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನವೆಂಬರ್ ತಿಂಗಳ ಅಂತ್ಯದವರೆಗೂ ವಿಸ್ತರಣೆ ಮಾಡಲಾಗಿದೆ. ಇದರಿಂದ 80 ಕೋಟಿಗೂ ಹೆಚ್ಚು ಬಡ ಕುಟುಂಬಕ್ಕೆ ರೇಷನ್ ಸಿಗಲಿದೆ. […]

ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್​ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ
Edited By:

Updated on: Jun 30, 2020 | 5:08 PM

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತ ಹೋರಾಡುತ್ತ ಈಗ ಅನ್‌ಲಾಕ್‌ 2ಕ್ಕೆ ಪ್ರವೇಶ ಮಾಡಿದ್ದೇವೆ. ಕೊರೊನಾ ಸಾವಿನ ಸಂಖ್ಯೆ ನೋಡಿದ್ರೆ ಉತ್ತಮ ಸ್ಥಿತಿಯಲ್ಲಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ ನಾಮ್ಮ ದೇಶದಲ್ಲಿ ಸರಿಯಾದ ಸಮಯದಲ್ಲಿ ಲಾಕ್‌ಡೌನ್ ಮಾಡಿದ್ದೇವೆ. ‌ಹಾಗಾಗಿ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ ಎಂದು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

ನವೆಂಬರ್​ವರೆಗೂ ಅನ್ನ ಯೋಜನೆ
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನವೆಂಬರ್ ತಿಂಗಳ ಅಂತ್ಯದವರೆಗೂ ವಿಸ್ತರಣೆ ಮಾಡಲಾಗಿದೆ. ಇದರಿಂದ 80 ಕೋಟಿಗೂ ಹೆಚ್ಚು ಬಡ ಕುಟುಂಬಕ್ಕೆ ರೇಷನ್ ಸಿಗಲಿದೆ. ಬಡ ಕುಟುಂಬದ ಪ್ರತಿಯೊಬ್ಬರಿಗೂ ಪ್ರತಿ ತಿಂಗಳು ಪಡಿತರ ಸಿಗಲಿದೆ. 5 ಕೆಜಿ ಅಕ್ಕಿ ಅಥವಾ ಗೋಧಿ, ಬೇಳೆ ಉಚಿತವಾಗಿ ನೀಡುತ್ತೇವೆ. ಈ ಮಹತ್ವದ ಯೋಜನೆ ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳವರೆಗೆ ಚಾಲ್ತಿಯಲ್ಲಿರುತ್ತದೆ.

ಒಂದು ದೇಶ, ಒಂದು ರೇಷನ್ ಕಾರ್ಡ್
ದೇಶದ ಎಲ್ಲರಿಗೂ ಒಂದೇ ರೇಷನ್‌ ಕಾರ್ಡ್ ಕೊಡುವ ‘ಒಂದು ದೇಶ, ಒಂದು ರೇಷನ್ ಕಾರ್ಡ್’ ಯೋಜನೆಯನ್ನೂ ಶೀಘ್ರ ಜಾರಿ ಮಾಡ್ತೀವಿ. ಈ ಕಾರ್ಯಕ್ಕಾಗಿ ಕೇಂದ್ರ ಸರ್ಕಾರ 2 ಲಕ್ಷ ಕೋಟಿ ರೂಪಾಯಿ ವ್ಯಯಿಸುತ್ತಿದೆ.

ಇದೀಗ ದೇಶದಲ್ಲಿ ಮಳೆಗಾಲ ಶುರುವಾಗಿದೆ. ಕೃಷಿ ಕ್ಷೇತ್ರದಲ್ಲಿ ಈಗ ಚುರುಕಿನ ಚಟುವಟಿಕೆ ಕಂಡು ಬರುತ್ತಿದೆ. ಅಮೆರಿಕ ಮತ್ತು ಐರೋಪ್ಯ ಒಕ್ಕೂಟದ ಒಟ್ಟು ಜನಸಂಖ್ಯೆಗಿಂತಲೂ ಹೆಚ್ಚು ಜನರಿಗೆ ನಮ್ಮ ಸರ್ಕಾರಗಳು ಪಡಿತರ ವಿತರಿಸಿವೆ ಎಂದರು.

Published On - 4:13 pm, Tue, 30 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us