AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Constitution Day 2021: ನ.26 ಸಂವಿಧಾನ ದಿನ; ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್​

Constitution Day: 1949ರಲ್ಲಿ ಭಾರತದ ಸಂವಿಧಾನವನ್ನು ಸಂಸತ್ತಿನಲ್ಲಿ ಅಂಗೀಕಾರ ಮಾಡಿದ ಸ್ಮರಣಾರ್ಥ ಪ್ರತಿವರ್ಷವೂ ನವೆಂಬರ್​ 26ರನ್ನು ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಅಂದಹಾಗೆ ಸಂವಿಧಾನ ದಿನ ಆಚರಣೆ ಶುರುವಾಗಿದ್ದು 2015ರಿಂದ.

Constitution Day 2021: ನ.26 ಸಂವಿಧಾನ ದಿನ; ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್​
ಪ್ರಧಾನಿ ಮೋದಿ ಮತ್ತು ರಾಮನಾಥ್​ ಕೋವಿಂದ್​
Follow us
TV9 Web
| Updated By: Lakshmi Hegde

Updated on: Nov 25, 2021 | 12:08 PM

ನಾಳೆ (ನವೆಂಬರ್ 26) ಸಂವಿಧಾನ ದಿನಾಚರಣೆ (Constitution Day) ನಿಮಿತ್ತ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಪಾಲ್ಗೊಳ್ಳುವರು. ರಾಮನಾಥ್ ಕೋವಿಂದ್ ಸಂವಿಧಾನದ ಪ್ರಸ್ತಾವನೆಯನ್ನು ಓದಲಿದ್ದಾರೆ. ಸಂವಿಧಾನ ಸಭೆಯ ಡಿಬೇಟ್​​ಗಳ ಡಿಜಿಟಲ್​ ಸ್ವರೂಪ, ಈವರೆಗಿನ ತಿದ್ದುಪಡಿಗಳನ್ನು ಒಳಗೊಂಡ ಸಂವಿಧಾನದ ಕ್ಯಾಲಿಯೋಗ್ರಾಫ್​​ ಕಾಪಿಯನ್ನು ಬಿಡುಗಡೆ ಮಾಡಲಿದ್ದಾರೆ. ಹಾಗೇ, ಸಂವಿಧಾನದ ನಿಮಿತ್ತ ಒಂದು ಆನ್​ಲೈನ್​ ಕ್ವಿಜ್​ ಕೂಡ ಆಯೋಜಿಸಲಾಗಿದೆ. 

ಅದಾದ ಬಳಿಕ ಸುಪ್ರೀಂಕೋರ್ಟ್ ನಾಳೆಯಿಂದ ಎರಡು ದಿನ ಆಚರಿಸಲಿರುವ ಸಂವಿಧಾನ ದಿನವನ್ನು ನಾಳೆ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಬಳಿಕ ಸುಪ್ರೀಂಕೋರ್ಟ್​ ನ್ಯಾಯಾಧೀಶರು, ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ಹಿರಿಯ ನ್ಯಾಯಾಧೀಶರು, ಸಾಲಿಸಿಟರ್ ಜನರಲ್​​ರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಹಾಗೇ, ಸಂವಿಧಾನ ದಿನದ ನಿಮಿತ್ತ ಆನ್​ಲೈನ್​ನಲ್ಲಿ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮವಿದೆ. ಇದು ಒಟ್ಟು 23 ಭಾಷೆಗಳಲ್ಲಿ ಲಭ್ಯವಿದೆ. ಈ ಕಾರ್ಯಕ್ರಮವನ್ನು ಲೋಕಸಭಾ ಸ್ಪೀಕರ್​ ಆಯೋಜಿಸಲಿದ್ದು, ಅವರೂ ಪಾಲ್ಗೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಂಗಳವಾರ ಮಾಹಿತಿ ನೀಡಿದ್ದಾರೆ.  ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ ಸಂಸತ್ತು ಮತ್ತು ವಿಜ್ಞಾನ ಭವನದಲ್ಲಿ ನಡೆಯಲಿರುವ ವಿವಿಧ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ.

1949ರಲ್ಲಿ ಭಾರತದ ಸಂವಿಧಾನವನ್ನು ಸಂಸತ್ತಿನಲ್ಲಿ ಅಂಗೀಕಾರ ಮಾಡಿದ ಸ್ಮರಣಾರ್ಥ ಪ್ರತಿವರ್ಷವೂ ನವೆಂಬರ್​ 26ರನ್ನು ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಅಂದಹಾಗೆ ಸಂವಿಧಾನ ದಿನ ಆಚರಣೆ ಶುರುವಾಗಿದ್ದು 2015ರಿಂದ. ಸಂವಿಧಾನದ ಮಹತ್ವ ಸಾರಲು ಈ ದಿನಾಚರಣೆ ಪ್ರಾರಂಭವಾಗಿದೆ. ಅದಕ್ಕೂ ಮೊದಲು 2010ರಲ್ಲಿ ಮೋದಿಯವರು ಗುಜರಾತ್​ ಮುಖ್ಯಮಂತ್ರಿಯಾಗಿದ್ದಾಗ ಸಂವಿಧಾನ ಗೌರವ ಯಾತ್ರೆಯನ್ನು ನಡೆಸಿದ್ದನ್ನೂ ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Ravichandran Ashwin: ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ದಾಖಲೆಯ ಹೊಸ್ತಿಲಲ್ಲಿ ರವಿಚಂದ್ರನ್ ಅಶ್ವಿನ್

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್