AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರ ಮೇಲ್ಛಾವಣಿಗಳನ್ನು ಉತ್ತೇಜಿಸಲು ‘ಪಿಎಂ ಸೂರ್ಯ ಘರ್’ ಯೋಜನೆ ಘೋಷಿಸಿದ ಮೋದಿ

'ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ' ₹ 75,000 ಕೋಟಿಗೂ ಹೆಚ್ಚು ಮೌಲ್ಯದ ಈ ಯೋಜನೆಯು ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಮೂಲಕ ಒಂದು ಕೋಟಿ ಕುಟುಂಬಗಳಿಗೆ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿದೆ. ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿಗಳನ್ನು ಒದಗಿಸಲಾಗುವುದು. ಅದನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ಪ್ರಧಾನ ಮಂತ್ರಿ ಹೇಳಿದರು.

ಸೌರ ಮೇಲ್ಛಾವಣಿಗಳನ್ನು ಉತ್ತೇಜಿಸಲು ‘ಪಿಎಂ ಸೂರ್ಯ ಘರ್’ ಯೋಜನೆ ಘೋಷಿಸಿದ ಮೋದಿ
ಸೌರ ಫಲಕ
ರಶ್ಮಿ ಕಲ್ಲಕಟ್ಟ
|

Updated on: Feb 13, 2024 | 4:39 PM

Share

ದೆಹಲಿ ಫೆಬ್ರುವರಿ 13: ಜನರು ತಮ್ಮ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು (solar rooftops) ಅಳವಡಿಸಲು ಪ್ರೋತ್ಸಾಹಿಸುವ ಯೋಜನೆಯನ್ನು ‘ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ’ (‘PM Surya Ghar: Muft Bijli Yojana) ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಂಗಳವಾರ ಘೋಷಿಸಿದ್ದಾರೆ. ₹ 75,000 ಕೋಟಿಗೂ ಹೆಚ್ಚು ಮೌಲ್ಯದ ಈ ಯೋಜನೆಯು ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಮೂಲಕ ಒಂದು ಕೋಟಿ ಕುಟುಂಬಗಳಿಗೆ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿದೆ. ಸುಸ್ಥಿರ ಅಭಿವೃದ್ಧಿ ಮತ್ತು ಜನರ ಯೋಗಕ್ಷೇಮಕ್ಕಾಗಿ, ನಾವು ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ ಪ್ರಾರಂಭಿಸುತ್ತಿದ್ದೇವೆ. ₹ 75,000 ಕೋಟಿಗೂ ಹೆಚ್ಚು ಹೂಡಿಕೆಯೊಂದಿಗೆ ಈ ಯೋಜನೆಯು ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುವ ಮೂಲಕ 1 ಕೋಟಿ ಮನೆಗಳನ್ನು ಬೆಳಗಿಸುವ ಗುರಿಯನ್ನು ಹೊಂದಿದೆ ಎಂದು ಮೋದಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿಗಳನ್ನು ಒದಗಿಸಲಾಗುವುದು. ಅದನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ಪ್ರಧಾನ ಮಂತ್ರಿ ಹೇಳಿದರು.

“ಜನರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನೀಡಲಾಗುವ ಸಬ್ಸಿಡಿಗಳಿಂದ, ಹೆಚ್ಚು ರಿಯಾಯಿತಿಯ ಬ್ಯಾಂಕ್ ಸಾಲಗಳವರೆಗೆ, ಕೇಂದ್ರ ಸರ್ಕಾರವು ಜನರ ಮೇಲೆ ಯಾವುದೇ ವೆಚ್ಚದ ಹೊರೆಯಾಗದಂತೆ ನೋಡಿಕೊಳ್ಳುತ್ತದೆ” ಎಂದು ಅವರು ಹೇಳಿದರು. ಅದೇ ವೇಳೆ “ಎಲ್ಲಾ ಪಾಲುದಾರರನ್ನು ರಾಷ್ಟ್ರೀಯ ಆನ್‌ಲೈನ್ ಪೋರ್ಟಲ್‌ಗೆ ಸಂಯೋಜಿಸಲಾಗುತ್ತದೆ ಅದು ಮತ್ತಷ್ಟು ಅನುಕೂಲವಾಗುತ್ತದೆ ಎಂದಿದ್ದಾರೆ ಮೋದಿ.

ಈ ಯೋಜನೆಯನ್ನು ತಳಮಟ್ಟದಲ್ಲಿ ಜನಪ್ರಿಯಗೊಳಿಸಲು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್‌ಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಮೇಲ್ಛಾವಣಿ ಸೌರ ಫಲಕಗಳ ಬಳಕೆ ಉತ್ತೇಜಿಸಲು ಪ್ರೋತ್ಸಾಹಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.

ಈ ಯೋಜನೆಯು ಹೆಚ್ಚಿನ ಆದಾಯ, ಕಡಿಮೆ ವಿದ್ಯುತ್ ಬಿಲ್ ಮತ್ತು ಜನರಿಗೆ ಉದ್ಯೋಗ ಸೃಷ್ಟಿಗೆ ಕಾರಣವಾಗುತ್ತದೆ ಎಂದಿದ್ದಾರೆ ಅವರು. ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ https://pmsuryaghar.gov.in ಗೆ ಭೇಟಿ ನೀಡಿ.

ಎಲ್ಲಾ ವಸತಿ ಗ್ರಾಹಕರು, ವಿಶೇಷವಾಗಿ ಯುವಕರು, ಪ್ರಧಾನಮಂತ್ರಿ-ಸೂರ್ಯ ಘರ್: ಮುಫ್ಟ್ ಬಿಜ್ಲಿ ಯೋಜನೆಗೆ https://pmsuryaghar.gov.in ನಲ್ಲಿಅರ್ಜಿ ಸಲ್ಲಿಸುವ ಮೂಲಕ “ನಾವು ಸೌರಶಕ್ತಿ ಮತ್ತು ಸುಸ್ಥಿರ ಪ್ರಗತಿಯನ್ನು ಹೆಚ್ಚಿಸೋಣ ಎಂದು ಮೋದಿ ಹೇಳಿದರು. ಸೌರ ಮೇಲ್ಛಾವಣಿಗಾಗಿ, ಸೌರ ದ್ಯುತಿವಿದ್ಯುಜ್ಜನಕ (PV) ಫಲಕಗಳನ್ನು ಕಟ್ಟಡ, ಮನೆ ಅಥವಾ ವಸತಿ ಆಸ್ತಿಯ ಮೇಲೆ ಇರಿಸಲಾಗುತ್ತದೆ.

ಹಸಿರು ಶಕ್ತಿಗೆ ಕೇಂದ್ರದ ಒತ್ತಾಯ

ಸೌರ ಫಲಕಗಳನ್ನು ಅಳವಡಿಸುವ ಯೋಜನೆಯನ್ನು 2024-25 ರ ಮಧ್ಯಂತರ ಬಜೆಟ್‌ನಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದರು. ಸೋಲಾರ್ ಅಳವಡಿಕೆಗಳನ್ನು ಖರೀದಿಸಲು ಮತ್ತು ಗ್ರಿಡ್‌ಗೆ ಶಕ್ತಿಯನ್ನು ಮರಳಿ ನೀಡಲು ಜನರಿಗೆ ಪ್ರೋತ್ಸಾಹವನ್ನು ನೀಡುವ ಮೇಲ್ಛಾವಣಿಯ ಸೌರ ಉಪಕ್ರಮವು ವಾರ್ಷಿಕವಾಗಿ ₹ 15,000 ಉಳಿತಾಯಕ್ಕೆ ಕಾರಣವಾಗಬಹುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಓದಿ: 1 ಕೋಟಿ ಮನೆಗಳಿಗೆ ಸೌರ ಮೇಲ್ಛಾವಣಿ ಅಳವಡಿಸುವ ಪ್ರಧಾನಮಂತ್ರಿ ‘ಸೂರ್ಯೋದಯ ಯೋಜನೆ’ ಘೋಷಿಸಿದ ಕೇಂದ್ರ 

2024-25ರ ಸೋಲಾರ್ (ಗ್ರಿಡ್) ಗೆ ಮುಂದಿನ ಹಣಕಾಸು ವರ್ಷಕ್ಕೆ ₹ 10,000 ಕೋಟಿಯಷ್ಟು ಹಂಚಿಕೆಯಾಗಿದೆ, 2023-24 ರಲ್ಲಿ ₹ 4,970 ಕೋಟಿ ಹಂಚಿಕೆ ಆಗಿತ್ತು. ಪವನ ವಿದ್ಯುತ್ (ಗ್ರಿಡ್) ಗೆ 2023-24 ರಲ್ಲಿ ₹ 1,214 ಕೋಟಿ ವೆಚ್ಚಕ್ಕೆ ಹೋಲಿಸಿದರೆ ₹ 930 ಕೋಟಿಗಳನ್ನು ನಿಗದಿಪಡಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ