PM Modi: ‘ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸಬೇಕು’: ಪ್ರಧಾನಿ ನರೇಂದ್ರ ಮೋದಿ

PM Modi at conference with Judges, CMs: ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

PM Modi: ‘ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸಬೇಕು’: ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
| Edited By: shivaprasad.hs

Updated on:Apr 30, 2022 | 11:44 AM

ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನ್ಯಾಯಾಂಗವನ್ನು ಒತ್ತಾಯಿಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ‘‘ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕು. ಇದು ದೇಶದ ಸಾಮಾನ್ಯ ನಾಗರಿಕರಿಗೆ ನ್ಯಾಯ ವ್ಯವಸ್ಥೆಯಲ್ಲಿ ವಿಶ್ವಾಸವನ್ನು ಹೆಚ್ಚಿಸುತ್ತದೆ’’ ಎಂದು ಪ್ರಧಾನಿ ಹೇಳಿದ್ದಾರೆ. ‘‘ನಮ್ಮ ದೇಶದಲ್ಲಿ ನ್ಯಾಯಾಂಗವು ಸಂವಿಧಾನದ ರಕ್ಷಣೆಯ ಪಾತ್ರ ವಹಿಸಿದರೆ, ಶಾಸಕಾಂಗವು ನಾಗರಿಕರ ಆಶಯಗಳನ್ನು ಪ್ರತಿನಿಧಿಸುತ್ತದೆ. ಸಂವಿಧಾನದ ಈ ಎರಡು ವಿಭಾಗಗಳ ಸಮತೋಲನವು ದೇಶದಲ್ಲಿ ಪರಿಣಾಮಕಾರಿ ಮತ್ತು ಸಮಯ ಬದ್ಧವಾದ ನ್ಯಾಯಾಂಗ ವ್ಯವಸ್ಥೆಗೆ ಮಾರ್ಗಸೂಚಿ ಸಿದ್ಧಪಡಿಸುತ್ತದೆ ಎಂದು ನಾನು ನಂಬುತ್ತೇನೆ’’ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ನುಡಿದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಧಾನಿ ಭಾಷಣದ ಮುಖ್ಯಾಂಶಗಳು:

  1. ನ್ಯಾಯಾಂಗ ವ್ಯವಸ್ಥೆಯನ್ನು ಸುಧಾರಿಸಲು ನಾವು ನಮ್ಮ ಕೈಲಾದಷ್ಟು ಮಾಡುತ್ತಿದ್ದೇವೆ. ನ್ಯಾಯಾಂಗ ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ನವೀಕರಿಸಲು ನಾವು ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಿ ನುಡಿದಿದ್ದಾರೆ.
  2. ಭಾರತ ಸರ್ಕಾರವು ನ್ಯಾಯಾಂಗ ವ್ಯವಸ್ಥೆಯಲ್ಲಿ ತಂತ್ರಜ್ಞಾನವನ್ನು ಅಳವಡಿಕೆಯನ್ನು ಡಿಜಿಟಲ್ ಇಂಡಿಯಾ ಮಿಷನ್‌ನ ಅತ್ಯಗತ್ಯ ಭಾಗವೆಂದು ಪರಿಗಣಿಸುತ್ತದೆ. ಇ-ಕೋರ್ಟ್‌ಗಳ ಯೋಜನೆಯನ್ನು ಇಂದು ಮಿಷನ್ ಮೋಡ್‌ ಅಡಿಯಲ್ಲಿ ಜಾರಿಗೊಳಿಸಲಾಗುತ್ತಿದೆ.
  3. ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕು. ಇದು ದೇಶದ ಸಾಮಾನ್ಯ ನಾಗರಿಕರಿಗೆ ನ್ಯಾಯ ವ್ಯವಸ್ಥೆಯಲ್ಲಿ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
  4. 2015 ರಲ್ಲಿ ನಾವು ಅಪ್ರಸ್ತುತವಾದ ಸುಮಾರು 1800 ಕಾನೂನುಗಳನ್ನು ಗುರುತಿಸಿದ್ದೇವೆ. ಇವುಗಳಲ್ಲಿ ಕೇಂದ್ರವು ಅಂತಹ 1450 ಕಾನೂನುಗಳನ್ನು ರದ್ದುಗೊಳಿಸಿದೆ. ರಾಜ್ಯಗಳು 75 ಕಾನೂನುಗಳನ್ನು ರದ್ದುಗೊಳಿಸಿವೆ.

ಎಎನ್​ಐ ಟ್ವೀಟ್ ಇಲ್ಲಿದೆ:

ಪ್ರಧಾನಿ ಮೋದಿ ಮಾತು:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಅರುಣಾಚಲ ಪ್ರದೇಶದ ಪೇಮಾ ಖಂಡು ಮತ್ತು ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ, ಪಂಜಾಬ್ ಸಿಎಂ ಭಗವಂತ್ ಮಾನ್ ಮೊದಲಾದವರು ಪ್ರಮುಖ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಒಂದು ವಾರದಲ್ಲಿ ಪ್ರಧಾನಿ ಮೋದಿ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ.

ಇನ್ನೂ ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮದೀನಾದಲ್ಲಿ ಪಾಕ್ ಪ್ರಧಾನಿ ನೇತೃತ್ವದ ನಿಯೋಗವನ್ನು ನೋಡಿ ‘ಚೋರ್ ಚೋರ್’ ಎಂದು ಕೂಗಿದ ಯಾತ್ರಿಕರು

Published On - 11:32 am, Sat, 30 April 22

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ