ಪರೀಕ್ಷಾ ವ್ಯವಸ್ಥೆ ಸುಧಾರಿಸಲು ನಂದನ್ ನಿಲೇಕಣಿ ಅಧ್ಯಕ್ಷತೆಯಲ್ಲಿ ಟ್ಯಾಸ್ಕ್ ಫೋರ್ಸ್ ರಚನೆ
PM Modi announces constituting high powered task force for examination reforms: ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ, ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಲು ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕತೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇನ್ಫೋಸಿಸ್ ಸಹ-ಸಂಸ್ಥಾಪಕ ಹಾಗೂ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು (High-Powered Task Force) ರಚಿಸುವುದಾಗಿ ಘೋಷಿಸಿದ್ದಾರೆ.

ನವದೆಹಲಿ, ಜುಲೈ 26: ನೀಟ್ (NEET-UG) ಸೇರಿದಂತೆ ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸೋರಿಕೆ ಮತ್ತು ಅಕ್ರಮಗಳನ್ನು ತಡೆಗಟ್ಟಲು, ಹಾಗು ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಲು ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಉನ್ನತ ಮಟ್ಟದ ಕಾರ್ಯಪಡೆಯನ್ನು (High-Powered Task Force) ರಚಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಈ ವಿಚಾರವನ್ನು ಘೋಷಿಸಿದ್ದಾರೆ.
ದೇಶದ ಪರೀಕ್ಷಾ ಸಂಸ್ಥೆಗಳ ಪರೀಕ್ಷಾ ಪ್ರಕ್ರಿಯೆಯನ್ನು ಹೆಚ್ಚು ವಿಶ್ವಾಸಾರ್ಹ, ಪಾರದರ್ಶಕ ಮತ್ತು ಸುರಕ್ಷಿತಗೊಳಿಸಲು ಆಧುನಿಕ ತಂತ್ರಜ್ಞಾನವನ್ನು ಗರಿಷ್ಠ ಪ್ರಮಾಣದಲ್ಲಿ ಬಳಸುವುದು ಈ ಕಾರ್ಯಪಡೆಯ ಮುಖ್ಯ ಉದ್ದೇಶವಾಗಿದೆ.
ಮೋದಿ ಅವರ ಎಕ್ಸ್ ಪೋಸ್ಟ್
HIGH POWERED TASK FORCE on examination reforms under the leadership of Shri Nandan Nilekani constituted.@NandanNilekani pic.twitter.com/mMpmPdIEL5
— Narendra Modi (@narendramodi) July 26, 2026
ಇದನ್ನೂ ಓದಿ: ವಿಕಸಿತ್ ವೈಬ್ರೆಂಟ್ ಗ್ರಾಮ ಯೋಜನೆ; ಪ್ರಧಾನಿ ಜೊತೆ ಅನುಭವ ಹಂಚಿಕೊಂಡ ಯುವಜನರು
ವರದಿ ಆಧಾರಿತ ಹೊಸ ವ್ಯವಸ್ಥೆ: ನಂದನ್ ನಿಲೇಕಣಿ ನೇತೃತ್ವದ ಸಮಿತಿಯು ನೀಡುವ ಶಿಫಾರಸುಗಳು ಮತ್ತು ವರದಿಯ ಆಧಾರದ ಮೇಲೆ ಮುಂದಿನ ಎಲ್ಲಾ ಪ್ರಮುಖ ರಾಷ್ಟ್ರೀಯ ಪರೀಕ್ಷೆಗಳನ್ನು ಯಾವುದೇ ಅಕ್ರಮವಿಲ್ಲದೆ ನಡೆಸಲು ಹೊಸ ಚೌಕಟ್ಟನ್ನು ರೂಪಿಸಲಾಗುತ್ತದೆ.
ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ ಆರೋಪಿಗಳು ಈಗಾಗಲೇ ಜೈಲಿನಲ್ಲಿದ್ದಾರೆ. ಹೊಸ ಕಾನೂನುಗಳು, ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ಶೀಘ್ರ ವಿಚಾರಣೆ ನಡೆಸಲಾಗುವುದು ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಯುವಜನರು ಆತ್ಮವಿಶ್ವಾಸದಿಂದ ಬೆಳೆಯುವುದು ಗುರಿ- ವೈಬ್ರೆಂಟ್ ವಿಲೇಜ್ ಅಭಿಯಾನದಲ್ಲಿ ಮೋದಿ ಮಾತು
ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳಲ್ಲಿ ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮರುಸ್ಥಾಪಿಸಲು ಮತ್ತು ಭವಿಷ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಅಕ್ರಮಗಳನ್ನು ತಡೆಯಲು ತಂತ್ರಜ್ಞಾನ ಆಧಾರಿತ ಸುಧಾರಣೆ ತರಲು ಕೇಂದ್ರ ಸರ್ಕಾರ ಈ ಪ್ರಮುಖ ಹೆಜ್ಜೆ ಇಟ್ಟಿದೆ. ಹಾಗೆಯೇ, ನಾಳೆ ಸೋಮವಾರ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ತಿದ್ದುಪಡಿ ವಿಧೇಯಕವನ್ನೂ ಸರ್ಕಾರ ಮಂಡಿಸುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 7:27 pm, Sun, 26 July 26




