AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನ ಯಾವುದೇ ದೇಶದ ನಾಯಕರು ಆಪರೇಷನ್ ಸಿಂಧೂರ್ ತಡೆಯುವ ಪ್ರಯತ್ನ ಮಾಡಿಲ್ಲ: ಮೋದಿ

ಪಹಲ್ಗಾಮ್​ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್​ಸಿಂಧೂರ್​​ನ್ನು ಯಾವ ದೇಶವೂ ತಡೆಯಲು ಪ್ರಯತ್ನ ಪಟ್ಟಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಸ್ಪಷ್ಟಪಡಿಸಿದ್ದಾರೆ. ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯಲ್ಲಿ ಮಾತನಾಡಿರುವ ಅವರು, ಜಗತ್ತಿನ ಯಾವುದೇ ದೇಶ ಭಾರತವನ್ನು ತಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಗತ್ತಿನ ಯಾವುದೇ ದೇಶದ ನಾಯಕರು ಆಪರೇಷನ್ ಸಿಂಧೂರ್ ತಡೆಯುವ ಪ್ರಯತ್ನ ಮಾಡಿಲ್ಲ: ಮೋದಿ
ನರೇಂದ್ರ ಮೋದಿ Image Credit source: PTI
ನಯನಾ ರಾಜೀವ್
|

Updated on:Jul 29, 2025 | 7:45 PM

Share

ನವದೆಹಲಿ, ಜುಲೈ 29: ಪಹಲ್ಗಾಮ್​ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್​ಸಿಂಧೂರ್​​ನ್ನು ಯಾವ ದೇಶದ ನಾಯಕರೂ ತಡೆಯಲು ಪ್ರಯತ್ನ ಪಟ್ಟಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಸ್ಪಷ್ಟಪಡಿಸಿದ್ದಾರೆ. ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯಲ್ಲಿ ಮಾತನಾಡಿರುವ ಅವರು, ಜಗತ್ತಿನ ಯಾವುದೇ ದೇಶ ಭಾರತವನ್ನು ತಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇವಲ ಮೂರು ದೇಶಗಳು ಮಾತ್ರ ಪಾಕಿಸ್ತಾನದ ಪರವಾಗಿ ಹೇಳಿಕೆ ನೀಡಿವೆ. ದೇಶದ ವೀರರ ಶೌರ್ಯಕ್ಕೆ ಕಾಂಗ್ರೆಸ್ ಬೆಂಬಲ ಸಿಗದಿರುವುದು ದುರದೃಷ್ಟಕರ ಎಂದು ಪ್ರಧಾನಿ ಮೋದಿ ಹೇಳಿದರು. ಪಹಲ್ಗಾಮ್‌ನ ಮುಗ್ಧ ಜನರ ಹತ್ಯೆಯಲ್ಲೂ ಕಾಂಗ್ರೆಸ್ ತನ್ನ ಬೇಳೆಯನ್ನು ಬೇಯಿಸಿಕೊಳ್ಳಲು ಪ್ರಯತ್ನ ಪಟ್ಟಿತ್ತು. 193 ದೇಶಗಳ ಪೈಕಿ ಕೇವಲ 3 ದೇಶಗಳು ಮಾತ್ರ ಪಾಕಿಸ್ತಾನಕ್ಕೆ ಬೆಂಬಲ ನೀಡಿದವು, ಉಳಿದೆಲ್ಲಾ ದೇಶಗಳು ಭಾರತವನ್ನು ಬೆಂಬಲಿಸಿದವು, ಆದರೆ ದುರಾದೃಷ್ಟವಶಾತ್ ಕಾಂಗ್ರೆಸ್​ ಕೂಡ ನಮಗೆ ಬೆಂಬಲ ನೀಡಲಿಲ್ಲ ಎಂದರು.

ಕಾಂಗ್ರೆಸ್ ತನ್ನ ಸಮಸ್ಯೆಗಳಿಗೆ ಪಾಕಿಸ್ತಾನವನ್ನು ಅವಲಂಬಿಸಿದೆ. ಇತ್ತೀಚಿನ ದಿನಗಳಲ್ಲಿ ನಿರೂಪಣೆ ದೊಡ್ಡ ಪಾತ್ರ ವಹಿಸುತ್ತದೆ, ನಿರೂಪಣೆಗಳನ್ನು ರಚಿಸುವ ಮೂಲಕ ಮತ್ತು AI ಬಳಸಿಕೊಂಡು ಸೈನಿಕರ ನೈತಿಕತೆಯನ್ನು ಕುಗ್ಗಿಸಲು ಆಟಗಳನ್ನು ಆಡಲಾಗುತ್ತದೆ. ಸಾರ್ವಜನಿಕರಲ್ಲಿ ಅಪನಂಬಿಕೆಯನ್ನು ಸೃಷ್ಟಿಸಲು ಹಲವು ಪ್ರಯತ್ನಗಳು ನಡೆಯುತ್ತಿವೆ. ದುರದೃಷ್ಟವಶಾತ್, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪಾಕಿಸ್ತಾನದ ಇಂತಹ ಪಿತೂರಿಗಳ ವಕ್ತಾರರಾಗಿ ಮಾರ್ಪಟ್ಟಿವೆ” ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದರು.

ಮತ್ತಷ್ಟು ಓದಿ: ಅತ್ತ ಉಗ್ರರ ಪುರಾವೆ ಕೇಳುತ್ತಿರುವ ಕಾಂಗ್ರೆಸ್ ನಾಯಕ, ಇತ್ತ ಪಾಕ್​​ನಿಂದಲೇ ಉಗ್ರರು ಬಂದಿದ್ದಾರೆ ಎನ್ನುತ್ತಿರುವ ರಾಹುಲ್

ಪಹಲ್ಗಾಮ್​​ನಲ್ಲಿ ಕ್ರೂರ ಘಟನೆ ನಡೆದಿತ್ತು, ಉಗ್ರರು ನಿರ್ದೋಶಿಗಳನ್ನು ಯಾವ ಧರ್ಮ ಎಂದು ಕೇಳಿ ಗುಂಡು ಹಾರಿಸಿದರು. ಇದು ಕ್ರೂರತೆಯ ಪರಾಕಾಷ್ಠೆಯಾಗಿತ್ತು. ಭಾರತದಲ್ಲಿ ಹಿಂಸಾಚಾರ ಸೃಷ್ಟಿಸಲು ಪಾಕಿಸ್ತಾನ ಪ್ರಯತ್ನಿಸಿದ್ದು, ಧಂಗೆ ಎಬ್ಬಿಸುವ ಪ್ರಯತ್ನ ಅದಾಗಿತ್ತು. ಆದರೆ ಅವರ ಎಲ್ಲಾ ಉಪಾಯವನ್ನು ನಮ್ಮ ಸೈನಿಕರು ತಲೆಕೆಳಗು ಮಾಡಿದ್ದಾರೆ.

ಯಾವುದೇ ನ್ಯೂಕ್ಲಿಯರ್ ಬೆದರಿಕೆಗೂ ನಾವು ಬಗ್ಗುವುದಿಲ್ಲ ಎಂಬುದನ್ನು ಅವರಿಗೆ ತೋರಿಸಿದ್ದಾರೆ. ಭಾರತ ಮೇ6 ರ ಮಧ್ಯರಾತ್ರಿ, ಮೇ 7ರ ಬಳಗಿನ ಜಾವ ಪಾಕಿಸ್ತಾನದ ಮೇಲೆ ನಡೆಸಿದ ದಾಳಿಯನ್ನು ಅವರಿಂದ ತಡೆಯಲು ಸಾಧ್ಯವಾಗಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:45 pm, Tue, 29 July 25

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ