Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವರಿಗೂ ಶೌಚಾಲಯ -ವಿಶ್ವ ಶೌಚಾಲಯ ದಿನದಂದು ಪ್ರಧಾನಿ ಮೋದಿ ಘೋಷವಾಕ್ಯ

ದೆಹಲಿ: ಶೌಚಾಲಯ ಬಳಸಿ ಆರೋಗ್ಯ ಉಳಿಸಿ. ಸ್ವಚ್ಛತೆ ಕಾಪಾಡಿ ರೋಗ ಮುಕ್ತರಾಗಿ ಮುಂತಾದ ಸಾಲುಗಳನ್ನು ನೀವು ನೋಡಿಯೇ ಇರುತ್ತೀರಿ. ಹೀಗೆ, ಶೌಚಾಲಯ ಬಳಸುವುದನ್ನು ಪ್ರೋತ್ಸಾಹಿಸಲು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನವಂಬರ್ 19ನ್ನು ವಿಶ್ವ ಶೌಚಾಲಯ ದಿನವೆಂದು ಆಚರಿಸಲಾಗುತ್ತದೆ. ಮುಂದಿನ ಹತ್ತು ವರ್ಷಗಳಲ್ಲಿ ಪ್ರಪಂಚದ ಎಲ್ಲಾ ಜನರೂ ಶೌಚಾಲಯ ಬಳಸುವಂತಾಗಬೇಕು ಎಂಬ ಆಶಯದಲ್ಲಿ ಈ ದಿನಾಚರಣೆ ಆಚರಿಸಲಾಗುತ್ತದೆ. ಜನಸಮೂಹವು ಆರೋಗ್ಯದಿಂದ ಇರಲು, ಹವಾಮಾನ ಬದಲಾವಣೆಯಲ್ಲಿ ಸುಸ್ಥಿರತೆ ತರುವ ಆಶಯವನ್ನು ವಿಶ್ವ ಶೌಚಾಲಯ ದಿನ 2020 […]

ಸರ್ವರಿಗೂ ಶೌಚಾಲಯ -ವಿಶ್ವ ಶೌಚಾಲಯ ದಿನದಂದು ಪ್ರಧಾನಿ ಮೋದಿ ಘೋಷವಾಕ್ಯ
ಪ್ರಧಾನಿ ನರೇಂದ್ರ ಮೋದಿ
Follow us
KUSHAL V
|

Updated on: Nov 19, 2020 | 7:27 PM

ದೆಹಲಿ: ಶೌಚಾಲಯ ಬಳಸಿ ಆರೋಗ್ಯ ಉಳಿಸಿ. ಸ್ವಚ್ಛತೆ ಕಾಪಾಡಿ ರೋಗ ಮುಕ್ತರಾಗಿ ಮುಂತಾದ ಸಾಲುಗಳನ್ನು ನೀವು ನೋಡಿಯೇ ಇರುತ್ತೀರಿ. ಹೀಗೆ, ಶೌಚಾಲಯ ಬಳಸುವುದನ್ನು ಪ್ರೋತ್ಸಾಹಿಸಲು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನವಂಬರ್ 19ನ್ನು ವಿಶ್ವ ಶೌಚಾಲಯ ದಿನವೆಂದು ಆಚರಿಸಲಾಗುತ್ತದೆ.

ಮುಂದಿನ ಹತ್ತು ವರ್ಷಗಳಲ್ಲಿ ಪ್ರಪಂಚದ ಎಲ್ಲಾ ಜನರೂ ಶೌಚಾಲಯ ಬಳಸುವಂತಾಗಬೇಕು ಎಂಬ ಆಶಯದಲ್ಲಿ ಈ ದಿನಾಚರಣೆ ಆಚರಿಸಲಾಗುತ್ತದೆ. ಜನಸಮೂಹವು ಆರೋಗ್ಯದಿಂದ ಇರಲು, ಹವಾಮಾನ ಬದಲಾವಣೆಯಲ್ಲಿ ಸುಸ್ಥಿರತೆ ತರುವ ಆಶಯವನ್ನು ವಿಶ್ವ ಶೌಚಾಲಯ ದಿನ 2020 ಹೊಂದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಟಾಯ್ಲೆಟ್ ಫಾರ್ ಆಲ್ ಎಂಬ ಹ್ಯಾಶ್​ಟ್ಯಾಗ್ ಬಳಸಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಭಾರತವು ಕೋಟ್ಯಾಂತರ ಜನರಿಗೆ ಶೌಚಾಲಯ ಮತ್ತು ನೈರ್ಮಲ್ಯದ ಸವಲತ್ತನ್ನು ಒದಗಿಸಿದೆ. ಇದು ವಿಶೇಷವಾಗಿ ದೇಶದ ನಾರಿ ಶಕ್ತಿಗೆ ಘನತೆ ಮತ್ತು ಆರೋಗ್ಯವನ್ನು ತಂದುಕೊಟ್ಟಿದೆ ಎಂದು ಹೇಳಿದ್ದಾರೆ.

ಜೊತೆಗೆ, ಈ ಕುರಿತು ಇಂದು ಟ್ವೀಟ್ ಮಾಡಿರುವ ವಿಶ್ವ ಆರೋಗ್ಯ ಸಂಸ್ಥೆ (WHO), ಪ್ರಪಂಚದ ನಾಲ್ಕರಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ಶೌಚಾಲಯದ ಸೌಲಭ್ಯವನ್ನು ಪಡೆದಿಲ್ಲ ಎಂದು ಹೇಳಿದೆ. ನೈರ್ಮಲ್ಯವು ಪ್ರತಿಯೊಬ್ಬನ ಹಕ್ಕು ಎಂದು ಸಹ ಹೇಳಿದೆ.

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು