AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನ ಯಾವುದೇ ದೇಶದ ನಾಯಕರು ಆಪರೇಷನ್ ಸಿಂಧೂರ್ ತಡೆಯುವ ಪ್ರಯತ್ನ ಮಾಡಿಲ್ಲ: ಮೋದಿ

ಪಹಲ್ಗಾಮ್​ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್​ಸಿಂಧೂರ್​​ನ್ನು ಯಾವ ದೇಶವೂ ತಡೆಯಲು ಪ್ರಯತ್ನ ಪಟ್ಟಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಸ್ಪಷ್ಟಪಡಿಸಿದ್ದಾರೆ. ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯಲ್ಲಿ ಮಾತನಾಡಿರುವ ಅವರು, ಜಗತ್ತಿನ ಯಾವುದೇ ದೇಶ ಭಾರತವನ್ನು ತಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಗತ್ತಿನ ಯಾವುದೇ ದೇಶದ ನಾಯಕರು ಆಪರೇಷನ್ ಸಿಂಧೂರ್ ತಡೆಯುವ ಪ್ರಯತ್ನ ಮಾಡಿಲ್ಲ: ಮೋದಿ
ನರೇಂದ್ರ ಮೋದಿ Image Credit source: PTI
ನಯನಾ ರಾಜೀವ್
|

Updated on:Jul 29, 2025 | 7:45 PM

Share

ನವದೆಹಲಿ, ಜುಲೈ 29: ಪಹಲ್ಗಾಮ್​ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್​ಸಿಂಧೂರ್​​ನ್ನು ಯಾವ ದೇಶದ ನಾಯಕರೂ ತಡೆಯಲು ಪ್ರಯತ್ನ ಪಟ್ಟಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಸ್ಪಷ್ಟಪಡಿಸಿದ್ದಾರೆ. ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯಲ್ಲಿ ಮಾತನಾಡಿರುವ ಅವರು, ಜಗತ್ತಿನ ಯಾವುದೇ ದೇಶ ಭಾರತವನ್ನು ತಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇವಲ ಮೂರು ದೇಶಗಳು ಮಾತ್ರ ಪಾಕಿಸ್ತಾನದ ಪರವಾಗಿ ಹೇಳಿಕೆ ನೀಡಿವೆ. ದೇಶದ ವೀರರ ಶೌರ್ಯಕ್ಕೆ ಕಾಂಗ್ರೆಸ್ ಬೆಂಬಲ ಸಿಗದಿರುವುದು ದುರದೃಷ್ಟಕರ ಎಂದು ಪ್ರಧಾನಿ ಮೋದಿ ಹೇಳಿದರು. ಪಹಲ್ಗಾಮ್‌ನ ಮುಗ್ಧ ಜನರ ಹತ್ಯೆಯಲ್ಲೂ ಕಾಂಗ್ರೆಸ್ ತನ್ನ ಬೇಳೆಯನ್ನು ಬೇಯಿಸಿಕೊಳ್ಳಲು ಪ್ರಯತ್ನ ಪಟ್ಟಿತ್ತು. 193 ದೇಶಗಳ ಪೈಕಿ ಕೇವಲ 3 ದೇಶಗಳು ಮಾತ್ರ ಪಾಕಿಸ್ತಾನಕ್ಕೆ ಬೆಂಬಲ ನೀಡಿದವು, ಉಳಿದೆಲ್ಲಾ ದೇಶಗಳು ಭಾರತವನ್ನು ಬೆಂಬಲಿಸಿದವು, ಆದರೆ ದುರಾದೃಷ್ಟವಶಾತ್ ಕಾಂಗ್ರೆಸ್​ ಕೂಡ ನಮಗೆ ಬೆಂಬಲ ನೀಡಲಿಲ್ಲ ಎಂದರು.

ಕಾಂಗ್ರೆಸ್ ತನ್ನ ಸಮಸ್ಯೆಗಳಿಗೆ ಪಾಕಿಸ್ತಾನವನ್ನು ಅವಲಂಬಿಸಿದೆ. ಇತ್ತೀಚಿನ ದಿನಗಳಲ್ಲಿ ನಿರೂಪಣೆ ದೊಡ್ಡ ಪಾತ್ರ ವಹಿಸುತ್ತದೆ, ನಿರೂಪಣೆಗಳನ್ನು ರಚಿಸುವ ಮೂಲಕ ಮತ್ತು AI ಬಳಸಿಕೊಂಡು ಸೈನಿಕರ ನೈತಿಕತೆಯನ್ನು ಕುಗ್ಗಿಸಲು ಆಟಗಳನ್ನು ಆಡಲಾಗುತ್ತದೆ. ಸಾರ್ವಜನಿಕರಲ್ಲಿ ಅಪನಂಬಿಕೆಯನ್ನು ಸೃಷ್ಟಿಸಲು ಹಲವು ಪ್ರಯತ್ನಗಳು ನಡೆಯುತ್ತಿವೆ. ದುರದೃಷ್ಟವಶಾತ್, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪಾಕಿಸ್ತಾನದ ಇಂತಹ ಪಿತೂರಿಗಳ ವಕ್ತಾರರಾಗಿ ಮಾರ್ಪಟ್ಟಿವೆ” ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದರು.

ಮತ್ತಷ್ಟು ಓದಿ: ಅತ್ತ ಉಗ್ರರ ಪುರಾವೆ ಕೇಳುತ್ತಿರುವ ಕಾಂಗ್ರೆಸ್ ನಾಯಕ, ಇತ್ತ ಪಾಕ್​​ನಿಂದಲೇ ಉಗ್ರರು ಬಂದಿದ್ದಾರೆ ಎನ್ನುತ್ತಿರುವ ರಾಹುಲ್

ಪಹಲ್ಗಾಮ್​​ನಲ್ಲಿ ಕ್ರೂರ ಘಟನೆ ನಡೆದಿತ್ತು, ಉಗ್ರರು ನಿರ್ದೋಶಿಗಳನ್ನು ಯಾವ ಧರ್ಮ ಎಂದು ಕೇಳಿ ಗುಂಡು ಹಾರಿಸಿದರು. ಇದು ಕ್ರೂರತೆಯ ಪರಾಕಾಷ್ಠೆಯಾಗಿತ್ತು. ಭಾರತದಲ್ಲಿ ಹಿಂಸಾಚಾರ ಸೃಷ್ಟಿಸಲು ಪಾಕಿಸ್ತಾನ ಪ್ರಯತ್ನಿಸಿದ್ದು, ಧಂಗೆ ಎಬ್ಬಿಸುವ ಪ್ರಯತ್ನ ಅದಾಗಿತ್ತು. ಆದರೆ ಅವರ ಎಲ್ಲಾ ಉಪಾಯವನ್ನು ನಮ್ಮ ಸೈನಿಕರು ತಲೆಕೆಳಗು ಮಾಡಿದ್ದಾರೆ.

ಯಾವುದೇ ನ್ಯೂಕ್ಲಿಯರ್ ಬೆದರಿಕೆಗೂ ನಾವು ಬಗ್ಗುವುದಿಲ್ಲ ಎಂಬುದನ್ನು ಅವರಿಗೆ ತೋರಿಸಿದ್ದಾರೆ. ಭಾರತ ಮೇ6 ರ ಮಧ್ಯರಾತ್ರಿ, ಮೇ 7ರ ಬಳಗಿನ ಜಾವ ಪಾಕಿಸ್ತಾನದ ಮೇಲೆ ನಡೆಸಿದ ದಾಳಿಯನ್ನು ಅವರಿಂದ ತಡೆಯಲು ಸಾಧ್ಯವಾಗಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:45 pm, Tue, 29 July 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!