AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ವಿರುದ್ಧ ಸಮರ: ಪ್ರಧಾನಿ ಮೋದಿ ಮತ್ತು ಸಿಡಿಎಸ್ ರಾವತ್ ನಡುವೆ ಸಶಸ್ತ್ರ ದಳಗಳ ಸಿದ್ಧತೆ ಬಗ್ಗೆ ಚರ್ಚೆ 

ಎರಡು ವರ್ಷಗಳ ಹಿಂದೆ ನಿವೃತ್ತಿ ಹೊಂದಿರುವ ಮತ್ತು ಸೇವಾವಧಿಗೆ ಮುನ್ನವೇ ರಿಟೈರ್​ ಆಗಿರುವ ಸಶಸ್ತ್ರ ದಳಗಳ ವೈದ್ಯಕೀಯ ಸಿಬ್ಬಂದಿಯನ್ನು ಅವರೀಗ ನೆಲೆಸಿರುವ ಇಲ್ಲವೇ ಹತ್ತಿರದ ಸ್ಥಳಗಳಲ್ಲಿರುವ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಕಾರ್ಯನಿರ್ವಹಿಸಲು ವಾಪಸ್ಸು ಕರೆಸಲಾಗಿದೆಯೆಂದು ಸಿಡಿಎಸ್ ಪ್ರಧಾನಿಗಳಿಗೆ ಹೇಳಿದರು.

ಕೋವಿಡ್ ವಿರುದ್ಧ ಸಮರ: ಪ್ರಧಾನಿ ಮೋದಿ ಮತ್ತು ಸಿಡಿಎಸ್ ರಾವತ್ ನಡುವೆ ಸಶಸ್ತ್ರ ದಳಗಳ ಸಿದ್ಧತೆ ಬಗ್ಗೆ ಚರ್ಚೆ 
ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಡಿಎಸ್ ಬಿಪಿನ್ ರಾವತ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on:Apr 26, 2021 | 7:28 PM

Share

ನವದೆಹಲಿ:  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೋಮವಾರದಂದು ರಕ್ಷಣಾ ದಳಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರನ್ನು ಭೇಟಿಯಾಗಿ ಕೊವಿಡ್-19 ಪಿಡುಗು ದೇಶದಲ್ಲಿ ಸೃಷ್ಟಿಸಿರುವ ಹಾಹಾಕಾರದ ಹಿನ್ನೆಲೆಯಲ್ಲಿ ರಕ್ಷಣಾ ದಳಗಳು ಮಾಡಿಕೊಂಡಿರುವ ಸಿದ್ಧತೆ ಮತ್ತು ನಡೆಸುತ್ತಿರುವ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದರು.

ಎರಡು ವರ್ಷಗಳ ಹಿಂದೆ ನಿವೃತ್ತಿ ಹೊಂದಿರುವ ಮತ್ತು ಸೇವಾವಧಿಗೆ ಮುನ್ನವೇ ರಿಟೈರ್​ ಆಗಿರುವ ಸಶಸ್ತ್ರ ದಳಗಳ ವೈದ್ಯಕೀಯ ಸಿಬ್ಬಂದಿಯನ್ನು ಅವರೀಗ ನೆಲೆಸಿರುವ ಇಲ್ಲವೇ ಹತ್ತಿರದ ಸ್ಥಳಗಳಲ್ಲಿರುವ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಕಾರ್ಯನಿರ್ವಹಿಸಲು ವಾಪಸ್ಸು ಕರೆಸಲಾಗಿದೆಯೆಂದು ಸಿಡಿಎಸ್ ಪ್ರಧಾನಿಗಳಿಗೆ ಹೇಳಿದರು. ‘ಎರಡು ವರ್ಷಗಳಿಗಿಂತ ಮೊದಲು ನಿವೃತ್ತಿ ಹೊಂದಿರುವ ವೈದ್ಯಾಧಿಕಾರಿಗಳಿಗೂ ವೈದ್ಯಕೀಯ ಸೇವೆಗಳ ತುರ್ತು ಸಹಾಯವಾಣಿಗಳ ಮೂಲಕ ಸಲಹೆಗಳನ್ನು ನೀಡಿ ಸೇವೆ ಒದಗಿಸುವಂತೆ ಮನವಿ ಮಾಡಲಾಗಿದೆ,’ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.

ಸ್ಟಾಫ್ ನೇಮಕಾತಿಯ ಮೇಲಿರುವ ಮೂರು ಸೇನೆಗಳ ಎಲ್ಲಾ ವೈದ್ಯಾಧಿಕಾರಿಗಳಿಗೆ ಕಮಾಂಡ್ ಹೆಡ್​ಕ್ವಾರ್ಟರ್ಸ್, ಕಾರ್ಪ್ಸ್ ಹೆಡ್​ಕ್ವಾರ್ಟರ್ಸ್, ವಿಭಾಗೀಯ ಹೆಡ್​ಕ್ವಾರ್ಟರ್ಸ್ ಮತ್ತು ನೌಕಾ ಹಾಗೂ ವಾಯುದಳಕ್ಕೆ ಸಂಬಂಧಿಸಿದ ಆಸ್ಪತ್ರೆಗಳಿಗೆ ನಿಯೋಜಿಸಲಾಗುವುದೆಂದು ಪ್ರಧಾನ ಮಂತ್ರಿಗಳಿಗೆ ಈ ಸಂದರ್ಭದಲ್ಲಿ ತಿಳಿಸಲಾಯಿತು.

ವೈದ್ಯರೊಂದಿಗೆ ಭಾರಿ ಪ್ರಮಾಣದಲ್ಲಿ ನರ್ಸಿಂಗ್ ಸಿಬ್ಬಂದಿಯನ್ನು ಸಹ ಕೊವಿಡ್​ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ರವಾನಿಸಲಾಗಿದೆ ಹಾಗೂ ರಕ್ಷಣಾ ದಳಗಳ ಬೇರೆ ಬೇರೆ ವಿಭಾಗಗಳಲ್ಲಿ ಲಭ್ಯವಿರುವ ಆಮ್ಲಜನಕದ ಸಿಲಿಂಡರ್​ಗಳನ್ನು ಬಿಡುಗಡೆ ಮಾಡಲಾಗುವುದೆಮದು ರಾವತ್ ಅವರು ಪ್ರಧಾನಿಗಳ ಗಮನಕ್ಕೆ ತಂದರು. ಸಾಕಷ್ಟು ದೊಡ್ಡ ಪ್ರಮಾಣದಲ್ಲಿರುವ ಸೇನೆಯ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ನಾಗರಿಕರಿಗೆ ಒದಗಿಸಲಾಗುವುದೆಂದು ಸಿಡಿಎಸ್ ಪ್ರಧಾನಿ ಮೋದಿಯವರಿಗೆ ತಿಳಿಸಿದರು.

PM Narendra Modi with CDS Bipin Rawat

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಿಡಿಎಸ್ ಬಿಪಿನ್ ರಾವತ್

ಭಾರತ ಮತ್ತು ಬೇರೆ ದೇಶಗಳಿಂದ ಆಕ್ಸಿಜನ್ ಸಿಲಿಂಡರ್​ಗಳು ಮತ್ತು ಇತರ ವೈದ್ಯಕೀಯ ಸಲಕರಣೆಗಳನ್ನು ಅಗತ್ಯವಿರುವ ಸ್ಥಳಗಳಿಗೆ ತಲುಪಿಸುತ್ತಿರುವ ಭಾರತೀಯ ವಾಯು ಸೇನೆಯ ಕಾರ್ಯಾಚರಣೆಯನ್ನು ಸಹ ಪ್ರಧಾನಿಗಳು ಪರಿಶೀಲಿಸಿದರು.

ಕೇಂದ್ರೀಯ ಮತ್ತು ರಾಜ್ಯ ಸೈನಿಕರ ಕ್ಷೇಮಾಭಿವೃದ್ಧಿ ಸಂಸ್ಥೆಗಳು ಹಿರಿಯ ಸೇನಾನಿಗಳ ಸೆಲ್​ಗಳಲ್ಲಿ ನಿಯುಕ್ತಿಗೊಂಡಿರುವ ಅಧಿಕಾರಿಗಳಿಗೆ ನಿವೃತ್ತ ಯೋಧರ ಸೇವೆಯನ್ನು ಬಳಸಿಕೊಂಡು ತೀರ ಕುಗ್ರಾಮದಂಥ ಪ್ರದೇಶಗಳಲ್ಲೂ ವೈದ್ಯಕೀಯ ನೆರವು ಸಿಗುವಂತಾಗುವದನ್ನು ಖಾತರಿಪಡಿಸಿಕೊಳ್ಳುವಂತೆ ನಿರ್ದೇಶಿಸುವ ಕುರಿತು ಸಿಡಿಎಸ್​ ಅವರೊಂದಿಗೆ ಪ್ರಧಾನಿಗಳು ಚರ್ಚಿಸಿದರು.

ಇದನ್ನೂ ಓದಿ: karnataka Covid Curfew: ರಾಜ್ಯದಲ್ಲಿ 14 ದಿನ ಕಟ್ಟುನಿಟ್ಟಿನ ಕರ್ಫ್ಯೂ ಘೋಷಿಸಿದ ಸಿಎಂ ಯಡಿಯೂರಪ್ಪ

ಇದನ್ನೂ ಓದಿ: ರಾಜ್ಯದಲ್ಲಿ ಕೊವಿಡ್ ಕರ್ಫ್ಯೂ: ಏನಿರುತ್ತೆ? ಏನಿರಲ್ಲ?

Published On - 7:28 pm, Mon, 26 April 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!