AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕ್ಯಾಂಪಸ್ ತೆರೆಯಲು ಯುಕೆಯ 9 ವಿಶ್ವವಿದ್ಯಾಲಯಗಳು ಸಿದ್ಧ: ಪ್ರಧಾನಿ ಮೋದಿ

ಭಾರತದಲ್ಲಿ ಕ್ಯಾಂಪಸ್ ತೆರೆಯಲು ಯುಕೆಯ 9 ವಿಶ್ವವಿದ್ಯಾಲಯಗಳು ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಶೈಕ್ಷಣಿಕ ಸಂಬಂಧವನ್ನು ಬಲಪಡಿಸಲು ಐತಿಹಾಸಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಇಂದು ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಜತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. ಸೌತ್​ಹ್ಯಾಂಪ್ಟನ್ ಯೂನಿವರ್ಸಿಟಿ ಸೇರಿ 9 ಪ್ರಮುಖ ಬ್ರಿಟಿಷ್ ವಿಶ್ವವಿದ್ಯಾಲಯಗಳು ಭಾರತದಲ್ಲಿ ಕ್ಯಾಂಪಸ್​ಗಳನ್ನು ತೆಗೆಯುವುದಾಗಿ ಘೋಷಿಸಿದರು.

ಭಾರತದಲ್ಲಿ ಕ್ಯಾಂಪಸ್ ತೆರೆಯಲು ಯುಕೆಯ 9 ವಿಶ್ವವಿದ್ಯಾಲಯಗಳು ಸಿದ್ಧ: ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Oct 09, 2025 | 1:19 PM

Share

ಮುಂಬೈ, ಅಕ್ಟೋಬರ್ 09: ಭಾರತದಲ್ಲಿ ಕ್ಯಾಂಪಸ್ ತೆರೆಯಲು ಯುಕೆಯ 9 ವಿಶ್ವವಿದ್ಯಾಲಯಗಳು ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಶೈಕ್ಷಣಿಕ ಸಂಬಂಧವನ್ನು ಬಲಪಡಿಸಲು ಐತಿಹಾಸಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಇಂದು ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಜತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ.

ಸೌತ್​ಹ್ಯಾಂಪ್ಟನ್ ಯೂನಿವರ್ಸಿಟಿ ಸೇರಿ 9 ಪ್ರಮುಖ ಬ್ರಿಟಿಷ್ ವಿಶ್ವವಿದ್ಯಾಲಯಗಳು ಭಾರತದಲ್ಲಿ ಕ್ಯಾಂಪಸ್​ಗಳನ್ನು ತೆಗೆಯುವುದಾಗಿ ಘೋಷಿಸಿದರು. ಸೌತ್​ಹ್ಯಾಂಪ್ಟನ್ ವಿಶ್ವವಿದ್ಯಾಲಯದ ಗುರುಗ್ರಾಮ ಕ್ಯಾಂಪಸ್​​ ಅನ್ನು ಈಗಾಗಲೇ ಉದ್ಘಾಟಿಸಲಾಗಿದ್ದು, ವಿದ್ಯಾರ್ಥಿಗಳ ಬ್ಯಾಚ್ ಆರಂಭಗೊಂಡಿದೆ. ಸಮಗ್ರ ಆರ್ಥಿಕ ವ್ಯಾಪಾರ ಒಪ್ಪಂದ (CETA)ಕ್ಕೆ ಸಹಿ ಹಾಕಿದ ನಂತರ ಭಾರತ-ಯುಕೆಯ ದ್ವಿಪಕ್ಷೀಯ ಸಂಬಂಧಗಳು ಹೊಸ ಎತ್ತರವನ್ನು ತಲುಪುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿ ಸ್ಟಾರ್ಮರ್ ಅವರ ನೇತೃತ್ವದಲ್ಲಿ, ಭಾರತ ಮತ್ತು ಯುಕೆ ಸಂಬಂಧಗಳು ಗಮನಾರ್ಹ ಪ್ರಗತಿಯನ್ನು ಕಂಡಿವೆ. ಈ ವರ್ಷದ ಜುಲೈನಲ್ಲಿ, ನಾನು ಯುಕೆಗೆ ಭೇಟಿ ನೀಡಿದ ಸಮಯದಲ್ಲಿ, ನಾವು ಐತಿಹಾಸಿಕ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದಕ್ಕೆ (ಸಿಇಟಿಎ) ಸಹಿ ಹಾಕಿದ್ದೇವೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Video: ಭಾರತಕ್ಕೆ ಬಂದಿಳಿದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್

ಇಂದು, ಪ್ರಧಾನಿ ಸ್ಟಾರ್ಮರ್ ಜೊತೆಗೆ, ಶಿಕ್ಷಣ ವಲಯದಿಂದ ಇದುವರೆಗಿನ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ನಿಯೋಗ. ಯುಕೆಯ ಒಂಬತ್ತು ವಿಶ್ವವಿದ್ಯಾಲಯಗಳು ಈಗ ಭಾರತದಲ್ಲಿ ತಮ್ಮ ಕ್ಯಾಂಪಸ್‌ಗಳನ್ನು ತೆರೆಯಲು ಸಜ್ಜಾಗಿರುವುದು ಬಹಳ ಸಂತೋಷದ ವಿಷಯ ಎಂದು ಪ್ರಧಾನಿ ಮೋದಿ ಹೇಳಿದರು.

ಭಾರತ-ಯುಕೆ ಒಪ್ಪಂದದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಈ ಒಪ್ಪಂದವು ಎರಡೂ ದೇಶಗಳ ನಡುವಿನ ಆಮದು ವೆಚ್ಚವನ್ನು ಕಡಿಮೆ ಮಾಡುತ್ತದೆ, ಯುವಕರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಕೈಗಾರಿಕೆಗಳು ಮತ್ತು ಗ್ರಾಹಕರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ವ್ಯಾಪಾರವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಕೀರ್ ಸ್ಟಾರ್ಮರ್ ಮಾತು

ಒಪ್ಪಂದಕ್ಕೆ ಸಹಿ ಹಾಕಿದ ಕೆಲವೇ ತಿಂಗಳುಗಳಲ್ಲಿ, ಇದುವರೆಗೆ ಬಂದಿರುವ ಅತಿದೊಡ್ಡ ವ್ಯಾಪಾರ ನಿಯೋಗದೊಂದಿಗೆ ನೀವು ಭಾರತಕ್ಕೆ ಭೇಟಿ ನೀಡುತ್ತಿರುವುದು ಭಾರತ-ಯುಕೆ ಪಾಲುದಾರಿಕೆಯಲ್ಲಿ ಹೊಸ ಚೈತನ್ಯದ ಸಂಕೇತವಾಗಿದೆ ಎಂದು ಅವರು ಹೇಳಿದರು.

ಕೀರ್ ಸ್ಟಾರ್ಮರ್ ಮಾತನಾಡಿ, 2028 ರ ವೇಳೆಗೆ ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯಾಗುವ ಗುರಿಯನ್ನು ಹೊಂದಿರುವ ಪ್ರಧಾನಿಯವರ ನಾಯಕತ್ವವನ್ನು ನಾನು ಅಭಿನಂದಿಸಲು ಬಯಸುತ್ತೇನೆ. 2047 ರ ವೇಳೆಗೆ ಅದನ್ನು ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದು ನಿಮ್ಮ ವಿಕಸಿತ ಭಾರತದ ದೃಷ್ಟಿಕೋನವಾಗಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ